ಕ್ರೀಡೆ

ಕನ್ನಡಿಗ ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್.!

ಫೋರ್ಟ್ ಆಫ್ ಸ್ಪೇನ್ (ವೆಸ್ಟ್ ಇಂಡೀಸ್): ಕೆರಿಬಿಯನ್ ನಾಡಿನಲ್ಲಿ ತಮ್ಮ ಸ್ಪಿನ್ ಮೋಡಿ ಮುಂದುವರಿಸಿರುವ ಭಾರತ ತಂಡದ ಆಲ್‌ರೌಂಡರ್‌ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ನಾಲ್ಕನೇ ದಿನ ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ.

ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಾಲ್ಕನೇ ದಿನದಾಟದಲ್ಲಿ ವಿಂಡೀಸ್‌ ನಾಯಕ ಕ್ರೇಗ್‌ ಬ್ರಾಥ್‌ವೆಟ್ ಹಾಗೂ ಡೆಬ್ಯೂಟೆಂಟ್‌ ಕಿರ್ಕ್‌ ಮೆಕೆಂಜಿ ವಿಕೆಟ್‌ ಕಬಳಿಸಿದ ಅಶ್ವಿನ್‌, ಈ ದೊಡ್ಡ ಸಾಧನೆ ಮಾಡಿದ್ದಾರೆ.

ದೀರ್ಘ ಸ್ವರೂಪದ ಕ್ರಿಕೆಟ್‌ನಲ್ಲಿ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ವೆಸ್ಟ್ ಇಂಡೀಸ್ ವಿರುದ್ಧ ಆಡಿರುವ 17 ಟೆಸ್ಟ್ ಪಂದ್ಯಗಳಿಂದ 75 ವಿಕೆಟ್ ಪಡೆದು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ದಾಖಲೆಯನ್ನು ಈ ಹಿಂದೆ ಬರೆದಿದ್ದರು. ಆದರೆ, ಇದೀಗ ತಮಿಳುನಾಡು ಮೂಲದ ಆಫ್ ಸ್ಪಿನ್ನರ್ ಆರ್ ಅಶ್ವಿನ್ 13 ಪಂದ್ಯಗಳಲ್ಲಿಯೇ 75 ವಿಕೆಟ್ ಕಬಳಿಸಿ ಅನಿಲ್‌ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ. ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ 89 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ.

ಭಾರತ vs ವೆಸ್ಟ್ ಇಂಡೀಸ್ ಟೆಸ್ಟ್‌ ಸರಣಿಯಲ್ಲಿ ಹೆಚ್ಚು ವಿಕೆಟ್ ಪಡೆದವರು

1. ಕಪಿಲ್ ದೇವ್-89 ವಿಕೆಟ್
2. ರವಿಚಂದ್ರನ್ ಅಶ್ವಿನ್-75 ವಿಕೆಟ್
3. ಅನಿಲ್ ಕುಂಬ್ಳೆ-74 ವಿಕೆಟ್
4. ಎಸ್.ವೆಂಕಟರಾಘವನ್- 68 ವಿಕೆಟ್
5. ಬಿ.ಎಸ್.ಚಂದ್ರಶೇಖರ್-65 ವಿಕೆಟ್

ಹರ್ಭಜನ್ ಸಿಂಗ್ ದಾಖಲೆ ಮುರಿದ ಆರ್ ಅಶ್ವಿನ್

ಅನಿಲ್ ಕುಂಬ್ಳೆ ನಂತರ ಭಾರತ ತಂಡದಲ್ಲಿ ಸ್ಪಿನ್ ಬಲ ಹೆಚ್ಚಿಸಿರುವ ರವಿಚಂದ್ರನ್ ಅಶ್ವಿನ್ ವೆಸ್ಟ್ ಇಂಡೀಸ್ ಸರಣಿಯಲ್ಲಿ 15 ವಿಕೆಟ್ ಪಡೆದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎಂಬ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ 956 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದರೆ, ರವಿಚಂದ್ರನ್ ಅಶ್ವಿನ್ (712), ಟರ್ಬನೇಟರ್ ಹರ್ಭಜನ್ ಸಿಂಗ್ (711), ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ (687) ಹಾಗೂ ಮಾಜಿ ವೇಗಿ ಜಹೀರ್ ಖಾನ್ (610) ಅಗ್ರ 5ರಲ್ಲಿ ಸ್ಥಾನ ಪಡೆದಿದ್ದಾರೆ.

ಗೆಲುವಿನ ಸನಿಹದಲ್ಲಿ ಟೀಮ್‌ ಇಂಡಿಯಾ

ವೆಸ್ಟ್ ಇಂಡೀಸ್ ಟೆಸ್ಟ್‌ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಭಾರತ ತಂಡ, ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 141 ರನ್ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ. ಇದೀಗ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಲು ರೋಹಿತ್ ಶರ್ಮಾ ಪಡೆಗೆ ಇನ್ನೂ 8 ವಿಕೆಟ್ ಅಗತ್ಯವಿದೆ. ಈ ಪಂದ್ಯದಲ್ಲಿ ಭಾರತ ಗೆಲ್ಲಬೇಕೆಂದರೆ ಆರ್ ಅಶ್ವಿನ್ ನಿರ್ಣಾಯಕ ಪಾತ್ರ ವಹಿಸಬೇಕಾಗುತ್ತದೆ. 365 ಗುರಿ ಹಿಂಬಾಲಿಸಿರುವ ವೆಸ್ಟ್ ಇಂಡೀಸ್ 4ನೇ ದಿನದಾಟಕ್ಕೆ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿದ್ದು, ಗೆಲುವಿಗೆ ಇನ್ನೂ 289 ರನ್ ಅಗತ್ಯವಿದೆ.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

8 mins ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

46 mins ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

53 mins ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

57 mins ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

1 hour ago