ಕ್ರೀಡೆ

IPL 2024: ಪಂಜಾಬ್‌ ಕಿಂಗ್ಸ್‌ ವಿರುದ್ಧ ಗೆದ್ದ ಚಾಲೆಂಜರ್ಸ್‌: ಆರ್‌ಸಿಬಿ ಪ್ಲೇ ಆಫ್‌ ಕನಸು ಇನ್ನೂ ಜೀವಂತ!

ಧರ್ಮಶಾಲಾ: ಇಲ್ಲಿನ ಹಿಮಾಚಲ್‌ ಪ್ರದೇಶ್‌ ಕ್ರಿಕೆಟ್‌ ಅಸೋಷಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 60 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಈ ಸೀಸನ್‌ನಲ್ಲಿ ಆರ್‌ಸಿಬಿ ಪ್ಲೇ ಆಫ್‌ಗೆ ಹೋಗುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಬಲದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 241 ರನ್‌ ಕಲೆ ಹಾಕಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ 17 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ ಕೇವಲ 181 ರನ್‌ ಗಳಿಸಿ ತವರಿನಂಗಳದಲ್ಲಿ 60 ರನ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು.

ಆರ್‌ಸಿಬಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ಕನ್ನಡಿಗ ವಿದ್ವತ್‌ ಕಾವೇರಪ್ಪ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಿದರು. ನಾಯಕ ಫಾಫ್‌ 9(7) ಅವರನ್ನು ಔಟ್‌ ಮಾಡುವ ಮೂಲಕ ಐಪಿಎಲ್‌ನಲ್ಲಿ ಪಾದಾರ್ಪಣ ಪಂದ್ಯದಲ್ಲಿ ಮೊದಲ ವಿಕೆಟ್‌ ಕಬಳಿಸಿದರು. ಬಳಿಕ ಬಂದ ವಿಲ್‌ ಜಾಕ್‌ 12(7) ಕೂಡಾ ಕಾವೇರಪ್ಪಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಉಳಿದಂತೆ ರಜತ್‌ ಪಟಿದರ್‌ 55(23), ಕ್ಯಾಮರೋನ್‌ ಗ್ರೀನ್‌ 46(27), ದಿನೇಶ್‌ ಕಾರ್ತಿಕ್‌ 18(7) ಲೋಮರೋರ್‌ ಶೂನ್ಯ, ಸ್ವಪ್ನಿಲ್‌ ಓಟಾಗದೇ 1(1) ರನ್‌ ಗಳಿಸಿದರು.

ಇತ್ತ ಆರಂಭದಿಂದಲೇ ಅಟ್ಯಾಕಿಂಗ್‌ ಆಟ ಆಡಿದ ವಿರಾಟ್‌ ಕೊಹ್ಲಿ 47 ಎಸೆತ ಎದುರಿಸಿ 7 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 92 ರನ್‌ ಕಲೆಹಾಕಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಸಹಕರಿಸಿದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ 3, ವಿದ್ವತ್‌ ಕಾವೇರಪ್ಪ 2, ನಾಯಕ ಕರನ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂಜಾಬ್‌ ಇನ್ನಿಂಗ್ಸ್‌: ಆರ್‌ಸಿಬಿ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ಗೆ ಬ್ಯಾಟರ್‌ಗಳು ಕೈಕೊಟ್ಟರು. ಪಂಜಾಬ್‌ ಪರ ರಿಲ್ಲಿ ರೂಸೋ 61 (27 ಎಸೆತ, 9ಬೌಂಡರಿ 3ಸಿಕ್ಸರ್‌) ಹಾಗೂ ಶಶಾಂಕ್‌ ಸಿಂಗ್‌ 37(19) ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಉಳಿದಂತೆ ಪಂಜಾಬ್‌ ಪರ ಪ್ರಭ್‌ಸಿಮ್ರಾನ್‌ 6(4), ಬೇರ್‌ಸ್ಟೋ 27(16), ಜಿತೇಶ್‌ ಶರ್ಮಾ 5(4), ನಾಯಕ ಕರನ್‌ 22(16), ಅಶುತೋಷ್‌ ಶರ್ಮಾ 8(5), ಹರ್ಷಲ್‌ ಪಟೇಲ್‌ ಶೂನ್ಯ, ರಾಹುಲ್‌ ಚಾಹರ್‌ 5(5) ಅರ್ಷ್‌ದೀಪ್‌ ಸಿಂಗ್‌ 4(3) ರನ್‌ಗಳಿಸಿ ತಂಡದ ಸೋಲಿಗೆ ಕಾರಣರಾದರು.

ಆರ್ಸಿಬಿ ಪರ ಮೊಹಮ್ಮದ್‌ ಸಿರಾಜ್‌ 3, ಸ್ವಪ್ನಿಲ್‌, ಫರ್ಗೂಸನ್‌ ಹಾಗೂ ಕರಣ್‌ ಶರ್ಮಾ ತಲಾ ಎರಡೆರೆಡು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

57 mins ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

1 hour ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

4 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

4 hours ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

4 hours ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

4 hours ago