ಕ್ರೀಡೆ

IPL 2024: ಮುಂಬೈ ವಿರುದ್ಧ ಆರ್‌ಸಿಬಿಗೆ ಹೀನಾಯ ಸೋಲು!

ಮುಂಬೈ: ಜಸ್‌ಪ್ರಿತ್‌ ಬುಮ್ರಾ ಮಾರಕ ದಾಳಿ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಆಟದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು ದಾಖಲಿಸಿದೆ.

ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಹಾಗೂ ಆರ್​ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈ 15.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 199 ರನ್‌ ಬಾರಿಸಿ 7 ವಿಕೆಟ್‌ಗಳ ಅಂತರದ ಜಯ ಸಾಧಿಸಿತು.

ಆರ್‌ಸಿಬಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ವಿರಾಟ್‌ ಕೊಹ್ಲಿ ಕೇವಲ 3 ರನ್‌ಗಳಿಸಿ ಔಟಾದರು. ಮೊದಲ ಬಾರಿಗೆ ಮೈದಾನಕ್ಕಿಳಿದ ವಿಲ್‌ ಜಾಕ್‌ 8ರನ್‌ಗೆ ಸುಸ್ತಾದರು. ಬಳಿಕ ಒಂದಾದ ನಾಯಕ ಫಾಫ್ ಡುಪ್ಲೆಸ್ಸಿ ಹಾಗೂ ರಜತ್‌ ಪಟಿದರ್‌ ತಂಡಕ್ಕೆ ಚೇತರಿಕೆ ಆಟವಾಡಿದರು. ಫಾಫ್‌ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್​ ಬಾರಿಸಿದರೇ, ಪಾಟಿದರ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಉಳಿದಂತೆ ಮ್ಯಾಕ್ಸ್‌ವೆಲ್‌ ಶೂನ್ಯ, ಲೋಮ್‌ರೋರ್‌ 0, ಸೌರವ್‌ 9, ವೈಶಾಖ್‌ 0 ಸಂಪಾದಿಸಿ ಪೆವಿಲಿಯನ್‌ ಸೇರಿದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿ ತಂಡದ ಮೊತ್ತವನ್ನು ಇನ್ನೂರರ ಸಮೀಪಕ್ಕೆ ಕೊಂಡೊಯ್ದರು.

ಮುಂಬೈ ಪರ ವೇಗಿ ಜಸ್ಪ್ರೀತ್ ಬುಮ್ರಾ 4 ಓವರ್ ಬೌಲ್ ಮಾಡಿ 21 ರನ್ ನೀಡಿ ಪ್ರಮುಖ 5 ವಿಕೆಟ್ ಕಬಳಿಸಿದರು. ಕಾಟ್ಜಿ, ಶ್ರೇಯಸ್‌ ಹಾಗೂ ಮಧ್ವಾಲ್‌ ತಲಾ ಒಂದು ವಿಕೆಟ್‌ ಪಡೆದರು.

ಮುಂಬೈ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಉತ್ತಮ ಆರಂಭ ದೊರೆಯಿತು. ಆರಂಭದಿಂದಲೇ ಭರ್ಜರಿ ಫಾರ್ಮ್‌ ನಲ್ಲಿ ಕಂಡು ಬಂದ ರೋಹಿತ್‌ ಹಾಗೂ ಕಿಶಾನ್‌ ಪವರ್‌ ಪ್ಲೇ ನಲ್ಲಿ ಆರ್‌ಸಿಬಿ ಬೌಲರ್‌ಗಳ ಬೆಂಡೆತ್ತಿದರು. ರೋಹಿತ್‌ 38 ರನ್‌ ಗಳಿಸಿ ಔಟಾದರು. ಬಳಿಕ ಬಂದ ಸೂರ್ಯಕುಮಾರ್‌ ಯಾದವ್‌ ಕೇವಲ 19 ಎಸೆತಗಳಲ್ಲಿ 5ಬೌಂಡರಿ, 4ಸಿಕ್ಸರ್‌ ಸಹಿತ 52 ರನ್‌ ಚಚ್ಚಿದರು. ಇಶಾನ್‌ ಕಿಸಾನ್‌ 34 ಎಸೆತಗಳಲ್ಲಿ 7ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ 69 ಗಳಿಸಿ ತಂಡಕ್ಕೆ ನೆರವಾದರು.

ನಾಯಕ ಹಾರ್ದಿಕ್‌ ಪಾಂಡ್ಯ 21 ಮತ್ತು ತಿಲಕ್‌ ವರ್ಮಾ 16 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಆರ್‌ಸಿಬಿ ಪರ ಆಕಾಶ್‌ ದೀಪ್‌, ವಿಲ್‌ ಜಾಕ್‌ ಹಾಗೂ ವೈಶಾಖ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಜಸ್‌ಪ್ರಿತ್‌ ಬುಮ್ರಾ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

2 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

2 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

2 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

3 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

4 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

4 hours ago