ಕ್ರೀಡೆ

ಆರ್‌ಸಿಬಿಯೇ ನನಗೆ ಒಂದು ಜಗತ್ತು : ಎಬಿಡಿ

ಸ್ಟಾರ್ ಸ್ಪೋರ್ಟ್ಸ್‌ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಇನ್ನು ಎಷ್ಟು ಆವೃತ್ತಿಗಳು ಮುಗಿದಿರಬಹುದು ಹೇಳಿ?, ಹದಿನಾಲ್ಕೊ, ಹದಿನೈದೋ ಅಥವಾ ಎಷ್ಟೋ ಆಗಿರಬಹುದು. ಆದರೆ ಅವರು ಈ ಸಂಕೋಲೆಯಿಂದ ಹೊರಬರಲು ಇಷ್ಟಪಡುತ್ತಿದ್ದಾರೆ. ಒಂದು ವೇಳೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಒಂದು ಕಪ್ ಗೆದ್ದರೇ, ಇದಾದ ಬಳಿಕ ಎರಡು, ಮೂರು, ನಾಲ್ಕು ಟ್ರೋಫಿಗಳನ್ನು ಚುರುಕಾಗಿ ಗೆಲ್ಲಲಿದೆ. ಕಾದು ನೋಡೋಣ ಏನಾಗುತ್ತದೆ ಎಂದು. ಟಿ20 ಕ್ರಿಕೆಟ್ ಒಂದು ರೀತಿ ಗ್ಯಾಂಬಲ್ ಎನಿಸುತ್ತದೆ. ಇಲ್ಲಿ ಏನು ಬೇಕಾದರೂ ಆಗಬಹುದು. ಅದರಲ್ಲೂ ನಾಕೌಟ್ ಪಂದ್ಯಗಳಲ್ಲಿ, ಆದರೆ ಈ ಬಾರಿ ಆರ್‌ಸಿಬಿ ಒಳ್ಳೆಯ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಸಿಬಿ ಜತೆಗನ ಒಡನಾಟದ ಬಗ್ಗೆ ಮಾತನಾಡಿರುವ ಎಬಿ ಡಿವಿಲಿಯರ್ಸ್‌, ನಾನು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಮನಸಾರೆ ಇಷ್ಟಪಡುತ್ತೇನೆ. ಆರ್‌ಸಿಬಿಯೇ ನನಗೆ ಒಂದು ಜಗತ್ತು, ಇದು ನನ್ನ ಬದುಕನ್ನೇ ಬದಲಿಸಿದೆ. ನಾನು 2011ರಿಂದ ಆರ್‌ಸಿಬಿ ಜತೆಗಿನ ಪಯಣ ಆರಂಭಿಸಿದೆ. ಇಲ್ಲಿ ನನ್ನ ಜೀವನದ ಅಮೂಲ್ಯ ಸ್ನೇಹಿತರನ್ನು ಪಡೆದೆ. ಇದು ನನ್ನ ಒಂದು ಭಾಗ, ನನ್ನ ಕುಟುಂಬ. ಅದಕ್ಕಾಗಿಯೇ ನಾವು ಹೇಳುವುದು ನಾವೆಲ್ಲಾ ಆರ್‌ಸಿಬಿಯನ್ಸ್‌ ಎಂದು ಎಬಿ ಡಿವಿಲಿಯರ್ಸ್‌ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಮ್ಮೆ ಪ್ರಶಸ್ತಿ ಬರ ನೀಗಿಸಿಕೊಂಡರೇ, ಆ ಬಳಿಕ ಚುರುಕಾಗಿಯೇ ಮೂರ್ನಾಲ್ಕು ಟ್ರೋಫಿ ಗೆಲ್ಲುವ ಸಾಮರ್ಥ್ಯ ಆರ್‌ಸಿಬಿ ತಂಡಕ್ಕಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹಾಗೂ ಆರ್‌ಸಿಬಿ ತಂಡದ ಆಪತ್ಬಾಂದವ ಎನಿಸಿಕೊಂಡಿದ್ದ ಎಬಿ ಡಿವಿಲಿಯರ್ಸ್‌ ಅಭಿಪ್ರಾಯಪಟ್ಟಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೂ ಮೂರು ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದೆಯಾದರೂ, ಕಪ್‌ ಗೆಲ್ಲಲು ಇನ್ನೂ ಸಾಧ್ಯವಾಗಿಲ್ಲ.

ಇನ್ನು 2022ರ ಐಪಿಎಲ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಿನಿ ಹರಾಜಿಗೂ ಮುನ್ನ ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು ತಂಡ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಇನ್ನೂ 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೂ ನಾಲ್ಕು ತಿಂಗಳು ಬಾಕಿ ಇರುವಾಗಲೇ ಎಬಿ ಡಿವಿಲಿಯರ್ಸ್‌, ಆರ್‌ಸಿಬಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

 

 

andolana

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

2 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

2 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

2 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

2 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

2 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

2 hours ago