ಕ್ರೀಡೆ

IPL2024: ತನ್ನದೇ ರೇಕಾರ್ಡ್‌ ತಾನೇ ಬ್ರೇಕ್‌ ಮಾಡಿದ ಎಸ್‌ಆರ್‌ಎಚ್‌: ಆರ್‌ಸಿಬಿಗೆ ಸತತ ಐದನೇ ಸೋಲು!

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 30ನೇ ಲೀಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ನೂತನ ದಾಖಲೆ ನಿರ್ಮಿಸಿದೆ. ಆರ್‌ಸಿಬಿ ತಾವಾಡಿದ ಕೊನೆಯ ಐದು ಪಂದ್ಯಗಳನ್ನು ಸೋಲುವ ಮೂಲಕ ಎಲಿಮಿನೇಟರ್‌ ಹಾದಿಯನ್ನು ಕಠಿಣವಾಗಿಸಿಕೊಂಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಎಸ್‌ಆರ್‌ಎಚ್‌ 20 ಓವರ್‌ಗಳ 3 ವಿಕೆಟ್‌ ಕಳೆದುಕೊಂಡು 287 ಬಾರಿಸಿ 288 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡಿ 262 ರನ್‌ ಕಲೆಹಾಕಿ 25 ರನ್‌ಗಳ ವಿರೋಚಿತ ಸೋಲು ಕಂಡಿತು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಹೈದರಾಬಾದ್‌ ಪರ ಆರಂಭಿಕರಾಗಿ ಬಂದ ಅಭಿಷೇಕ್‌ ಶರ್ಮಾ 34 ರನ್‌ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್‌ ಬೀಸಿದ ಟ್ರಾವಿಸ್‌ ಹೆಡ್ ಆರ್‌ಸಿಬಿ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು. 41 ಎಸೆತಗಳಲ್ಲಿ 102 ರನ್ ಸಿಡಿಸಿದ ಇವರ ಆಟದಲ್ಲಿ 8 ಸಿಕ್ಸರ್ ಮತ್ತು 9 ಬೌಂಡರಿಗಳು ಸೇರಿದ್ದವು. ಇವರಿಗೆ ಉತ್ತಮ ಸಾಥ್ ನೀಡಿದ ಕ್ಲಾಸೆನ್ 31 ಎಸೆತಗಳಲ್ಲಿ 7 ಸಿಕ್ಸರ್, 2 ಬೌಂಡರಿ ಸಹಿತ 67 ರನ್ ಗಳಿಸಿದರು.

ಅಂತ್ಯದಲ್ಲಿ ಅಬ್ಬರಿಸಿದ ಏಡೆನ್ ಮರ್ಕ್ರಂ(17 ಎಸೆತಗಳಲ್ಲಿ 32) ಮತ್ತು ಅಬ್ದುಲ್ ಸಮದ್‌ (10 ಎಸೆತಗಳಲ್ಲಿ 37) ಎಸ್‌ಆರ್‌ಎಚ್‌ ಐತಿಹಾಸಿಕ ದಾಖಲೆ ನಿರ್ಮಿಸುವಲ್ಲಿ ಸಹಕರಿಸಿದರು.

ಆರ್‌ಸಿಬಿ ಪರ ಫರ್ಗೂಸನ್‌ 2, ಟಾಪ್ಲಿ ಒಂದು ವಿಕೆಟ್‌ ಪಡೆದರು.

ಆರ್‌ಸಿಬಿ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ನಾಯಕ ಫಾಫ್‌ ಹಾಗೂ ವಿರಾಟ್‌ ಕೊಹ್ಲಿ ಉತ್ತಮ ಆರಂಭ ನೀಡಿದರು. ಈ ಜೋಡಿ ಪವರ್‌ ಪ್ಲೇ ನಲ್ಲಿ 80 ರನ್‌ ಸಿಡಿಸಿದರು. ಕೊಹ್ಲಿ ಕೇವಲ 20 ಎಸೆತಗಳಲ್ಲಿ 40 ರನ್‌ ಬಾರಿಸಿ ಔಟಾದರು. ನಾಯಕ ಫಾಫ್‌ 28ಎಸೆತ ಎದುರಿಸಿ 7ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 62 ರನ್‌ ಬಾರಿಸಿ ನಿರ್ಗಮಿಸಿದರು. ವಿಲ್‌ ಜಾಕ್‌ (7) ಇಲ್ಲದ ರನ್‌ ಕದಿಯಲು ಹೋಗಿ ಔಟಾದರು.

ಉಳಿದಂತೆ ಪಟಿದರ್‌ 9, ಸೌರವ್‌ ಚೌಹಾಣ್‌ 0, ಲೋಮ್ರೋರ್‌ 19 ರನ್‌ ಬಾರಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್‌ ಕಾರ್ತಿಕ್‌ ಭಾಗಶಃ ಎಸ್‌ಆರ್‌ಎಚ್‌ ಬೌಲರ್‌ಗಳನ್ನು ಬೆಂಡೆತ್ತಿದರು. 35 ಎಸೆತ ಎದುರಿಸಿ 5ಬೌಂಡರಿ, 7 ಭರ್ಜರಿ ಸಿಕ್ಸರ್‌ ಸಹಿತ 83 ರನ್‌ ಪೇರಿಸಿ, ನಟರಾಜನ್‌ಗೆ ವಿಕೆಟ್‌ ಒಪ್ಪಿಸಿ ನಿರ್ಗಮಿಸಿದರು. ಅನೂಜ್‌ ರಾವತ್‌ 25, ವೈಶಾಖ್‌ 1 ರನ್‌ ಹೊಡೆದರು.

ಹೈದರಾಬಾದ್‌ ಪರ ನಾಯಕ ಕಮಿನ್ಸ್‌ 3, ಮಾರ್ಕಂಡೆ2 ಹಾಗೂ ನಟರಾಜನ್‌ 1 ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago