ಕ್ರೀಡೆ

ಸನ್‌ರೈಸರ್ಸ್‌ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು; ತಿಂಗಳ ಬಳಿಕ ಗೆದ್ದ ಬೆಂಗಳೂರು!

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 41ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ರನ್‌ಗಳ ಗೆಲುವನ್ನು ದಾಖಲಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 206 ರನ್‌ ಕಲೆಹಾಕಿ ಸನ್‌ರೈಸರ್ಸ್‌ಗೆ 207 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಸನ್‌ರೈಸರ್ಸ್‌ ಹೈದರಾಬಾದ್‌ ಆರ್‌ಸಿಬಿ ಬೌಲಿಂಗ್‌ ದಾಳಿಗೆ ಮಂಕಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತು. ಈ ಮೂಲಕ ಆರ್‌ಸಿಬಿ ತಿಂಗಳ ಬಳಿಕ ಗೆಲುವನ್ನು ಕಂಡಿತು. ಮಾರ್ಚ್‌ 25ರಂದು ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿ ಟೂರ್ನಿಯಲ್ಲಿ ಮೊದಲ ಬಾರಿ ಹಾಗೂ ಕೊನೆಯದಾಗಿ ಗೆದ್ದಿತ್ತು.

ಆರ್‌ಸಿಬಿ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ವಿರಾಟ್‌ ಕೊಹ್ಲಿ ಹಾಗೂ ನಾಯಕ ಫಾಫ್‌ ಡು ಪ್ಲೆಸಿಸ್‌ ಆರಂಭಿಕರಾಗಿ ಕಣಕ್ಕಿಳಿದರು. ಡುಪ್ಲೆಸಿಸ್‌ 25 (12) ರನ್‌ ಗಳಿಸಿದರೆ, ಕೊಹ್ಲಿ 51 (43) ರನ್‌ ಕಲೆಹಾಕಿದರು. ರಜತ್‌ ಪಾಟಿದಾರ್‌ ಕೇವಲ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ 50 ರನ್‌ ಬಾರಿಸಿ ತಂಡದ ರನ್‌ ವೇಗವನ್ನು ಹೆಚ್ಚಿಸಿದರು. ಇನ್ನುಳಿದಂತೆ ವಿಲ್‌ ಜಾಕ್ಸ್‌ 6 (9) ರನ್‌, ಮಹಿಪಾಲ್‌ ಲೊಮ್ರೊರ್‌ 7 (4) ರನ್‌, ದಿನೇಶ್‌ ಕಾರ್ತಿಕ್‌ 11 (6) ರನ್‌, ಸ್ವಪ್ನಿಲ್ ಸಿಂಗ್‌ 12 (6) ರನ್‌ ಗಳಿಸಿದರು ಮತ್ತು ಕ್ಯಾಮೆರಾನ್‌ ಗ್ರೀನ್‌ ಅಜೇಯ 37 (20) ರನ್‌ ಕಲೆಹಾಕಿದರು.

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರ ಜಯದೇವ್‌ ಉನಾದ್ಕತ್‌ 3 ವಿಕೆಟ್‌, ಟಿ ನಟರಾಜನ್‌ 2 ವಿಕೆಟ್‌, ಪ್ಯಾಟ್ ಕಮಿನ್ಸ್‌ ಹಾಗೂ ಮಯಾಂಕ್‌ ಮಾರ್ಕಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ಎಸ್‌ಆರ್‌ಹೆಚ್‌ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಅಭಿಷೇಕ್‌ ಶರ್ಮಾ ಹಾಗೂ ಟ್ರಾವಿಸ್‌ ಹೆಡ್‌ ಕಣಕ್ಕಿಳಿದರು. ಅಭಿಷೇಕ್‌ ಶರ್ಮಾ 31 (13) ರನ್‌ ಬಾರಿಸಿದರೆ, ಈ ಹಿಂದಿನ ಪಂದ್ಯಗಳಲ್ಲಿ ಅಬ್ಬರಿಸಿದ್ದ ಹೆಡ್‌ ಕೇವಲ 1 (3) ರನ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನುಳಿದಂತೆ ಏಡನ್‌ ಮಾರ್ಕ್ರಮ್‌ 7 (8) ರನ್‌, ನಿತೀಶ್‌ ರೆಡ್ಡಿ 13 (13) ರನ್‌, ಹೆನ್ರಿಚ್‌ ಕ್ಲಾಸೆನ್‌ 7 (3) ರನ್‌, ಅಬ್ದುಲ್‌ ಸಮದ್‌ 10 (6) ರನ್‌, ನಾಯಕ ಪ್ಯಾಟ್‌ ಕಮಿನ್ಸ್‌ 31 (15) ರನ್‌, ಭುವನೇಶ್ವರ್‌ ಕುಮಾರ್‌ 13 (13) ರನ್‌, ಜಯದೇವ್‌ ಉನಾದ್ಕತ್‌ ಅಜೇಯ 8 (10) ರನ್‌ ಮತ್ತು ಶಹಬಾಜ್‌ ಅಹ್ಮದ್‌ ಅಜೇಯ 40 (37) ರನ್‌ ಗಳಿಸಿದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕ್ಯಾಮೆರಾನ್‌ ಗ್ರೀನ್‌, ಕರ್ಣ್‌ ಶರ್ಮಾ ಹಾಗೂ ಸ್ವಪ್ನಿಲ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರು. ವಿಲ್‌ ಜಾಕ್ಸ್‌ ಹಾಗೂ ಯಶ್‌ ದಯಾಳ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

26 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

31 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

40 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago