ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ 30ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡವು ನೂತನ ದಾಖಲೆ ನಿರ್ಮಿಸಿದೆ. ಆರ್ಸಿಬಿ ತಾವಾಡಿದ ಕೊನೆಯ ಐದು ಪಂದ್ಯಗಳನ್ನು ಸೋಲುವ ಮೂಲಕ ಎಲಿಮಿನೇಟರ್ ಹಾದಿಯನ್ನು ಕಠಿಣವಾಗಿಸಿಕೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಎಸ್ಆರ್ಎಚ್ 20 ಓವರ್ಗಳ 3 ವಿಕೆಟ್ ಕಳೆದುಕೊಂಡು 287 ಬಾರಿಸಿ 288 ರನ್ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್ಸಿಬಿ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡಿ 262 ರನ್ ಕಲೆಹಾಕಿ 25 ರನ್ಗಳ ವಿರೋಚಿತ ಸೋಲು ಕಂಡಿತು.
ಎಸ್ಆರ್ಎಚ್ ಇನ್ನಿಂಗ್ಸ್: ಹೈದರಾಬಾದ್ ಪರ ಆರಂಭಿಕರಾಗಿ ಬಂದ ಅಭಿಷೇಕ್ ಶರ್ಮಾ 34 ರನ್ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ಆರ್ಸಿಬಿ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು. 41 ಎಸೆತಗಳಲ್ಲಿ 102 ರನ್ ಸಿಡಿಸಿದ ಇವರ ಆಟದಲ್ಲಿ 8 ಸಿಕ್ಸರ್ ಮತ್ತು 9 ಬೌಂಡರಿಗಳು ಸೇರಿದ್ದವು. ಇವರಿಗೆ ಉತ್ತಮ ಸಾಥ್ ನೀಡಿದ ಕ್ಲಾಸೆನ್ 31 ಎಸೆತಗಳಲ್ಲಿ 7 ಸಿಕ್ಸರ್, 2 ಬೌಂಡರಿ ಸಹಿತ 67 ರನ್ ಗಳಿಸಿದರು.
ಅಂತ್ಯದಲ್ಲಿ ಅಬ್ಬರಿಸಿದ ಏಡೆನ್ ಮರ್ಕ್ರಂ(17 ಎಸೆತಗಳಲ್ಲಿ 32) ಮತ್ತು ಅಬ್ದುಲ್ ಸಮದ್ (10 ಎಸೆತಗಳಲ್ಲಿ 37) ಎಸ್ಆರ್ಎಚ್ ಐತಿಹಾಸಿಕ ದಾಖಲೆ ನಿರ್ಮಿಸುವಲ್ಲಿ ಸಹಕರಿಸಿದರು.
ಆರ್ಸಿಬಿ ಪರ ಫರ್ಗೂಸನ್ 2, ಟಾಪ್ಲಿ ಒಂದು ವಿಕೆಟ್ ಪಡೆದರು.
ಆರ್ಸಿಬಿ ಇನ್ನಿಂಗ್ಸ್: ಈ ಬೃಹತ್ ಮೊತ್ತ ಬೆನ್ನತ್ತಿದ ಆರ್ಸಿಬಿಗೆ ನಾಯಕ ಫಾಫ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಈ ಜೋಡಿ ಪವರ್ ಪ್ಲೇ ನಲ್ಲಿ 80 ರನ್ ಸಿಡಿಸಿದರು. ಕೊಹ್ಲಿ ಕೇವಲ 20 ಎಸೆತಗಳಲ್ಲಿ 40 ರನ್ ಬಾರಿಸಿ ಔಟಾದರು. ನಾಯಕ ಫಾಫ್ 28ಎಸೆತ ಎದುರಿಸಿ 7ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 62 ರನ್ ಬಾರಿಸಿ ನಿರ್ಗಮಿಸಿದರು. ವಿಲ್ ಜಾಕ್ (7) ಇಲ್ಲದ ರನ್ ಕದಿಯಲು ಹೋಗಿ ಔಟಾದರು.
ಉಳಿದಂತೆ ಪಟಿದರ್ 9, ಸೌರವ್ ಚೌಹಾಣ್ 0, ಲೋಮ್ರೋರ್ 19 ರನ್ ಬಾರಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಭಾಗಶಃ ಎಸ್ಆರ್ಎಚ್ ಬೌಲರ್ಗಳನ್ನು ಬೆಂಡೆತ್ತಿದರು. 35 ಎಸೆತ ಎದುರಿಸಿ 5ಬೌಂಡರಿ, 7 ಭರ್ಜರಿ ಸಿಕ್ಸರ್ ಸಹಿತ 83 ರನ್ ಪೇರಿಸಿ, ನಟರಾಜನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ಅನೂಜ್ ರಾವತ್ 25, ವೈಶಾಖ್ 1 ರನ್ ಹೊಡೆದರು.
ಹೈದರಾಬಾದ್ ಪರ ನಾಯಕ ಕಮಿನ್ಸ್ 3, ಮಾರ್ಕಂಡೆ2 ಹಾಗೂ ನಟರಾಜನ್ 1 ವಿಕೆಟ್ ಪಡೆದು ಮಿಂಚಿದರು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…