ನವದೆಹಲಿ: ದೇಶಿ ಕ್ರಿಕೆಟ್ ‘ರಾಜ’ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯು ಮುಂದಿನ ವರ್ಷದ ಜನವರಿ 5ರಿಂದ ಆರಂಭವಾಗಲಿದೆ.
2023–24ನೇ ಸಾಲಿನ ದೇಶಿ ಕ್ರಿಕೆಟ್ ರುತು ಇದೇ ವರ್ಷದ ಜೂನ್ 28ರಂದು ಆರಂಭವಾಗಲಿದೆ. ಮೊದಲಿಗೆ ದುಲೀಪ್ ಟ್ರೋಫಿ ಟೂರ್ನಿ ನಡೆಯಲಿದೆ. ನಂತರ ದೇವಧರ್ ಟ್ರೋಫಿ ಲಿಸ್ಟ್ ಎ (ಜುಲೈ 24ರಿಂದ ಆಗಸ್ಟ್ 3), ಇರಾನಿ ಕಪ್ (ಅಕ್ಟೋಬರ್ 1 ರಿಂದ 5), ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪುರುಷರ ಟಿ20 ಕ್ರಿಕೆಟ್ (ಅ. 16 ರಿಂದ ನ.6) ಮತ್ತು ವಿಜಯ್ ಹಜಾರೆ ಟ್ರೋಫಿ (ನ 23 ರಿಂದ ಡಿ 15) ನಡೆಯಲಿವೆ.
ಇದರ ನಂತರ 2024ರ ಜನವರಿ 5 ರಿಂದ ಮಾರ್ಚ್ 14ರವರೆಗೆ ಒಟ್ಟು 70 ದಿನಗಳವರೆಗೆ ರಣಜಿ ಟ್ರೋಫಿ ಟೂರ್ನಿ ನಡೆಯಲಿದೆ. ಪ್ಲೇಟ್ ಗುಂಪಿನ ಲೀಗ್ ಪಂದ್ಯಗಳು ಜ. 5 ರಿಂದ ಫೆ. 5ರವರೆಗೆ ಆಯೋಜನೆಗೊಳ್ಳಲಿವೆ. ನಾಕೌಟ್ ಸುತ್ತಿನ ಪಂದ್ಯಗಳು ಫೆ. 9ರಿಂದ 22ರವರೆಗೆ ನಡೆಯುತ್ತವೆ.
ಪ್ಲೇಟ್ ಗುಂಪಿನಲ್ಲಿ ಆರು ತಂಡಗಳೂ ಸ್ಪರ್ಧಿಸಲಿವೆ. ಈ ಪೈಕಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನ ಪಡೆಯುವ ತಂಡಗಳು ಈ ಗುಂಪಿನ ಸೆಮಿಫೈನಲ್ನಲ್ಲಿ ಆಡಲಿವೆ. ಫೈನಲ್ ಪ್ರವೇಶಿಸುವ ಎರಡು ತಂಡಗಳೂ ಎಲೀಟ್ ಗುಂಪಿಗೆ ಬಡ್ತಿ ಹೊಂದಲಿವೆ.
ಎಲೀಟ್ ಗುಂಪಿನಲ್ಲಿ ತಲಾ ಎಂಟು ತಂಡಗಳು ಆಡಲಿವೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಗಳಿಸಿದ ತಂಡಗಳು ಕ್ವಾರ್ಟರ್ಫೈನಲ್ ಪ್ರವೇಶಿಸುತ್ತವೆ. ಕೊನೆಯ ಎರಡು ಸ್ಥಾನ ಪಡೆದ ತಂಡಗಳು ಪಾಯಿಂಟ್ಸ್, ಬೋನಸ್ ಪಾಯಿಂಟ್ಸ್, ಜಯ ಮತ್ತು ರನ್ ಸರಾಸರಿಯ ಆಧಾರದಲ್ಲಿ 2024–25ರ ರುತುವಿನ ಪ್ಲೇಟ್ ಗುಂಪಿಗೆ ಸೇರ್ಪಡೆಯಾಗುತ್ತವೆ.
ಮಹಿಳೆಯರ ರಾಷ್ಟ್ರೀಯ ಸೀನಿಯರ್ ಟಿ20 ಕ್ರಿಕೆಟ್ ಟೂರ್ನಿಯು ಅಕ್ಟೋಬರ್ 19 ರಿಂದ ನವೆಂಬರ್ 9ರವರೆಗೆ ನಡೆಯಲಿದೆ. ಅಂತರ ವಲಯ ಟಿ20 ಟ್ರೋಫಿ ಟೂರ್ನಿಯು ನವೆಂಬರ್ 24ರಿಂದ ಡಿಸೆಂಬರ್ 4ರವರೆಗೆ ಆಯೋಜನೆಗೊಂಡಿದೆ.
ಮಹಿಳೆಯರ ಏಕದಿನ ಟ್ರೋಫಿ ಕ್ರಿಕೆಟ್ ಟೂರ್ನಿಯು ಜನವರಿ 4 ರಿಂದ 26ರವರೆಗೆ ನಡೆಯಲಿದೆ.
ಮುಖ್ಯಾಂಶಗಳು
* ಜೂನ್ 28ರಿಂದ ದೇಶಿ ಕ್ರಿಕೆಟ್ ಆರಂಭ
* ದುಲೀಪ್ ಟ್ರೋಫಿ ಟೂರ್ನಿಯೊಂದಿಗೆ ಶುರುವಾಗಲಿದೆ.
* 2024ರ ಜನವರಿಯಲ್ಲಿ ರಣಜಿ ಟ್ರೋಫಿ ಟೂರ್ನಿ ಆರಂಭ
* ಒಟ್ಟು 70 ದಿನ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್
* ಪ್ಲೇಟ್ ಹಾಗೂ ಎಲೀಟ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.
* ರಣಜಿ ಟೂರ್ನಿಯಲ್ಲಿ ಒಟ್ಟು 38 ತಂಡಗಳು ಸ್ಪರ್ಧಿಸಲಿವೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…