ಕ್ರೀಡೆ

ಜನವರಿ 5ರಿಂದ ರಣಜಿ ಟ್ರೋಫಿ ಟೂರ್ನಿ

ನವದೆಹಲಿ: ದೇಶಿ ಕ್ರಿಕೆಟ್‌ ‘ರಾಜ’ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯು ಮುಂದಿನ ವರ್ಷದ ಜನವರಿ 5ರಿಂದ ಆರಂಭವಾಗಲಿದೆ.

2023–24ನೇ ಸಾಲಿನ ದೇಶಿ ಕ್ರಿಕೆಟ್‌ ರುತು ಇದೇ ವರ್ಷದ ಜೂನ್ 28ರಂದು ಆರಂಭವಾಗಲಿದೆ. ಮೊದಲಿಗೆ ದುಲೀಪ್ ಟ್ರೋಫಿ ಟೂರ್ನಿ ನಡೆಯಲಿದೆ. ನಂತರ ದೇವಧರ್ ಟ್ರೋಫಿ ಲಿಸ್ಟ್ ಎ (ಜುಲೈ 24ರಿಂದ ಆಗಸ್ಟ್ 3), ಇರಾನಿ ಕಪ್ (ಅಕ್ಟೋಬರ್ 1 ರಿಂದ 5), ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪುರುಷರ ಟಿ20 ಕ್ರಿಕೆಟ್ (ಅ. 16 ರಿಂದ ನ.6) ಮತ್ತು ವಿಜಯ್ ಹಜಾರೆ ಟ್ರೋಫಿ (ನ 23 ರಿಂದ ಡಿ 15) ನಡೆಯಲಿವೆ.

ಇದರ ನಂತರ 2024ರ ಜನವರಿ 5 ರಿಂದ ಮಾರ್ಚ್ 14ರವರೆಗೆ ಒಟ್ಟು 70 ದಿನಗಳವರೆಗೆ ರಣಜಿ ಟ್ರೋಫಿ ಟೂರ್ನಿ ನಡೆಯಲಿದೆ. ಪ್ಲೇಟ್ ಗುಂಪಿನ ಲೀಗ್ ಪಂದ್ಯಗಳು ಜ. 5 ರಿಂದ ಫೆ. 5ರವರೆಗೆ ಆಯೋಜನೆಗೊಳ್ಳಲಿವೆ. ನಾಕೌಟ್ ಸುತ್ತಿನ ಪಂದ್ಯಗಳು ಫೆ. 9ರಿಂದ 22ರವರೆಗೆ ನಡೆಯುತ್ತವೆ.

ಪ್ಲೇಟ್ ಗುಂಪಿನಲ್ಲಿ ಆರು ತಂಡಗಳೂ ಸ್ಪರ್ಧಿಸಲಿವೆ. ಈ ಪೈಕಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನ ಪಡೆಯುವ ತಂಡಗಳು ಈ ಗುಂಪಿನ ಸೆಮಿಫೈನಲ್‌ನಲ್ಲಿ ಆಡಲಿವೆ. ಫೈನಲ್ ಪ್ರವೇಶಿಸುವ ಎರಡು ತಂಡಗಳೂ ಎಲೀಟ್ ಗುಂಪಿಗೆ ಬಡ್ತಿ ಹೊಂದಲಿವೆ.

ಎಲೀಟ್ ಗುಂಪಿನಲ್ಲಿ ತಲಾ ಎಂಟು ತಂಡಗಳು ಆಡಲಿವೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಗಳಿಸಿದ ತಂಡಗಳು ಕ್ವಾರ್ಟರ್‌ಫೈನಲ್‌ ಪ್ರವೇಶಿಸುತ್ತವೆ. ಕೊನೆಯ ಎರಡು ಸ್ಥಾನ ಪಡೆದ ತಂಡಗಳು ಪಾಯಿಂಟ್ಸ್, ಬೋನಸ್ ಪಾಯಿಂಟ್ಸ್, ಜಯ ಮತ್ತು ರನ್‌ ಸರಾಸರಿಯ ಆಧಾರದಲ್ಲಿ 2024–25ರ ರುತುವಿನ ಪ್ಲೇಟ್ ಗುಂಪಿಗೆ ಸೇರ್ಪಡೆಯಾಗುತ್ತವೆ.

ಮಹಿಳೆಯರ ರಾಷ್ಟ್ರೀಯ ಸೀನಿಯರ್ ಟಿ20 ಕ್ರಿಕೆಟ್ ಟೂರ್ನಿಯು ಅಕ್ಟೋಬರ್ 19 ರಿಂದ ನವೆಂಬರ್ 9ರವರೆಗೆ ನಡೆಯಲಿದೆ. ಅಂತರ ವಲಯ ಟಿ20 ಟ್ರೋಫಿ ಟೂರ್ನಿಯು ನವೆಂಬರ್ 24ರಿಂದ ಡಿಸೆಂಬರ್ 4ರವರೆಗೆ ಆಯೋಜನೆಗೊಂಡಿದೆ.

ಮಹಿಳೆಯರ ಏಕದಿನ ಟ್ರೋಫಿ ಕ್ರಿಕೆಟ್ ಟೂರ್ನಿಯು ಜನವರಿ 4 ರಿಂದ 26ರವರೆಗೆ ನಡೆಯಲಿದೆ.

ಮುಖ್ಯಾಂಶಗಳು

* ಜೂನ್ 28ರಿಂದ ದೇಶಿ ಕ್ರಿಕೆಟ್ ಆರಂಭ

* ದುಲೀಪ್ ಟ್ರೋಫಿ ಟೂರ್ನಿಯೊಂದಿಗೆ ಶುರುವಾಗಲಿದೆ.

* 2024ರ ಜನವರಿಯಲ್ಲಿ ರಣಜಿ ಟ್ರೋಫಿ ಟೂರ್ನಿ ಆರಂಭ

* ಒಟ್ಟು 70 ದಿನ ನಡೆಯಲಿರುವ ರಣಜಿ ಟ್ರೋಫಿ ಕ್ರಿಕೆಟ್

* ಪ್ಲೇಟ್ ಹಾಗೂ ಎಲೀಟ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.

* ರಣಜಿ ಟೂರ್ನಿಯಲ್ಲಿ ಒಟ್ಟು 38 ತಂಡಗಳು ಸ್ಪರ್ಧಿಸಲಿವೆ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

8 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

21 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

23 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

1 day ago