ಕ್ರೀಡೆ

IPL 2024: ಪಂಜಾಬ್‌ ಕಿಂಗ್ಸ್‌ ವಿರುದ್ಧ ಗೆದ್ದ ಚಾಲೆಂಜರ್ಸ್‌: ಆರ್‌ಸಿಬಿ ಪ್ಲೇ ಆಫ್‌ ಕನಸು ಇನ್ನೂ ಜೀವಂತ!

ಧರ್ಮಶಾಲಾ: ಇಲ್ಲಿನ ಹಿಮಾಚಲ್‌ ಪ್ರದೇಶ್‌ ಕ್ರಿಕೆಟ್‌ ಅಸೋಷಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 60 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಈ ಸೀಸನ್‌ನಲ್ಲಿ ಆರ್‌ಸಿಬಿ ಪ್ಲೇ ಆಫ್‌ಗೆ ಹೋಗುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಬಲದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 241 ರನ್‌ ಕಲೆ ಹಾಕಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ 17 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ ಕೇವಲ 181 ರನ್‌ ಗಳಿಸಿ ತವರಿನಂಗಳದಲ್ಲಿ 60 ರನ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು.

ಆರ್‌ಸಿಬಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ಕನ್ನಡಿಗ ವಿದ್ವತ್‌ ಕಾವೇರಪ್ಪ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಿದರು. ನಾಯಕ ಫಾಫ್‌ 9(7) ಅವರನ್ನು ಔಟ್‌ ಮಾಡುವ ಮೂಲಕ ಐಪಿಎಲ್‌ನಲ್ಲಿ ಪಾದಾರ್ಪಣ ಪಂದ್ಯದಲ್ಲಿ ಮೊದಲ ವಿಕೆಟ್‌ ಕಬಳಿಸಿದರು. ಬಳಿಕ ಬಂದ ವಿಲ್‌ ಜಾಕ್‌ 12(7) ಕೂಡಾ ಕಾವೇರಪ್ಪಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಉಳಿದಂತೆ ರಜತ್‌ ಪಟಿದರ್‌ 55(23), ಕ್ಯಾಮರೋನ್‌ ಗ್ರೀನ್‌ 46(27), ದಿನೇಶ್‌ ಕಾರ್ತಿಕ್‌ 18(7) ಲೋಮರೋರ್‌ ಶೂನ್ಯ, ಸ್ವಪ್ನಿಲ್‌ ಓಟಾಗದೇ 1(1) ರನ್‌ ಗಳಿಸಿದರು.

ಇತ್ತ ಆರಂಭದಿಂದಲೇ ಅಟ್ಯಾಕಿಂಗ್‌ ಆಟ ಆಡಿದ ವಿರಾಟ್‌ ಕೊಹ್ಲಿ 47 ಎಸೆತ ಎದುರಿಸಿ 7 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 92 ರನ್‌ ಕಲೆಹಾಕಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಸಹಕರಿಸಿದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ 3, ವಿದ್ವತ್‌ ಕಾವೇರಪ್ಪ 2, ನಾಯಕ ಕರನ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂಜಾಬ್‌ ಇನ್ನಿಂಗ್ಸ್‌: ಆರ್‌ಸಿಬಿ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ಗೆ ಬ್ಯಾಟರ್‌ಗಳು ಕೈಕೊಟ್ಟರು. ಪಂಜಾಬ್‌ ಪರ ರಿಲ್ಲಿ ರೂಸೋ 61 (27 ಎಸೆತ, 9ಬೌಂಡರಿ 3ಸಿಕ್ಸರ್‌) ಹಾಗೂ ಶಶಾಂಕ್‌ ಸಿಂಗ್‌ 37(19) ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಉಳಿದಂತೆ ಪಂಜಾಬ್‌ ಪರ ಪ್ರಭ್‌ಸಿಮ್ರಾನ್‌ 6(4), ಬೇರ್‌ಸ್ಟೋ 27(16), ಜಿತೇಶ್‌ ಶರ್ಮಾ 5(4), ನಾಯಕ ಕರನ್‌ 22(16), ಅಶುತೋಷ್‌ ಶರ್ಮಾ 8(5), ಹರ್ಷಲ್‌ ಪಟೇಲ್‌ ಶೂನ್ಯ, ರಾಹುಲ್‌ ಚಾಹರ್‌ 5(5) ಅರ್ಷ್‌ದೀಪ್‌ ಸಿಂಗ್‌ 4(3) ರನ್‌ಗಳಿಸಿ ತಂಡದ ಸೋಲಿಗೆ ಕಾರಣರಾದರು.

ಆರ್ಸಿಬಿ ಪರ ಮೊಹಮ್ಮದ್‌ ಸಿರಾಜ್‌ 3, ಸ್ವಪ್ನಿಲ್‌, ಫರ್ಗೂಸನ್‌ ಹಾಗೂ ಕರಣ್‌ ಶರ್ಮಾ ತಲಾ ಎರಡೆರೆಡು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

26 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

30 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

37 mins ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

43 mins ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

46 mins ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

51 mins ago