ಮುಂಬೈ: ಜಸ್ಪ್ರಿತ್ ಬುಮ್ರಾ ಮಾರಕ ದಾಳಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಮೋಘ ಆಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಹಾಗೂ ಆರ್ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈ 15.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಬಾರಿಸಿ 7 ವಿಕೆಟ್ಗಳ ಅಂತರದ ಜಯ ಸಾಧಿಸಿತು.
ಆರ್ಸಿಬಿ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ವಿರಾಟ್ ಕೊಹ್ಲಿ ಕೇವಲ 3 ರನ್ಗಳಿಸಿ ಔಟಾದರು. ಮೊದಲ ಬಾರಿಗೆ ಮೈದಾನಕ್ಕಿಳಿದ ವಿಲ್ ಜಾಕ್ 8ರನ್ಗೆ ಸುಸ್ತಾದರು. ಬಳಿಕ ಒಂದಾದ ನಾಯಕ ಫಾಫ್ ಡುಪ್ಲೆಸ್ಸಿ ಹಾಗೂ ರಜತ್ ಪಟಿದರ್ ತಂಡಕ್ಕೆ ಚೇತರಿಕೆ ಆಟವಾಡಿದರು. ಫಾಫ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್ ಬಾರಿಸಿದರೇ, ಪಾಟಿದರ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಉಳಿದಂತೆ ಮ್ಯಾಕ್ಸ್ವೆಲ್ ಶೂನ್ಯ, ಲೋಮ್ರೋರ್ 0, ಸೌರವ್ 9, ವೈಶಾಖ್ 0 ಸಂಪಾದಿಸಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿ ತಂಡದ ಮೊತ್ತವನ್ನು ಇನ್ನೂರರ ಸಮೀಪಕ್ಕೆ ಕೊಂಡೊಯ್ದರು.
ಮುಂಬೈ ಪರ ವೇಗಿ ಜಸ್ಪ್ರೀತ್ ಬುಮ್ರಾ 4 ಓವರ್ ಬೌಲ್ ಮಾಡಿ 21 ರನ್ ನೀಡಿ ಪ್ರಮುಖ 5 ವಿಕೆಟ್ ಕಬಳಿಸಿದರು. ಕಾಟ್ಜಿ, ಶ್ರೇಯಸ್ ಹಾಗೂ ಮಧ್ವಾಲ್ ತಲಾ ಒಂದು ವಿಕೆಟ್ ಪಡೆದರು.
ಮುಂಬೈ ಇನ್ನಿಂಗ್ಸ್: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಉತ್ತಮ ಆರಂಭ ದೊರೆಯಿತು. ಆರಂಭದಿಂದಲೇ ಭರ್ಜರಿ ಫಾರ್ಮ್ ನಲ್ಲಿ ಕಂಡು ಬಂದ ರೋಹಿತ್ ಹಾಗೂ ಕಿಶಾನ್ ಪವರ್ ಪ್ಲೇ ನಲ್ಲಿ ಆರ್ಸಿಬಿ ಬೌಲರ್ಗಳ ಬೆಂಡೆತ್ತಿದರು. ರೋಹಿತ್ 38 ರನ್ ಗಳಿಸಿ ಔಟಾದರು. ಬಳಿಕ ಬಂದ ಸೂರ್ಯಕುಮಾರ್ ಯಾದವ್ ಕೇವಲ 19 ಎಸೆತಗಳಲ್ಲಿ 5ಬೌಂಡರಿ, 4ಸಿಕ್ಸರ್ ಸಹಿತ 52 ರನ್ ಚಚ್ಚಿದರು. ಇಶಾನ್ ಕಿಸಾನ್ 34 ಎಸೆತಗಳಲ್ಲಿ 7ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 69 ಗಳಿಸಿ ತಂಡಕ್ಕೆ ನೆರವಾದರು.
ನಾಯಕ ಹಾರ್ದಿಕ್ ಪಾಂಡ್ಯ 21 ಮತ್ತು ತಿಲಕ್ ವರ್ಮಾ 16 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಆರ್ಸಿಬಿ ಪರ ಆಕಾಶ್ ದೀಪ್, ವಿಲ್ ಜಾಕ್ ಹಾಗೂ ವೈಶಾಖ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ಜಸ್ಪ್ರಿತ್ ಬುಮ್ರಾ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…