ಕ್ರೀಡೆ

ಆರ್‌ಸಿಬಿಯೇ ನನಗೆ ಒಂದು ಜಗತ್ತು : ಎಬಿಡಿ

ಸ್ಟಾರ್ ಸ್ಪೋರ್ಟ್ಸ್‌ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಇನ್ನು ಎಷ್ಟು ಆವೃತ್ತಿಗಳು ಮುಗಿದಿರಬಹುದು ಹೇಳಿ?, ಹದಿನಾಲ್ಕೊ, ಹದಿನೈದೋ ಅಥವಾ ಎಷ್ಟೋ ಆಗಿರಬಹುದು. ಆದರೆ ಅವರು ಈ ಸಂಕೋಲೆಯಿಂದ ಹೊರಬರಲು ಇಷ್ಟಪಡುತ್ತಿದ್ದಾರೆ. ಒಂದು ವೇಳೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಒಂದು ಕಪ್ ಗೆದ್ದರೇ, ಇದಾದ ಬಳಿಕ ಎರಡು, ಮೂರು, ನಾಲ್ಕು ಟ್ರೋಫಿಗಳನ್ನು ಚುರುಕಾಗಿ ಗೆಲ್ಲಲಿದೆ. ಕಾದು ನೋಡೋಣ ಏನಾಗುತ್ತದೆ ಎಂದು. ಟಿ20 ಕ್ರಿಕೆಟ್ ಒಂದು ರೀತಿ ಗ್ಯಾಂಬಲ್ ಎನಿಸುತ್ತದೆ. ಇಲ್ಲಿ ಏನು ಬೇಕಾದರೂ ಆಗಬಹುದು. ಅದರಲ್ಲೂ ನಾಕೌಟ್ ಪಂದ್ಯಗಳಲ್ಲಿ, ಆದರೆ ಈ ಬಾರಿ ಆರ್‌ಸಿಬಿ ಒಳ್ಳೆಯ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಸಿಬಿ ಜತೆಗನ ಒಡನಾಟದ ಬಗ್ಗೆ ಮಾತನಾಡಿರುವ ಎಬಿ ಡಿವಿಲಿಯರ್ಸ್‌, ನಾನು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಮನಸಾರೆ ಇಷ್ಟಪಡುತ್ತೇನೆ. ಆರ್‌ಸಿಬಿಯೇ ನನಗೆ ಒಂದು ಜಗತ್ತು, ಇದು ನನ್ನ ಬದುಕನ್ನೇ ಬದಲಿಸಿದೆ. ನಾನು 2011ರಿಂದ ಆರ್‌ಸಿಬಿ ಜತೆಗಿನ ಪಯಣ ಆರಂಭಿಸಿದೆ. ಇಲ್ಲಿ ನನ್ನ ಜೀವನದ ಅಮೂಲ್ಯ ಸ್ನೇಹಿತರನ್ನು ಪಡೆದೆ. ಇದು ನನ್ನ ಒಂದು ಭಾಗ, ನನ್ನ ಕುಟುಂಬ. ಅದಕ್ಕಾಗಿಯೇ ನಾವು ಹೇಳುವುದು ನಾವೆಲ್ಲಾ ಆರ್‌ಸಿಬಿಯನ್ಸ್‌ ಎಂದು ಎಬಿ ಡಿವಿಲಿಯರ್ಸ್‌ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಮ್ಮೆ ಪ್ರಶಸ್ತಿ ಬರ ನೀಗಿಸಿಕೊಂಡರೇ, ಆ ಬಳಿಕ ಚುರುಕಾಗಿಯೇ ಮೂರ್ನಾಲ್ಕು ಟ್ರೋಫಿ ಗೆಲ್ಲುವ ಸಾಮರ್ಥ್ಯ ಆರ್‌ಸಿಬಿ ತಂಡಕ್ಕಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹಾಗೂ ಆರ್‌ಸಿಬಿ ತಂಡದ ಆಪತ್ಬಾಂದವ ಎನಿಸಿಕೊಂಡಿದ್ದ ಎಬಿ ಡಿವಿಲಿಯರ್ಸ್‌ ಅಭಿಪ್ರಾಯಪಟ್ಟಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೂ ಮೂರು ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದೆಯಾದರೂ, ಕಪ್‌ ಗೆಲ್ಲಲು ಇನ್ನೂ ಸಾಧ್ಯವಾಗಿಲ್ಲ.

ಇನ್ನು 2022ರ ಐಪಿಎಲ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಿನಿ ಹರಾಜಿಗೂ ಮುನ್ನ ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು ತಂಡ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಇನ್ನೂ 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೂ ನಾಲ್ಕು ತಿಂಗಳು ಬಾಕಿ ಇರುವಾಗಲೇ ಎಬಿ ಡಿವಿಲಿಯರ್ಸ್‌, ಆರ್‌ಸಿಬಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

 

 

andolana

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

3 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

3 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

3 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

8 hours ago