ಕ್ರೀಡೆ

ಸನ್‌ರೈಸರ್ಸ್‌ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು; ತಿಂಗಳ ಬಳಿಕ ಗೆದ್ದ ಬೆಂಗಳೂರು!

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 41ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ರನ್‌ಗಳ ಗೆಲುವನ್ನು ದಾಖಲಿಸಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 206 ರನ್‌ ಕಲೆಹಾಕಿ ಸನ್‌ರೈಸರ್ಸ್‌ಗೆ 207 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಸನ್‌ರೈಸರ್ಸ್‌ ಹೈದರಾಬಾದ್‌ ಆರ್‌ಸಿಬಿ ಬೌಲಿಂಗ್‌ ದಾಳಿಗೆ ಮಂಕಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತು. ಈ ಮೂಲಕ ಆರ್‌ಸಿಬಿ ತಿಂಗಳ ಬಳಿಕ ಗೆಲುವನ್ನು ಕಂಡಿತು. ಮಾರ್ಚ್‌ 25ರಂದು ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿ ಟೂರ್ನಿಯಲ್ಲಿ ಮೊದಲ ಬಾರಿ ಹಾಗೂ ಕೊನೆಯದಾಗಿ ಗೆದ್ದಿತ್ತು.

ಆರ್‌ಸಿಬಿ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ವಿರಾಟ್‌ ಕೊಹ್ಲಿ ಹಾಗೂ ನಾಯಕ ಫಾಫ್‌ ಡು ಪ್ಲೆಸಿಸ್‌ ಆರಂಭಿಕರಾಗಿ ಕಣಕ್ಕಿಳಿದರು. ಡುಪ್ಲೆಸಿಸ್‌ 25 (12) ರನ್‌ ಗಳಿಸಿದರೆ, ಕೊಹ್ಲಿ 51 (43) ರನ್‌ ಕಲೆಹಾಕಿದರು. ರಜತ್‌ ಪಾಟಿದಾರ್‌ ಕೇವಲ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ 50 ರನ್‌ ಬಾರಿಸಿ ತಂಡದ ರನ್‌ ವೇಗವನ್ನು ಹೆಚ್ಚಿಸಿದರು. ಇನ್ನುಳಿದಂತೆ ವಿಲ್‌ ಜಾಕ್ಸ್‌ 6 (9) ರನ್‌, ಮಹಿಪಾಲ್‌ ಲೊಮ್ರೊರ್‌ 7 (4) ರನ್‌, ದಿನೇಶ್‌ ಕಾರ್ತಿಕ್‌ 11 (6) ರನ್‌, ಸ್ವಪ್ನಿಲ್ ಸಿಂಗ್‌ 12 (6) ರನ್‌ ಗಳಿಸಿದರು ಮತ್ತು ಕ್ಯಾಮೆರಾನ್‌ ಗ್ರೀನ್‌ ಅಜೇಯ 37 (20) ರನ್‌ ಕಲೆಹಾಕಿದರು.

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಪರ ಜಯದೇವ್‌ ಉನಾದ್ಕತ್‌ 3 ವಿಕೆಟ್‌, ಟಿ ನಟರಾಜನ್‌ 2 ವಿಕೆಟ್‌, ಪ್ಯಾಟ್ ಕಮಿನ್ಸ್‌ ಹಾಗೂ ಮಯಾಂಕ್‌ ಮಾರ್ಕಂಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ಎಸ್‌ಆರ್‌ಹೆಚ್‌ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಅಭಿಷೇಕ್‌ ಶರ್ಮಾ ಹಾಗೂ ಟ್ರಾವಿಸ್‌ ಹೆಡ್‌ ಕಣಕ್ಕಿಳಿದರು. ಅಭಿಷೇಕ್‌ ಶರ್ಮಾ 31 (13) ರನ್‌ ಬಾರಿಸಿದರೆ, ಈ ಹಿಂದಿನ ಪಂದ್ಯಗಳಲ್ಲಿ ಅಬ್ಬರಿಸಿದ್ದ ಹೆಡ್‌ ಕೇವಲ 1 (3) ರನ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನುಳಿದಂತೆ ಏಡನ್‌ ಮಾರ್ಕ್ರಮ್‌ 7 (8) ರನ್‌, ನಿತೀಶ್‌ ರೆಡ್ಡಿ 13 (13) ರನ್‌, ಹೆನ್ರಿಚ್‌ ಕ್ಲಾಸೆನ್‌ 7 (3) ರನ್‌, ಅಬ್ದುಲ್‌ ಸಮದ್‌ 10 (6) ರನ್‌, ನಾಯಕ ಪ್ಯಾಟ್‌ ಕಮಿನ್ಸ್‌ 31 (15) ರನ್‌, ಭುವನೇಶ್ವರ್‌ ಕುಮಾರ್‌ 13 (13) ರನ್‌, ಜಯದೇವ್‌ ಉನಾದ್ಕತ್‌ ಅಜೇಯ 8 (10) ರನ್‌ ಮತ್ತು ಶಹಬಾಜ್‌ ಅಹ್ಮದ್‌ ಅಜೇಯ 40 (37) ರನ್‌ ಗಳಿಸಿದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಕ್ಯಾಮೆರಾನ್‌ ಗ್ರೀನ್‌, ಕರ್ಣ್‌ ಶರ್ಮಾ ಹಾಗೂ ಸ್ವಪ್ನಿಲ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರು. ವಿಲ್‌ ಜಾಕ್ಸ್‌ ಹಾಗೂ ಯಶ್‌ ದಯಾಳ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

20 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

20 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

20 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

20 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

20 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

20 hours ago