ಕ್ರೀಡೆ

IPL 2024: ಪಂಜಾಬ್‌ ಕಿಂಗ್ಸ್‌ ವಿರುದ್ಧ ಗೆದ್ದ ಚಾಲೆಂಜರ್ಸ್‌: ಆರ್‌ಸಿಬಿ ಪ್ಲೇ ಆಫ್‌ ಕನಸು ಇನ್ನೂ ಜೀವಂತ!

ಧರ್ಮಶಾಲಾ: ಇಲ್ಲಿನ ಹಿಮಾಚಲ್‌ ಪ್ರದೇಶ್‌ ಕ್ರಿಕೆಟ್‌ ಅಸೋಷಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 60 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಈ ಸೀಸನ್‌ನಲ್ಲಿ ಆರ್‌ಸಿಬಿ ಪ್ಲೇ ಆಫ್‌ಗೆ ಹೋಗುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಬಲದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 241 ರನ್‌ ಕಲೆ ಹಾಕಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ 17 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ ಕೇವಲ 181 ರನ್‌ ಗಳಿಸಿ ತವರಿನಂಗಳದಲ್ಲಿ 60 ರನ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು.

ಆರ್‌ಸಿಬಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ಕನ್ನಡಿಗ ವಿದ್ವತ್‌ ಕಾವೇರಪ್ಪ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಿದರು. ನಾಯಕ ಫಾಫ್‌ 9(7) ಅವರನ್ನು ಔಟ್‌ ಮಾಡುವ ಮೂಲಕ ಐಪಿಎಲ್‌ನಲ್ಲಿ ಪಾದಾರ್ಪಣ ಪಂದ್ಯದಲ್ಲಿ ಮೊದಲ ವಿಕೆಟ್‌ ಕಬಳಿಸಿದರು. ಬಳಿಕ ಬಂದ ವಿಲ್‌ ಜಾಕ್‌ 12(7) ಕೂಡಾ ಕಾವೇರಪ್ಪಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಉಳಿದಂತೆ ರಜತ್‌ ಪಟಿದರ್‌ 55(23), ಕ್ಯಾಮರೋನ್‌ ಗ್ರೀನ್‌ 46(27), ದಿನೇಶ್‌ ಕಾರ್ತಿಕ್‌ 18(7) ಲೋಮರೋರ್‌ ಶೂನ್ಯ, ಸ್ವಪ್ನಿಲ್‌ ಓಟಾಗದೇ 1(1) ರನ್‌ ಗಳಿಸಿದರು.

ಇತ್ತ ಆರಂಭದಿಂದಲೇ ಅಟ್ಯಾಕಿಂಗ್‌ ಆಟ ಆಡಿದ ವಿರಾಟ್‌ ಕೊಹ್ಲಿ 47 ಎಸೆತ ಎದುರಿಸಿ 7 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 92 ರನ್‌ ಕಲೆಹಾಕಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಸಹಕರಿಸಿದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ 3, ವಿದ್ವತ್‌ ಕಾವೇರಪ್ಪ 2, ನಾಯಕ ಕರನ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂಜಾಬ್‌ ಇನ್ನಿಂಗ್ಸ್‌: ಆರ್‌ಸಿಬಿ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ಗೆ ಬ್ಯಾಟರ್‌ಗಳು ಕೈಕೊಟ್ಟರು. ಪಂಜಾಬ್‌ ಪರ ರಿಲ್ಲಿ ರೂಸೋ 61 (27 ಎಸೆತ, 9ಬೌಂಡರಿ 3ಸಿಕ್ಸರ್‌) ಹಾಗೂ ಶಶಾಂಕ್‌ ಸಿಂಗ್‌ 37(19) ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಉಳಿದಂತೆ ಪಂಜಾಬ್‌ ಪರ ಪ್ರಭ್‌ಸಿಮ್ರಾನ್‌ 6(4), ಬೇರ್‌ಸ್ಟೋ 27(16), ಜಿತೇಶ್‌ ಶರ್ಮಾ 5(4), ನಾಯಕ ಕರನ್‌ 22(16), ಅಶುತೋಷ್‌ ಶರ್ಮಾ 8(5), ಹರ್ಷಲ್‌ ಪಟೇಲ್‌ ಶೂನ್ಯ, ರಾಹುಲ್‌ ಚಾಹರ್‌ 5(5) ಅರ್ಷ್‌ದೀಪ್‌ ಸಿಂಗ್‌ 4(3) ರನ್‌ಗಳಿಸಿ ತಂಡದ ಸೋಲಿಗೆ ಕಾರಣರಾದರು.

ಆರ್ಸಿಬಿ ಪರ ಮೊಹಮ್ಮದ್‌ ಸಿರಾಜ್‌ 3, ಸ್ವಪ್ನಿಲ್‌, ಫರ್ಗೂಸನ್‌ ಹಾಗೂ ಕರಣ್‌ ಶರ್ಮಾ ತಲಾ ಎರಡೆರೆಡು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

6 mins ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

15 mins ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

18 mins ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

26 mins ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

51 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

55 mins ago