ಕ್ರೀಡೆ

IPL2024: ತನ್ನದೇ ರೇಕಾರ್ಡ್‌ ತಾನೇ ಬ್ರೇಕ್‌ ಮಾಡಿದ ಎಸ್‌ಆರ್‌ಎಚ್‌: ಆರ್‌ಸಿಬಿಗೆ ಸತತ ಐದನೇ ಸೋಲು!

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 30ನೇ ಲೀಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ನೂತನ ದಾಖಲೆ ನಿರ್ಮಿಸಿದೆ. ಆರ್‌ಸಿಬಿ ತಾವಾಡಿದ ಕೊನೆಯ ಐದು ಪಂದ್ಯಗಳನ್ನು ಸೋಲುವ ಮೂಲಕ ಎಲಿಮಿನೇಟರ್‌ ಹಾದಿಯನ್ನು ಕಠಿಣವಾಗಿಸಿಕೊಂಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಎಸ್‌ಆರ್‌ಎಚ್‌ 20 ಓವರ್‌ಗಳ 3 ವಿಕೆಟ್‌ ಕಳೆದುಕೊಂಡು 287 ಬಾರಿಸಿ 288 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡಿ 262 ರನ್‌ ಕಲೆಹಾಕಿ 25 ರನ್‌ಗಳ ವಿರೋಚಿತ ಸೋಲು ಕಂಡಿತು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಹೈದರಾಬಾದ್‌ ಪರ ಆರಂಭಿಕರಾಗಿ ಬಂದ ಅಭಿಷೇಕ್‌ ಶರ್ಮಾ 34 ರನ್‌ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್‌ ಬೀಸಿದ ಟ್ರಾವಿಸ್‌ ಹೆಡ್ ಆರ್‌ಸಿಬಿ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು. 41 ಎಸೆತಗಳಲ್ಲಿ 102 ರನ್ ಸಿಡಿಸಿದ ಇವರ ಆಟದಲ್ಲಿ 8 ಸಿಕ್ಸರ್ ಮತ್ತು 9 ಬೌಂಡರಿಗಳು ಸೇರಿದ್ದವು. ಇವರಿಗೆ ಉತ್ತಮ ಸಾಥ್ ನೀಡಿದ ಕ್ಲಾಸೆನ್ 31 ಎಸೆತಗಳಲ್ಲಿ 7 ಸಿಕ್ಸರ್, 2 ಬೌಂಡರಿ ಸಹಿತ 67 ರನ್ ಗಳಿಸಿದರು.

ಅಂತ್ಯದಲ್ಲಿ ಅಬ್ಬರಿಸಿದ ಏಡೆನ್ ಮರ್ಕ್ರಂ(17 ಎಸೆತಗಳಲ್ಲಿ 32) ಮತ್ತು ಅಬ್ದುಲ್ ಸಮದ್‌ (10 ಎಸೆತಗಳಲ್ಲಿ 37) ಎಸ್‌ಆರ್‌ಎಚ್‌ ಐತಿಹಾಸಿಕ ದಾಖಲೆ ನಿರ್ಮಿಸುವಲ್ಲಿ ಸಹಕರಿಸಿದರು.

ಆರ್‌ಸಿಬಿ ಪರ ಫರ್ಗೂಸನ್‌ 2, ಟಾಪ್ಲಿ ಒಂದು ವಿಕೆಟ್‌ ಪಡೆದರು.

ಆರ್‌ಸಿಬಿ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ನಾಯಕ ಫಾಫ್‌ ಹಾಗೂ ವಿರಾಟ್‌ ಕೊಹ್ಲಿ ಉತ್ತಮ ಆರಂಭ ನೀಡಿದರು. ಈ ಜೋಡಿ ಪವರ್‌ ಪ್ಲೇ ನಲ್ಲಿ 80 ರನ್‌ ಸಿಡಿಸಿದರು. ಕೊಹ್ಲಿ ಕೇವಲ 20 ಎಸೆತಗಳಲ್ಲಿ 40 ರನ್‌ ಬಾರಿಸಿ ಔಟಾದರು. ನಾಯಕ ಫಾಫ್‌ 28ಎಸೆತ ಎದುರಿಸಿ 7ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 62 ರನ್‌ ಬಾರಿಸಿ ನಿರ್ಗಮಿಸಿದರು. ವಿಲ್‌ ಜಾಕ್‌ (7) ಇಲ್ಲದ ರನ್‌ ಕದಿಯಲು ಹೋಗಿ ಔಟಾದರು.

ಉಳಿದಂತೆ ಪಟಿದರ್‌ 9, ಸೌರವ್‌ ಚೌಹಾಣ್‌ 0, ಲೋಮ್ರೋರ್‌ 19 ರನ್‌ ಬಾರಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್‌ ಕಾರ್ತಿಕ್‌ ಭಾಗಶಃ ಎಸ್‌ಆರ್‌ಎಚ್‌ ಬೌಲರ್‌ಗಳನ್ನು ಬೆಂಡೆತ್ತಿದರು. 35 ಎಸೆತ ಎದುರಿಸಿ 5ಬೌಂಡರಿ, 7 ಭರ್ಜರಿ ಸಿಕ್ಸರ್‌ ಸಹಿತ 83 ರನ್‌ ಪೇರಿಸಿ, ನಟರಾಜನ್‌ಗೆ ವಿಕೆಟ್‌ ಒಪ್ಪಿಸಿ ನಿರ್ಗಮಿಸಿದರು. ಅನೂಜ್‌ ರಾವತ್‌ 25, ವೈಶಾಖ್‌ 1 ರನ್‌ ಹೊಡೆದರು.

ಹೈದರಾಬಾದ್‌ ಪರ ನಾಯಕ ಕಮಿನ್ಸ್‌ 3, ಮಾರ್ಕಂಡೆ2 ಹಾಗೂ ನಟರಾಜನ್‌ 1 ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

6 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

6 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

7 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

8 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

8 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

16 hours ago