ಕ್ರೀಡೆ

ರಶೀದ್ ಖಾನ್ ಗೆ ರೂ. 10 ಕೋಟಿ ಬಹುಮಾನ ಸುದ್ದಿ ಸುಳ್ಳು: ರತನ್ ಟಾಟಾ ಸ್ಪಷ್ಟನೆ

ಮುಂಬೈ: ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ  ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬಂತಹ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಕುರಿತು ಇಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರತನ್ ಟಾಟಾ, ಯಾವುದೇ ಆಟಗಾರರಿಗೆ ದಂಡ ಅಥವಾ ಬಹುಮಾನದ ಬಗ್ಗೆ ಐಸಿಸಿ ಅಥವಾ ಯಾವುದೇ ಕ್ರಿಕೆಟ್ ಪ್ಯಾಕಲ್ಟಿಗೆ ಯಾವುದೇ ಸಲಹೆಗಳನ್ನು ನೀಡಿಲ್ಲ. ನನಗೂ ಕ್ರಿಕೆಟ್‌ಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬರದ ಹೊರತು ಅಂತಹ ವಾಟ್ಸಾಪ್ ಫಾರ್ವರ್ಡ್‌ಗಳು ಮತ್ತು ವೀಡಿಯೊಗಳನ್ನು ದಯವಿಟ್ಟು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

https://x.com/RNTata2000/status/1718854586734371181?s=20

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

3 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

7 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

8 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

8 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

13 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

13 hours ago