ಕ್ರೀಡೆ

ರಣಜಿ ಟ್ರೋಫಿ: ಪಂಜಾಬ್‌ ವಿರುದ್ಧ ಗೆದ್ದು ಶುಭಾರಂಭ ಮಾಡಿದ ಕರ್ನಾಟಕ

ಹುಬ್ಬಳ್ಳಿ: ಇಲ್ಲಿನ ಡಿ.ಆರ್‌ ಬೇಂದ್ರೆ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಂಜಾಬ್‌ ವಿರುದ್ಧ ನಡೆದ ಪಂದ್ಯದಲ್ಲಿ ೭ ವಿಕೆಟ್‌ಗಳ ಗೆಲುವು ದಾಖಲಿಸುವ ಮೂಲಕ ಕರ್ನಾಟಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ೧೫೨ ರನ್‌ ಗಳಿಗೆ ಆಲ್‌ಔಟ್‌ ಆಯಿತು. ಮೊದಲ ಇನ್ನಿಂಗ್ಸ್‌ ಆರಂಭಿಸಿದ ಕರ್ನಾಟಕ ೫೧೪ರನ್‌ ಬಾರಿಸಿ ಡಿಕ್ಲೇರ್‌ ತೆಗೆದುಕೊಂಡು ದೊಡ್ಡ ಮೊತ್ತ ಕಲೆಹಾಕಿ, ಎರಡನೇ ಇನ್ನಿಂಗ್ಸ್‌ ಪಂಜಾಬ್‌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಎರಡನೇ ಇನ್ನಿಂಗ್ಸ್‌ನಲ್ಲಿ ದಿಟ್ಟ ಹೋರಾಟ ನೀಡಿದ ಪಂಜಾಬ್‌ ೪೧೩ ರನ್‌ ಕಲೆಹಾಕಿ ಕರ್ನಾಟಕಕ್ಕೆ ಕೇವಲ ೫೨ ರನ್‌ಗಳ ಗುರಿ ನೀಡಿತು. ಸಾಧಾರಣ ಗುರಿ ಬೆನ್ನತ್ತಿದ ಕರ್ನಾಟಕ ೩ ವಿಕೆಟ್‌ ಕಳೆದುಕೊಂಡು ಗೆದ್ದು ಬೀಗಿತು.

ಪಂಜಾಬ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ ೧೫೨ ರನ್‌ಗಳಿಗೆ ಆಲ್‌ಔಟ್‌ ಆಯಿತು. ಕರ್ನಾಟಕ ಪರ ವಿ ಕೌಶಿಕ್‌ ೪೧ ರನ್‌ ನೀಡಿ ೭ ವಿಕೆಟ್‌ ಪಡೆದು ಮಿಂಚಿದರು. ನೆಹಾಲ್‌ ವಧೇರಾ ೪೪ ರನ್‌ ಗಳಿಸಿದ್ದೇ ಪಂಜಾಬ್‌ ಪರ ವಯಕ್ತಿಕ ಗರಿಷ್ಠ ರನ್‌ ಆಗಿತ್ತು.

ಕರ್ನಾಟಕ ತನ್ನ ಮೊಲದ ಇನ್ನಿಂಗ್ಸ್‌ನಲ್ಲಿ ೮ ವಿಕೆಟ್‌ ಕಳೆದುಕೊಂಡು ೫೧೪ರನ್‌ ಬಾರಿಸಿ ಡಿಕ್ಲೇರ್‌ ಮಾಡಿಕೊಂಡಿತು. ಕರ್ನಾಟಕ ಪರ ದೇವ್‌ದತ್ತ ಪಡಿಕ್ಕಲ್‌ ೨೧೬ ಎಸೆತಗಳಲ್ಲಿ ೨೪ ಬೌಂಡರಿ ಮತ್ತು ೪ ಸಿಕ್ಸರ್‌ ಸೇರಿ ೧೯೩ ರನ್‌ ಬಾರಿಸಿ ಔಟಾದರು. ಇವರಿಗೆ ಸಾಥ್‌ ನೀಡಿದ ಮನೀಶ್‌ ಪಾಂಡೆ ೧೬೫ ಎಸೆತಗಳಲ್ಲಿ ೧೩ ಬೌಂಡರಿ ಮತ್ತು ೩ ಸಿಕ್ಸರ್‌ ಸಹಿತ ೧೧೮ ರನ್‌ಗಳಿದರು. ಶರತ್‌ ೭೬ ರನ್‌ ಬಾರಿಸಿ ೩೬೨ ರನ್‌ಗಳ ಮುನ್ನಡೆ ಕಾಯ್ದುಕೊಂಡಿತು.

ಇನ್ನು ಕರ್ನಾಟಕ ನೀಡಿದ್ದ ೩೬೨ ರನ್‌ಗಳ ಮುನ್ನಡೆಯನ್ನು ಚೇಸ್‌ ಮಾಡಲು ಹೋದ ಪಂಜಾಬ್‌ ಈ ಬಾರಿ ದಿಟ್ಟ ಹೋರಾಟ ನೀಡಿತು. ಪ್ರಭ್‌ ಸಿಮ್ರಾನ್‌ ಸಿಂಗ್‌ ೧೦೦, ಅಭಿಶೇಕ್‌ ಶರ್ಮಾ ೯೧ ರನ್‌ಗಳಿಂದ ೪೧೩ ರನ್‌ ಬಾರಿಸಿ ಸರ್ವಪತನ ಕಂಡಿತು. ಮತ್ತು ಕರ್ನಾಟಕಕ್ಕೆ ೫೧ ರನ್‌ಗಳ ಗುರಿ ನೀಡಿತು. ಕರ್ನಾಟಕ ಪರ ರೋಹಿತ್‌ ಕುಮಾರ್‌ ಮತ್ತು ಶುಭಾಂಗ್‌ ಹೆಗ್ಡೆ ತಲಾ ಮೂರು ವಿಕೆಟ್‌ ಪಡೆದು ಮಿಂಚಿದರು.

ಕರ್ನಾಟಕ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ೩ ವಿಕೆಟ್‌ ಕಳೆದುಕೊಂಡು ೫೨ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಪಂದ್ಯದ ಸಾರಾಂಶ:

ದಿನ 1: ಇನ್ನಿಂಗ್ಸ್ ಬ್ರೇಕ್ – ಪಂಜಾಬ್ – 152/10 (46.5 ಓವರ್‌)
ದಿನ 1: ಸ್ಟಂಪ್ಸ್ – ಕರ್ನಾಟಕ – 142/3 (33.0 ಓವರ್‌) 10 ರನ್ ಟ್ರಯಲ್, ದೇವದತ್ ಪಡಿಕ್ಕಲ್ 80 (80), ಮನೀಶ್ ಪಾಂಡೆ 13 (22)
ದಿನ 2: ಸ್ಟಂಪ್ಸ್ – ಕರ್ನಾಟಕ – 461/6 (123), ವಿಜಯ್ ಕುಮಾರ್ ವೈಶಾಕ್ 15(27), ಶ್ರೀನಿವಾಸ್ ಶರತ್ 55 (158), 309 ರನ್ ಮುನ್ನಡೆ
ದಿನ 3: ಇನ್ನಿಂಗ್ಸ್ ಬ್ರೇಕ್ – ಕರ್ನಾಟಕ – 514/8 ಡಿ (140) 362 ರನ್ ಮುನ್ನಡೆ
ದಿನ 3: ಸ್ಟಂಪ್ಸ್‌ – ಪಂಜಾಬ್ – 152 ಮತ್ತು 238/3 (68) 124 ರನ್‌ಗಳ ಹಿಂದೆ, ಮನ್‌ದೀಪ್ ಸಿಂಗ್ 15 (61), ನೆಹಾಲ್ ವಧೇರಾ 9 (35)
ದಿನ 4: 1 ನೇ ಸೆಷನ್ – ಪಂಜಾಬ್ – 152 & 285/5 (84), ಗೀತಾಂಶ್ ಖೇರಾ 11(13), ಪ್ರೇರಿತ್ ದತ್ತಾ 0(4), 77 ರನ್‌ಗಳಿಂದ ಹಿನ್ನಡೆ
ದಿನ 4: ಇನ್ನಿಂಗ್ಸ್ ಬ್ರೇಕ್ – ಪಂಜಾಬ್ – 152 & 413 ಆಲ್ ಔಟ್ (114.4), 51 ರನ್ ಮುನ್ನಡೆ
ದಿನ 4: 3 ನೇ ಅಧಿವೇಶನ – ಕರ್ನಾಟಕ – 514/8 d & 52/3 (17)
ಫಲಿತಾಂಶ: ಕರ್ನಾಟಕಕ್ಕೆ 7 ವಿಕೆಟ್‌ಗಳ ಜಯ

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

8 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

9 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

10 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

11 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

11 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

12 hours ago