ಕ್ರೀಡೆ

ಸನ್‌ರೈಸರ್ಸ್‌ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು; ತಿಂಗಳ ಬಳಿಕ ಗೆದ್ದ ಬೆಂಗಳೂರು!

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 41ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ರನ್‌ಗಳ ಗೆಲುವನ್ನು ದಾಖಲಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 206 ರನ್‌ ಕಲೆಹಾಕಿ ಸನ್‌ರೈಸರ್ಸ್‌ಗೆ 207 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಸನ್‌ರೈಸರ್ಸ್‌ ಹೈದರಾಬಾದ್‌ ಆರ್‌ಸಿಬಿ ಬೌಲಿಂಗ್‌ ದಾಳಿಗೆ ಮಂಕಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತು. ಈ ಮೂಲಕ ಆರ್‌ಸಿಬಿ ತಿಂಗಳ ಬಳಿಕ ಗೆಲುವನ್ನು ಕಂಡಿತು. ಮಾರ್ಚ್‌ 25ರಂದು ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿ ಟೂರ್ನಿಯಲ್ಲಿ ಮೊದಲ ಬಾರಿ ಹಾಗೂ ಕೊನೆಯದಾಗಿ ಗೆದ್ದಿತ್ತು.

ಆರ್‌ಸಿಬಿ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ವಿರಾಟ್‌ ಕೊಹ್ಲಿ ಹಾಗೂ ನಾಯಕ ಫಾಫ್‌ ಡು ಪ್ಲೆಸಿಸ್‌ ಆರಂಭಿಕರಾಗಿ ಕಣಕ್ಕಿಳಿದರು. ಡುಪ್ಲೆಸಿಸ್‌ 25 (12) ರನ್‌ ಗಳಿಸಿದರೆ, ಕೊಹ್ಲಿ 51 (43) ರನ್‌ ಕಲೆಹಾಕಿದರು. ರಜತ್‌ ಪಾಟಿದಾರ್‌ ಕೇವಲ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ 50 ರನ್‌ ಬಾರಿಸಿ ತಂಡದ ರನ್‌ ವೇಗವನ್ನು ಹೆಚ್ಚಿಸಿದರು. ಇನ್ನುಳಿದಂತೆ ವಿಲ್‌ ಜಾಕ್ಸ್‌ 6 (9) ರನ್‌, ಮಹಿಪಾಲ್‌ ಲೊಮ್ರೊರ್‌ 7 (4) ರನ್‌, ದಿನೇಶ್‌ ಕಾರ್ತಿಕ್‌ 11 (6) ರನ್‌, ಸ್ವಪ್ನಿಲ್ ಸಿಂಗ್‌ 12 (6) ರನ್‌ ಗಳಿಸಿದರು ಮತ್ತು ಕ್ಯಾಮೆರಾನ್‌ ಗ್ರೀನ್‌ ಅಜೇಯ 37 (20) ರನ್‌ ಕಲೆಹಾಕಿದರು.

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರ ಜಯದೇವ್‌ ಉನಾದ್ಕತ್‌ 3 ವಿಕೆಟ್‌, ಟಿ ನಟರಾಜನ್‌ 2 ವಿಕೆಟ್‌, ಪ್ಯಾಟ್ ಕಮಿನ್ಸ್‌ ಹಾಗೂ ಮಯಾಂಕ್‌ ಮಾರ್ಕಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ಎಸ್‌ಆರ್‌ಹೆಚ್‌ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಅಭಿಷೇಕ್‌ ಶರ್ಮಾ ಹಾಗೂ ಟ್ರಾವಿಸ್‌ ಹೆಡ್‌ ಕಣಕ್ಕಿಳಿದರು. ಅಭಿಷೇಕ್‌ ಶರ್ಮಾ 31 (13) ರನ್‌ ಬಾರಿಸಿದರೆ, ಈ ಹಿಂದಿನ ಪಂದ್ಯಗಳಲ್ಲಿ ಅಬ್ಬರಿಸಿದ್ದ ಹೆಡ್‌ ಕೇವಲ 1 (3) ರನ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನುಳಿದಂತೆ ಏಡನ್‌ ಮಾರ್ಕ್ರಮ್‌ 7 (8) ರನ್‌, ನಿತೀಶ್‌ ರೆಡ್ಡಿ 13 (13) ರನ್‌, ಹೆನ್ರಿಚ್‌ ಕ್ಲಾಸೆನ್‌ 7 (3) ರನ್‌, ಅಬ್ದುಲ್‌ ಸಮದ್‌ 10 (6) ರನ್‌, ನಾಯಕ ಪ್ಯಾಟ್‌ ಕಮಿನ್ಸ್‌ 31 (15) ರನ್‌, ಭುವನೇಶ್ವರ್‌ ಕುಮಾರ್‌ 13 (13) ರನ್‌, ಜಯದೇವ್‌ ಉನಾದ್ಕತ್‌ ಅಜೇಯ 8 (10) ರನ್‌ ಮತ್ತು ಶಹಬಾಜ್‌ ಅಹ್ಮದ್‌ ಅಜೇಯ 40 (37) ರನ್‌ ಗಳಿಸಿದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕ್ಯಾಮೆರಾನ್‌ ಗ್ರೀನ್‌, ಕರ್ಣ್‌ ಶರ್ಮಾ ಹಾಗೂ ಸ್ವಪ್ನಿಲ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರು. ವಿಲ್‌ ಜಾಕ್ಸ್‌ ಹಾಗೂ ಯಶ್‌ ದಯಾಳ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

2 hours ago

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

2 hours ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ನಿತಿನ್‌ ನಬಿನ್‌ಗೆ ರಾಜೀನಾಮೆ ಸಲ್ಲಿಕೆ

ನವದೆಹಲಿ: ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾಗಿ ರಾಜೀನಾಮೆ…

4 hours ago

ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಸಹೋದರ ವಾಸುದೇವನ್‌ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…

4 hours ago

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…

6 hours ago

ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶ

ಬೆಂಗಳೂರು: ರಾಜ್ಯಕ್ಕೆ ಜೂನ್.‌5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…

6 hours ago