ಕ್ರೀಡೆ

IPL 2024: ಪಂಜಾಬ್‌ ಕಿಂಗ್ಸ್‌ ವಿರುದ್ಧ ಗೆದ್ದ ಚಾಲೆಂಜರ್ಸ್‌: ಆರ್‌ಸಿಬಿ ಪ್ಲೇ ಆಫ್‌ ಕನಸು ಇನ್ನೂ ಜೀವಂತ!

ಧರ್ಮಶಾಲಾ: ಇಲ್ಲಿನ ಹಿಮಾಚಲ್‌ ಪ್ರದೇಶ್‌ ಕ್ರಿಕೆಟ್‌ ಅಸೋಷಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 60 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಈ ಸೀಸನ್‌ನಲ್ಲಿ ಆರ್‌ಸಿಬಿ ಪ್ಲೇ ಆಫ್‌ಗೆ ಹೋಗುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಬಲದಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 241 ರನ್‌ ಕಲೆ ಹಾಕಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ 17 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ ಕೇವಲ 181 ರನ್‌ ಗಳಿಸಿ ತವರಿನಂಗಳದಲ್ಲಿ 60 ರನ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು.

ಆರ್‌ಸಿಬಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ಕನ್ನಡಿಗ ವಿದ್ವತ್‌ ಕಾವೇರಪ್ಪ ಆರ್‌ಸಿಬಿ ಬ್ಯಾಟರ್‌ಗಳನ್ನು ಕಾಡಿದರು. ನಾಯಕ ಫಾಫ್‌ 9(7) ಅವರನ್ನು ಔಟ್‌ ಮಾಡುವ ಮೂಲಕ ಐಪಿಎಲ್‌ನಲ್ಲಿ ಪಾದಾರ್ಪಣ ಪಂದ್ಯದಲ್ಲಿ ಮೊದಲ ವಿಕೆಟ್‌ ಕಬಳಿಸಿದರು. ಬಳಿಕ ಬಂದ ವಿಲ್‌ ಜಾಕ್‌ 12(7) ಕೂಡಾ ಕಾವೇರಪ್ಪಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಉಳಿದಂತೆ ರಜತ್‌ ಪಟಿದರ್‌ 55(23), ಕ್ಯಾಮರೋನ್‌ ಗ್ರೀನ್‌ 46(27), ದಿನೇಶ್‌ ಕಾರ್ತಿಕ್‌ 18(7) ಲೋಮರೋರ್‌ ಶೂನ್ಯ, ಸ್ವಪ್ನಿಲ್‌ ಓಟಾಗದೇ 1(1) ರನ್‌ ಗಳಿಸಿದರು.

ಇತ್ತ ಆರಂಭದಿಂದಲೇ ಅಟ್ಯಾಕಿಂಗ್‌ ಆಟ ಆಡಿದ ವಿರಾಟ್‌ ಕೊಹ್ಲಿ 47 ಎಸೆತ ಎದುರಿಸಿ 7 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 92 ರನ್‌ ಕಲೆಹಾಕಿ ತಂಡದ ಮೊತ್ತ ಇನ್ನೂರರ ಗಡಿ ದಾಟಲು ಸಹಕರಿಸಿದರು.

ಪಂಜಾಬ್‌ ಪರ ಹರ್ಷಲ್‌ ಪಟೇಲ್‌ 3, ವಿದ್ವತ್‌ ಕಾವೇರಪ್ಪ 2, ನಾಯಕ ಕರನ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂಜಾಬ್‌ ಇನ್ನಿಂಗ್ಸ್‌: ಆರ್‌ಸಿಬಿ ನೀಡಿದ ಬೃಹತ್‌ ಮೊತ್ತ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ಗೆ ಬ್ಯಾಟರ್‌ಗಳು ಕೈಕೊಟ್ಟರು. ಪಂಜಾಬ್‌ ಪರ ರಿಲ್ಲಿ ರೂಸೋ 61 (27 ಎಸೆತ, 9ಬೌಂಡರಿ 3ಸಿಕ್ಸರ್‌) ಹಾಗೂ ಶಶಾಂಕ್‌ ಸಿಂಗ್‌ 37(19) ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ.

ಉಳಿದಂತೆ ಪಂಜಾಬ್‌ ಪರ ಪ್ರಭ್‌ಸಿಮ್ರಾನ್‌ 6(4), ಬೇರ್‌ಸ್ಟೋ 27(16), ಜಿತೇಶ್‌ ಶರ್ಮಾ 5(4), ನಾಯಕ ಕರನ್‌ 22(16), ಅಶುತೋಷ್‌ ಶರ್ಮಾ 8(5), ಹರ್ಷಲ್‌ ಪಟೇಲ್‌ ಶೂನ್ಯ, ರಾಹುಲ್‌ ಚಾಹರ್‌ 5(5) ಅರ್ಷ್‌ದೀಪ್‌ ಸಿಂಗ್‌ 4(3) ರನ್‌ಗಳಿಸಿ ತಂಡದ ಸೋಲಿಗೆ ಕಾರಣರಾದರು.

ಆರ್ಸಿಬಿ ಪರ ಮೊಹಮ್ಮದ್‌ ಸಿರಾಜ್‌ 3, ಸ್ವಪ್ನಿಲ್‌, ಫರ್ಗೂಸನ್‌ ಹಾಗೂ ಕರಣ್‌ ಶರ್ಮಾ ತಲಾ ಎರಡೆರೆಡು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

1 hour ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

14 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

15 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

16 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

16 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

20 hours ago