ಕ್ರೀಡೆ

IPL 2024: ಪಂಜಾಬ್‌ ಕಿಂಗ್ಸ್‌ ವಿರುದ್ಧ ಗೆದ್ದ ಚಾಲೆಂಜರ್ಸ್‌: ಆರ್‌ಸಿಬಿ ಪ್ಲೇ ಆಫ್‌ ಕನಸು ಇನ್ನೂ ಜೀವಂತ!

ಧರ್ಮಶಾಲಾ: ಇಲ್ಲಿನ ಹಿಮಾಚಲ್‌ ಪ್ರದೇಶ್‌ ಕ್ರಿಕೆಟ್‌ ಅಸೋಷಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 60 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಈ ಸೀಸನ್‌ನಲ್ಲಿ ಆರ್‌ಸಿಬಿ ಪ್ಲೇ ಆಫ್‌ಗೆ ಹೋಗುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಬಲದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 241 ರನ್‌ ಕಲೆ ಹಾಕಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ 17 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ ಕೇವಲ 181 ರನ್‌ ಗಳಿಸಿ ತವರಿನಂಗಳದಲ್ಲಿ 60 ರನ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು.

ಆರ್‌ಸಿಬಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ಕನ್ನಡಿಗ ವಿದ್ವತ್‌ ಕಾವೇರಪ್ಪ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಿದರು. ನಾಯಕ ಫಾಫ್‌ 9(7) ಅವರನ್ನು ಔಟ್‌ ಮಾಡುವ ಮೂಲಕ ಐಪಿಎಲ್‌ನಲ್ಲಿ ಪಾದಾರ್ಪಣ ಪಂದ್ಯದಲ್ಲಿ ಮೊದಲ ವಿಕೆಟ್‌ ಕಬಳಿಸಿದರು. ಬಳಿಕ ಬಂದ ವಿಲ್‌ ಜಾಕ್‌ 12(7) ಕೂಡಾ ಕಾವೇರಪ್ಪಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಉಳಿದಂತೆ ರಜತ್‌ ಪಟಿದರ್‌ 55(23), ಕ್ಯಾಮರೋನ್‌ ಗ್ರೀನ್‌ 46(27), ದಿನೇಶ್‌ ಕಾರ್ತಿಕ್‌ 18(7) ಲೋಮರೋರ್‌ ಶೂನ್ಯ, ಸ್ವಪ್ನಿಲ್‌ ಓಟಾಗದೇ 1(1) ರನ್‌ ಗಳಿಸಿದರು.

ಇತ್ತ ಆರಂಭದಿಂದಲೇ ಅಟ್ಯಾಕಿಂಗ್‌ ಆಟ ಆಡಿದ ವಿರಾಟ್‌ ಕೊಹ್ಲಿ 47 ಎಸೆತ ಎದುರಿಸಿ 7 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 92 ರನ್‌ ಕಲೆಹಾಕಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಸಹಕರಿಸಿದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ 3, ವಿದ್ವತ್‌ ಕಾವೇರಪ್ಪ 2, ನಾಯಕ ಕರನ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂಜಾಬ್‌ ಇನ್ನಿಂಗ್ಸ್‌: ಆರ್‌ಸಿಬಿ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ಗೆ ಬ್ಯಾಟರ್‌ಗಳು ಕೈಕೊಟ್ಟರು. ಪಂಜಾಬ್‌ ಪರ ರಿಲ್ಲಿ ರೂಸೋ 61 (27 ಎಸೆತ, 9ಬೌಂಡರಿ 3ಸಿಕ್ಸರ್‌) ಹಾಗೂ ಶಶಾಂಕ್‌ ಸಿಂಗ್‌ 37(19) ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಉಳಿದಂತೆ ಪಂಜಾಬ್‌ ಪರ ಪ್ರಭ್‌ಸಿಮ್ರಾನ್‌ 6(4), ಬೇರ್‌ಸ್ಟೋ 27(16), ಜಿತೇಶ್‌ ಶರ್ಮಾ 5(4), ನಾಯಕ ಕರನ್‌ 22(16), ಅಶುತೋಷ್‌ ಶರ್ಮಾ 8(5), ಹರ್ಷಲ್‌ ಪಟೇಲ್‌ ಶೂನ್ಯ, ರಾಹುಲ್‌ ಚಾಹರ್‌ 5(5) ಅರ್ಷ್‌ದೀಪ್‌ ಸಿಂಗ್‌ 4(3) ರನ್‌ಗಳಿಸಿ ತಂಡದ ಸೋಲಿಗೆ ಕಾರಣರಾದರು.

ಆರ್ಸಿಬಿ ಪರ ಮೊಹಮ್ಮದ್‌ ಸಿರಾಜ್‌ 3, ಸ್ವಪ್ನಿಲ್‌, ಫರ್ಗೂಸನ್‌ ಹಾಗೂ ಕರಣ್‌ ಶರ್ಮಾ ತಲಾ ಎರಡೆರೆಡು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

3 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

3 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

3 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

3 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

3 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

3 hours ago