ನವದೆಹಲಿ: ದೇಶಿ ಕ್ರಿಕೆಟ್ ‘ರಾಜ’ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯು ಮುಂದಿನ ವರ್ಷದ ಜನವರಿ 5ರಿಂದ ಆರಂಭವಾಗಲಿದೆ.
2023–24ನೇ ಸಾಲಿನ ದೇಶಿ ಕ್ರಿಕೆಟ್ ರುತು ಇದೇ ವರ್ಷದ ಜೂನ್ 28ರಂದು ಆರಂಭವಾಗಲಿದೆ. ಮೊದಲಿಗೆ ದುಲೀಪ್ ಟ್ರೋಫಿ ಟೂರ್ನಿ ನಡೆಯಲಿದೆ. ನಂತರ ದೇವಧರ್ ಟ್ರೋಫಿ ಲಿಸ್ಟ್ ಎ (ಜುಲೈ 24ರಿಂದ ಆಗಸ್ಟ್ 3), ಇರಾನಿ ಕಪ್ (ಅಕ್ಟೋಬರ್ 1 ರಿಂದ 5), ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪುರುಷರ ಟಿ20 ಕ್ರಿಕೆಟ್ (ಅ. 16 ರಿಂದ ನ.6) ಮತ್ತು ವಿಜಯ್ ಹಜಾರೆ ಟ್ರೋಫಿ (ನ 23 ರಿಂದ ಡಿ 15) ನಡೆಯಲಿವೆ.
ಇದರ ನಂತರ 2024ರ ಜನವರಿ 5 ರಿಂದ ಮಾರ್ಚ್ 14ರವರೆಗೆ ಒಟ್ಟು 70 ದಿನಗಳವರೆಗೆ ರಣಜಿ ಟ್ರೋಫಿ ಟೂರ್ನಿ ನಡೆಯಲಿದೆ. ಪ್ಲೇಟ್ ಗುಂಪಿನ ಲೀಗ್ ಪಂದ್ಯಗಳು ಜ. 5 ರಿಂದ ಫೆ. 5ರವರೆಗೆ ಆಯೋಜನೆಗೊಳ್ಳಲಿವೆ. ನಾಕೌಟ್ ಸುತ್ತಿನ ಪಂದ್ಯಗಳು ಫೆ. 9ರಿಂದ 22ರವರೆಗೆ ನಡೆಯುತ್ತವೆ.
ಪ್ಲೇಟ್ ಗುಂಪಿನಲ್ಲಿ ಆರು ತಂಡಗಳೂ ಸ್ಪರ್ಧಿಸಲಿವೆ. ಈ ಪೈಕಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನ ಪಡೆಯುವ ತಂಡಗಳು ಈ ಗುಂಪಿನ ಸೆಮಿಫೈನಲ್ನಲ್ಲಿ ಆಡಲಿವೆ. ಫೈನಲ್ ಪ್ರವೇಶಿಸುವ ಎರಡು ತಂಡಗಳೂ ಎಲೀಟ್ ಗುಂಪಿಗೆ ಬಡ್ತಿ ಹೊಂದಲಿವೆ.
ಎಲೀಟ್ ಗುಂಪಿನಲ್ಲಿ ತಲಾ ಎಂಟು ತಂಡಗಳು ಆಡಲಿವೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಗಳಿಸಿದ ತಂಡಗಳು ಕ್ವಾರ್ಟರ್ಫೈನಲ್ ಪ್ರವೇಶಿಸುತ್ತವೆ. ಕೊನೆಯ ಎರಡು ಸ್ಥಾನ ಪಡೆದ ತಂಡಗಳು ಪಾಯಿಂಟ್ಸ್, ಬೋನಸ್ ಪಾಯಿಂಟ್ಸ್, ಜಯ ಮತ್ತು ರನ್ ಸರಾಸರಿಯ ಆಧಾರದಲ್ಲಿ 2024–25ರ ರುತುವಿನ ಪ್ಲೇಟ್ ಗುಂಪಿಗೆ ಸೇರ್ಪಡೆಯಾಗುತ್ತವೆ.
ಮಹಿಳೆಯರ ರಾಷ್ಟ್ರೀಯ ಸೀನಿಯರ್ ಟಿ20 ಕ್ರಿಕೆಟ್ ಟೂರ್ನಿಯು ಅಕ್ಟೋಬರ್ 19 ರಿಂದ ನವೆಂಬರ್ 9ರವರೆಗೆ ನಡೆಯಲಿದೆ. ಅಂತರ ವಲಯ ಟಿ20 ಟ್ರೋಫಿ ಟೂರ್ನಿಯು ನವೆಂಬರ್ 24ರಿಂದ ಡಿಸೆಂಬರ್ 4ರವರೆಗೆ ಆಯೋಜನೆಗೊಂಡಿದೆ.
ಮಹಿಳೆಯರ ಏಕದಿನ ಟ್ರೋಫಿ ಕ್ರಿಕೆಟ್ ಟೂರ್ನಿಯು ಜನವರಿ 4 ರಿಂದ 26ರವರೆಗೆ ನಡೆಯಲಿದೆ.
ಮುಖ್ಯಾಂಶಗಳು
* ಜೂನ್ 28ರಿಂದ ದೇಶಿ ಕ್ರಿಕೆಟ್ ಆರಂಭ
* ದುಲೀಪ್ ಟ್ರೋಫಿ ಟೂರ್ನಿಯೊಂದಿಗೆ ಶುರುವಾಗಲಿದೆ.
* 2024ರ ಜನವರಿಯಲ್ಲಿ ರಣಜಿ ಟ್ರೋಫಿ ಟೂರ್ನಿ ಆರಂಭ
* ಒಟ್ಟು 70 ದಿನ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್
* ಪ್ಲೇಟ್ ಹಾಗೂ ಎಲೀಟ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.
* ರಣಜಿ ಟೂರ್ನಿಯಲ್ಲಿ ಒಟ್ಟು 38 ತಂಡಗಳು ಸ್ಪರ್ಧಿಸಲಿವೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…