ಕ್ರೀಡೆ

ರಣಜಿ ಟ್ರೋಫಿ: 147 ಎಸೆತಗಳಲ್ಲಿ ತ್ರಿಶತಕ ಸಿಡಿಸಿ ವಿಶ್ವದಾಖಲೆ ಬರೆದ ತನ್ಮಯ್‌

ಹೈದರಾಬಾದ್: ಹೈದರಾಬಾದ್ ತಂಡದ ಆರಂಭಿಕ ಆಟಗಾರ ತನ್ಮಯ್ ಅಗರ್ವಾಲ್ ಶುಕ್ರವಾರ ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ 147 ಎಸೆತಗಳಲ್ಲಿ ತ್ರಿಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಅರುಣಾಚಲ ಪ್ರದೇಶ ವಿರುದ್ಧ ನಡೆದ ಪಂದ್ಯದಲ್ಲಿ ತ್ರಿಶತಕ ದಾಖಲಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ತನ್ಮಯ್‌ ಅಗರ್ವಾಲ್‌ ತಾವೆದುರಿಸಿದ ೧೬೦ ಎಸೆತಗಳಲ್ಲಿ ೩೩ ಬೌಂಡರಿ ಮತ್ತು ೨೧ ಸಿಕ್ಸರ್‌ ಸಹಿತ ಬರೋಬ್ಬರಿ ೩೨೩ ರನ್‌ ಬಾರಿಸಿದ್ದಾರೆ. ಇದರಿಂದ ಹೈದರಾಬಾದ್‌ ದಿನದಾಟದ ಅಂತ್ಯಕ್ಕೆ ೪೮ ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು ೫೨೯ ರನ್‌ ಕಲೆಹಾಕಿದ್ದು, ೩೫೭ ರನ್‌ಗಳ ಮುನ್ನಡೆ ಸಾಧಿಸಿದೆ.

ಈ ಹಿಂದೆ ಅತ್ಯಂತ ವೇಗದ ತ್ರಿಶಕ ದಾಖಲಿಸಿ 2017ರಲ್ಲಿ ಮಾರ್ಕೊ ಮರಾಯಿಸ್ ಸೃಷ್ಟಿಸಿದ್ದ ದಾಖಲೆಯನ್ನು ಪುಡಿಗಟ್ಟಿದ ಅಗಾಲ್ ತಮ್ಮ ಇನಿಂಗ್‌ಸ್ ನಲ್ಲಿ 33 ಬೌಂಡರಿ ಹಾಗೂ 21 ಸಿಕ್ಸರ್ ಸಿಡಿಸಿದರು. ಇದು ಕೂಡಾ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ದಾಖಲೆಯಾಗಿದೆ. ಇದಕ್ಕೂ ಮುನ್ನ ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್ನ ಒಂದು ಇನಿಂಗ್‌ಸ್ ನಲ್ಲಿ ಗರಿಷ್ಠ ಸಿಕ್ಸ‌ರ್ ಸಿಡಿಸಿದ ದಾಖಲೆ ಹೊಂದಿದ್ದರು. ರಣಜಿ ಇತಿಹಾಸದಲ್ಲಿ ಒಂದೇ ದಿನ ತ್ರಿಶತಕ ಪೂರೈಸಿದ ಮೊದಲ ಬ್ಯಾಟ್‌ಸ್ ಮನ್ ಎಂಬ ದಾಖಲೆಗೂ ಪಾತ್ರರಾದರು.

160 ಎಸೆತಗಳಲ್ಲಿ ಅಜೇಯ 323 ರನ್ ಗಳಿಸಿರುವ ಅಗಾಲ್, ಒಂದೇ ದಿನ ಅತ್ಯಂತ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದರು. ನಿಮಿಷಗಳ ಆಧಾರದಲ್ಲಿ ಇದು ಎರಡನೇ ಅತಿವೇಗದ ತ್ರಿಶತಕವಾಗಿದೆ.

ಪ್ರಥಮ ದರ್ಜೆಯಲ್ಲಿ ಈ ಹಿಂದೆಯಿದ್ದ ದಕ್ಷಿಣ ಆಫ್ರಿಕಾದ ಮಾರ್ಕೊ ಮರೈಸ್‌ ಅವರ ಬೋರ್ಡರ್‌-ವೆಸ್ಟರ್ನ್ ಪ್ರಾವಿನ್ಸ್‌ ನಡುವಿನ ಪಂದ್ಯದಲ್ಲಿ 191 ಎಸೆತಗಳಿಂದ 300 ರನ್‌ ಬಾರಿಸಿದ್ದ ದಾಖಲೆಯನ್ನು ಮುರಿಯುವಲ್ಲಿ ತನ್ಮಯ್‌ ಯಶಸ್ವಿಯಾಗಿದ್ದಾರೆ.

andolanait

Recent Posts

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

5 mins ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

2 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

3 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

3 hours ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

4 hours ago