ಕ್ರೀಡೆ

ಆರ್‌ಸಿಬಿಯೇ ನನಗೆ ಒಂದು ಜಗತ್ತು : ಎಬಿಡಿ

ಸ್ಟಾರ್ ಸ್ಪೋರ್ಟ್ಸ್‌ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಇನ್ನು ಎಷ್ಟು ಆವೃತ್ತಿಗಳು ಮುಗಿದಿರಬಹುದು ಹೇಳಿ?, ಹದಿನಾಲ್ಕೊ, ಹದಿನೈದೋ ಅಥವಾ ಎಷ್ಟೋ ಆಗಿರಬಹುದು. ಆದರೆ ಅವರು ಈ ಸಂಕೋಲೆಯಿಂದ ಹೊರಬರಲು ಇಷ್ಟಪಡುತ್ತಿದ್ದಾರೆ. ಒಂದು ವೇಳೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಒಂದು ಕಪ್ ಗೆದ್ದರೇ, ಇದಾದ ಬಳಿಕ ಎರಡು, ಮೂರು, ನಾಲ್ಕು ಟ್ರೋಫಿಗಳನ್ನು ಚುರುಕಾಗಿ ಗೆಲ್ಲಲಿದೆ. ಕಾದು ನೋಡೋಣ ಏನಾಗುತ್ತದೆ ಎಂದು. ಟಿ20 ಕ್ರಿಕೆಟ್ ಒಂದು ರೀತಿ ಗ್ಯಾಂಬಲ್ ಎನಿಸುತ್ತದೆ. ಇಲ್ಲಿ ಏನು ಬೇಕಾದರೂ ಆಗಬಹುದು. ಅದರಲ್ಲೂ ನಾಕೌಟ್ ಪಂದ್ಯಗಳಲ್ಲಿ, ಆದರೆ ಈ ಬಾರಿ ಆರ್‌ಸಿಬಿ ಒಳ್ಳೆಯ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಸಿಬಿ ಜತೆಗನ ಒಡನಾಟದ ಬಗ್ಗೆ ಮಾತನಾಡಿರುವ ಎಬಿ ಡಿವಿಲಿಯರ್ಸ್‌, ನಾನು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಮನಸಾರೆ ಇಷ್ಟಪಡುತ್ತೇನೆ. ಆರ್‌ಸಿಬಿಯೇ ನನಗೆ ಒಂದು ಜಗತ್ತು, ಇದು ನನ್ನ ಬದುಕನ್ನೇ ಬದಲಿಸಿದೆ. ನಾನು 2011ರಿಂದ ಆರ್‌ಸಿಬಿ ಜತೆಗಿನ ಪಯಣ ಆರಂಭಿಸಿದೆ. ಇಲ್ಲಿ ನನ್ನ ಜೀವನದ ಅಮೂಲ್ಯ ಸ್ನೇಹಿತರನ್ನು ಪಡೆದೆ. ಇದು ನನ್ನ ಒಂದು ಭಾಗ, ನನ್ನ ಕುಟುಂಬ. ಅದಕ್ಕಾಗಿಯೇ ನಾವು ಹೇಳುವುದು ನಾವೆಲ್ಲಾ ಆರ್‌ಸಿಬಿಯನ್ಸ್‌ ಎಂದು ಎಬಿ ಡಿವಿಲಿಯರ್ಸ್‌ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಮ್ಮೆ ಪ್ರಶಸ್ತಿ ಬರ ನೀಗಿಸಿಕೊಂಡರೇ, ಆ ಬಳಿಕ ಚುರುಕಾಗಿಯೇ ಮೂರ್ನಾಲ್ಕು ಟ್ರೋಫಿ ಗೆಲ್ಲುವ ಸಾಮರ್ಥ್ಯ ಆರ್‌ಸಿಬಿ ತಂಡಕ್ಕಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಹಾಗೂ ಆರ್‌ಸಿಬಿ ತಂಡದ ಆಪತ್ಬಾಂದವ ಎನಿಸಿಕೊಂಡಿದ್ದ ಎಬಿ ಡಿವಿಲಿಯರ್ಸ್‌ ಅಭಿಪ್ರಾಯಪಟ್ಟಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೂ ಮೂರು ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದೆಯಾದರೂ, ಕಪ್‌ ಗೆಲ್ಲಲು ಇನ್ನೂ ಸಾಧ್ಯವಾಗಿಲ್ಲ.

ಇನ್ನು 2022ರ ಐಪಿಎಲ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಿನಿ ಹರಾಜಿಗೂ ಮುನ್ನ ಟಿ20 ಸ್ಪೆಷಲಿಸ್ಟ್ ಆಟಗಾರರನ್ನು ಉಳಿಸಿಕೊಂಡಿದೆ. ಇನ್ನು ತಂಡ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಇನ್ನೂ 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೂ ನಾಲ್ಕು ತಿಂಗಳು ಬಾಕಿ ಇರುವಾಗಲೇ ಎಬಿ ಡಿವಿಲಿಯರ್ಸ್‌, ಆರ್‌ಸಿಬಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

 

 

andolana

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

19 mins ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

27 mins ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

29 mins ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

31 mins ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

32 mins ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

35 mins ago