ಕ್ರೀಡೆ

ರಣಜಿ ಟ್ರೋಫಿ: 147 ಎಸೆತಗಳಲ್ಲಿ ತ್ರಿಶತಕ ಸಿಡಿಸಿ ವಿಶ್ವದಾಖಲೆ ಬರೆದ ತನ್ಮಯ್‌

ಹೈದರಾಬಾದ್: ಹೈದರಾಬಾದ್ ತಂಡದ ಆರಂಭಿಕ ಆಟಗಾರ ತನ್ಮಯ್ ಅಗರ್ವಾಲ್ ಶುಕ್ರವಾರ ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ 147 ಎಸೆತಗಳಲ್ಲಿ ತ್ರಿಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಅರುಣಾಚಲ ಪ್ರದೇಶ ವಿರುದ್ಧ ನಡೆದ ಪಂದ್ಯದಲ್ಲಿ ತ್ರಿಶತಕ ದಾಖಲಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ತನ್ಮಯ್‌ ಅಗರ್ವಾಲ್‌ ತಾವೆದುರಿಸಿದ ೧೬೦ ಎಸೆತಗಳಲ್ಲಿ ೩೩ ಬೌಂಡರಿ ಮತ್ತು ೨೧ ಸಿಕ್ಸರ್‌ ಸಹಿತ ಬರೋಬ್ಬರಿ ೩೨೩ ರನ್‌ ಬಾರಿಸಿದ್ದಾರೆ. ಇದರಿಂದ ಹೈದರಾಬಾದ್‌ ದಿನದಾಟದ ಅಂತ್ಯಕ್ಕೆ ೪೮ ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು ೫೨೯ ರನ್‌ ಕಲೆಹಾಕಿದ್ದು, ೩೫೭ ರನ್‌ಗಳ ಮುನ್ನಡೆ ಸಾಧಿಸಿದೆ.

ಈ ಹಿಂದೆ ಅತ್ಯಂತ ವೇಗದ ತ್ರಿಶಕ ದಾಖಲಿಸಿ 2017ರಲ್ಲಿ ಮಾರ್ಕೊ ಮರಾಯಿಸ್ ಸೃಷ್ಟಿಸಿದ್ದ ದಾಖಲೆಯನ್ನು ಪುಡಿಗಟ್ಟಿದ ಅಗಾಲ್ ತಮ್ಮ ಇನಿಂಗ್‌ಸ್ ನಲ್ಲಿ 33 ಬೌಂಡರಿ ಹಾಗೂ 21 ಸಿಕ್ಸರ್ ಸಿಡಿಸಿದರು. ಇದು ಕೂಡಾ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ದಾಖಲೆಯಾಗಿದೆ. ಇದಕ್ಕೂ ಮುನ್ನ ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್ನ ಒಂದು ಇನಿಂಗ್‌ಸ್ ನಲ್ಲಿ ಗರಿಷ್ಠ ಸಿಕ್ಸ‌ರ್ ಸಿಡಿಸಿದ ದಾಖಲೆ ಹೊಂದಿದ್ದರು. ರಣಜಿ ಇತಿಹಾಸದಲ್ಲಿ ಒಂದೇ ದಿನ ತ್ರಿಶತಕ ಪೂರೈಸಿದ ಮೊದಲ ಬ್ಯಾಟ್‌ಸ್ ಮನ್ ಎಂಬ ದಾಖಲೆಗೂ ಪಾತ್ರರಾದರು.

160 ಎಸೆತಗಳಲ್ಲಿ ಅಜೇಯ 323 ರನ್ ಗಳಿಸಿರುವ ಅಗಾಲ್, ಒಂದೇ ದಿನ ಅತ್ಯಂತ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದರು. ನಿಮಿಷಗಳ ಆಧಾರದಲ್ಲಿ ಇದು ಎರಡನೇ ಅತಿವೇಗದ ತ್ರಿಶತಕವಾಗಿದೆ.

ಪ್ರಥಮ ದರ್ಜೆಯಲ್ಲಿ ಈ ಹಿಂದೆಯಿದ್ದ ದಕ್ಷಿಣ ಆಫ್ರಿಕಾದ ಮಾರ್ಕೊ ಮರೈಸ್‌ ಅವರ ಬೋರ್ಡರ್‌-ವೆಸ್ಟರ್ನ್ ಪ್ರಾವಿನ್ಸ್‌ ನಡುವಿನ ಪಂದ್ಯದಲ್ಲಿ 191 ಎಸೆತಗಳಿಂದ 300 ರನ್‌ ಬಾರಿಸಿದ್ದ ದಾಖಲೆಯನ್ನು ಮುರಿಯುವಲ್ಲಿ ತನ್ಮಯ್‌ ಯಶಸ್ವಿಯಾಗಿದ್ದಾರೆ.

andolanait

Recent Posts

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 mins ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

6 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

6 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

6 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

6 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

6 hours ago