ಕ್ರೀಡೆ

ಕನ್ನಡಿಗ ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್.!

ಫೋರ್ಟ್ ಆಫ್ ಸ್ಪೇನ್ (ವೆಸ್ಟ್ ಇಂಡೀಸ್): ಕೆರಿಬಿಯನ್ ನಾಡಿನಲ್ಲಿ ತಮ್ಮ ಸ್ಪಿನ್ ಮೋಡಿ ಮುಂದುವರಿಸಿರುವ ಭಾರತ ತಂಡದ ಆಲ್‌ರೌಂಡರ್‌ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ನಾಲ್ಕನೇ ದಿನ ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ.

ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಾಲ್ಕನೇ ದಿನದಾಟದಲ್ಲಿ ವಿಂಡೀಸ್‌ ನಾಯಕ ಕ್ರೇಗ್‌ ಬ್ರಾಥ್‌ವೆಟ್ ಹಾಗೂ ಡೆಬ್ಯೂಟೆಂಟ್‌ ಕಿರ್ಕ್‌ ಮೆಕೆಂಜಿ ವಿಕೆಟ್‌ ಕಬಳಿಸಿದ ಅಶ್ವಿನ್‌, ಈ ದೊಡ್ಡ ಸಾಧನೆ ಮಾಡಿದ್ದಾರೆ.

ದೀರ್ಘ ಸ್ವರೂಪದ ಕ್ರಿಕೆಟ್‌ನಲ್ಲಿ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ವೆಸ್ಟ್ ಇಂಡೀಸ್ ವಿರುದ್ಧ ಆಡಿರುವ 17 ಟೆಸ್ಟ್ ಪಂದ್ಯಗಳಿಂದ 75 ವಿಕೆಟ್ ಪಡೆದು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ದಾಖಲೆಯನ್ನು ಈ ಹಿಂದೆ ಬರೆದಿದ್ದರು. ಆದರೆ, ಇದೀಗ ತಮಿಳುನಾಡು ಮೂಲದ ಆಫ್ ಸ್ಪಿನ್ನರ್ ಆರ್ ಅಶ್ವಿನ್ 13 ಪಂದ್ಯಗಳಲ್ಲಿಯೇ 75 ವಿಕೆಟ್ ಕಬಳಿಸಿ ಅನಿಲ್‌ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ. ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ 89 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ.

ಭಾರತ vs ವೆಸ್ಟ್ ಇಂಡೀಸ್ ಟೆಸ್ಟ್‌ ಸರಣಿಯಲ್ಲಿ ಹೆಚ್ಚು ವಿಕೆಟ್ ಪಡೆದವರು

1. ಕಪಿಲ್ ದೇವ್-89 ವಿಕೆಟ್
2. ರವಿಚಂದ್ರನ್ ಅಶ್ವಿನ್-75 ವಿಕೆಟ್
3. ಅನಿಲ್ ಕುಂಬ್ಳೆ-74 ವಿಕೆಟ್
4. ಎಸ್.ವೆಂಕಟರಾಘವನ್- 68 ವಿಕೆಟ್
5. ಬಿ.ಎಸ್.ಚಂದ್ರಶೇಖರ್-65 ವಿಕೆಟ್

ಹರ್ಭಜನ್ ಸಿಂಗ್ ದಾಖಲೆ ಮುರಿದ ಆರ್ ಅಶ್ವಿನ್

ಅನಿಲ್ ಕುಂಬ್ಳೆ ನಂತರ ಭಾರತ ತಂಡದಲ್ಲಿ ಸ್ಪಿನ್ ಬಲ ಹೆಚ್ಚಿಸಿರುವ ರವಿಚಂದ್ರನ್ ಅಶ್ವಿನ್ ವೆಸ್ಟ್ ಇಂಡೀಸ್ ಸರಣಿಯಲ್ಲಿ 15 ವಿಕೆಟ್ ಪಡೆದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎಂಬ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ 956 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದರೆ, ರವಿಚಂದ್ರನ್ ಅಶ್ವಿನ್ (712), ಟರ್ಬನೇಟರ್ ಹರ್ಭಜನ್ ಸಿಂಗ್ (711), ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ (687) ಹಾಗೂ ಮಾಜಿ ವೇಗಿ ಜಹೀರ್ ಖಾನ್ (610) ಅಗ್ರ 5ರಲ್ಲಿ ಸ್ಥಾನ ಪಡೆದಿದ್ದಾರೆ.

ಗೆಲುವಿನ ಸನಿಹದಲ್ಲಿ ಟೀಮ್‌ ಇಂಡಿಯಾ

ವೆಸ್ಟ್ ಇಂಡೀಸ್ ಟೆಸ್ಟ್‌ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಭಾರತ ತಂಡ, ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 141 ರನ್ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಇದೀಗ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಲು ರೋಹಿತ್ ಶರ್ಮಾ ಪಡೆಗೆ ಇನ್ನೂ 8 ವಿಕೆಟ್ ಅಗತ್ಯವಿದೆ. ಈ ಪಂದ್ಯದಲ್ಲಿ ಭಾರತ ಗೆಲ್ಲಬೇಕೆಂದರೆ ಆರ್ ಅಶ್ವಿನ್ ನಿರ್ಣಾಯಕ ಪಾತ್ರ ವಹಿಸಬೇಕಾಗುತ್ತದೆ. 365 ಗುರಿ ಹಿಂಬಾಲಿಸಿರುವ ವೆಸ್ಟ್ ಇಂಡೀಸ್ 4ನೇ ದಿನದಾಟಕ್ಕೆ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿದ್ದು, ಗೆಲುವಿಗೆ ಇನ್ನೂ 289 ರನ್ ಅಗತ್ಯವಿದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago