ಮುಂಬೈ: ಜಸ್ಪ್ರಿತ್ ಬುಮ್ರಾ ಮಾರಕ ದಾಳಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಮೋಘ ಆಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಹಾಗೂ ಆರ್ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈ 15.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಬಾರಿಸಿ 7 ವಿಕೆಟ್ಗಳ ಅಂತರದ ಜಯ ಸಾಧಿಸಿತು.
ಆರ್ಸಿಬಿ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ವಿರಾಟ್ ಕೊಹ್ಲಿ ಕೇವಲ 3 ರನ್ಗಳಿಸಿ ಔಟಾದರು. ಮೊದಲ ಬಾರಿಗೆ ಮೈದಾನಕ್ಕಿಳಿದ ವಿಲ್ ಜಾಕ್ 8ರನ್ಗೆ ಸುಸ್ತಾದರು. ಬಳಿಕ ಒಂದಾದ ನಾಯಕ ಫಾಫ್ ಡುಪ್ಲೆಸ್ಸಿ ಹಾಗೂ ರಜತ್ ಪಟಿದರ್ ತಂಡಕ್ಕೆ ಚೇತರಿಕೆ ಆಟವಾಡಿದರು. ಫಾಫ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್ ಬಾರಿಸಿದರೇ, ಪಾಟಿದರ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಉಳಿದಂತೆ ಮ್ಯಾಕ್ಸ್ವೆಲ್ ಶೂನ್ಯ, ಲೋಮ್ರೋರ್ 0, ಸೌರವ್ 9, ವೈಶಾಖ್ 0 ಸಂಪಾದಿಸಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿ ತಂಡದ ಮೊತ್ತವನ್ನು ಇನ್ನೂರರ ಸಮೀಪಕ್ಕೆ ಕೊಂಡೊಯ್ದರು.
ಮುಂಬೈ ಪರ ವೇಗಿ ಜಸ್ಪ್ರೀತ್ ಬುಮ್ರಾ 4 ಓವರ್ ಬೌಲ್ ಮಾಡಿ 21 ರನ್ ನೀಡಿ ಪ್ರಮುಖ 5 ವಿಕೆಟ್ ಕಬಳಿಸಿದರು. ಕಾಟ್ಜಿ, ಶ್ರೇಯಸ್ ಹಾಗೂ ಮಧ್ವಾಲ್ ತಲಾ ಒಂದು ವಿಕೆಟ್ ಪಡೆದರು.
ಮುಂಬೈ ಇನ್ನಿಂಗ್ಸ್: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಉತ್ತಮ ಆರಂಭ ದೊರೆಯಿತು. ಆರಂಭದಿಂದಲೇ ಭರ್ಜರಿ ಫಾರ್ಮ್ ನಲ್ಲಿ ಕಂಡು ಬಂದ ರೋಹಿತ್ ಹಾಗೂ ಕಿಶಾನ್ ಪವರ್ ಪ್ಲೇ ನಲ್ಲಿ ಆರ್ಸಿಬಿ ಬೌಲರ್ಗಳ ಬೆಂಡೆತ್ತಿದರು. ರೋಹಿತ್ 38 ರನ್ ಗಳಿಸಿ ಔಟಾದರು. ಬಳಿಕ ಬಂದ ಸೂರ್ಯಕುಮಾರ್ ಯಾದವ್ ಕೇವಲ 19 ಎಸೆತಗಳಲ್ಲಿ 5ಬೌಂಡರಿ, 4ಸಿಕ್ಸರ್ ಸಹಿತ 52 ರನ್ ಚಚ್ಚಿದರು. ಇಶಾನ್ ಕಿಸಾನ್ 34 ಎಸೆತಗಳಲ್ಲಿ 7ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 69 ಗಳಿಸಿ ತಂಡಕ್ಕೆ ನೆರವಾದರು.
ನಾಯಕ ಹಾರ್ದಿಕ್ ಪಾಂಡ್ಯ 21 ಮತ್ತು ತಿಲಕ್ ವರ್ಮಾ 16 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಆರ್ಸಿಬಿ ಪರ ಆಕಾಶ್ ದೀಪ್, ವಿಲ್ ಜಾಕ್ ಹಾಗೂ ವೈಶಾಖ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ಜಸ್ಪ್ರಿತ್ ಬುಮ್ರಾ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…