ಕ್ರೀಡೆ

ಕನ್ನಡಕ್ಕೆ ಮೊದಲ ಆದ್ಯತೆ ಜೊತೆಗೆ ಬಹುಭಾಷಾ ಸೂತ್ರ: ಆರ್‌ಸಿಬಿ

18ನೇ ಆವೃತ್ತಿಯ ಐಪಿಎಲ್‌ಗಾಗಿ ನಡೆದ ಬಿಡ್‌ನಲ್ಲಿ ಆರ್‌ಸಿಬಿ ಟೀಂ ಆಟಗಾರರನ್ನು ಖರೀದಿಸಿದ ನಂತರ ಹಿಂದಿ ಭಾಷೆಯಲ್ಲಿ ತನ್ನ ಅಧಿಕೃತ ಎಕ್ಸ್ ಖಾತೆ ತೆರೆಯುವ ಮೂಲಕ ಆರ್‌ಸಿಬಿ ಆಟಗಾರರನ್ನು ಕನ್ನಡದ ಜೊತೆಗೆ ಹಿಂದಿಯಲ್ಲೂ ಪರಿಚಯಿಸಿತ್ತು.

ಇದರಿಂದ ಆರ್‌ಸಿಬಿಯು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಮುಂದೆ ದೊಡ್ಡ ಹೋರಾಟದ ಸುಳಿವು ನೀಡಿದ ಕನ್ನಡಿಗರ ಆಕ್ರೋಶವನ್ನು ತಿಳಿಮಾಡಲು ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಬಹುಭಾಷಾ ವಿಸ್ತರಣಾ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಿಂದ ಇತರ ಭಾರತೀಯ ಭಾಷೆಗಳ ಅಭಿಮಾನಿಗಳಿಗೂ ಹತ್ತಿರವಾಗುವ ಉದ್ದೇಶವಿದೆ ಎಂದು ಆರ್‌ಸಿಬಿ ತಿಳಿಸಿದೆ.

ಈಗ ಎದ್ದಿರುವ ವಿವಾದಕ್ಕೆ ಸ್ಪಷ್ಟನೆ ನೀಡುವುದರ ಜೊತೆಗೆ ಆರ್‌ಸಿಬಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುತ್ತದೆ. ಪ್ರಪಂಚದಾದ್ಯಂತ ಕೋಟ್ಯಾಂತರ ಅಭಿಮಾನಿಗಳಿರುವ ಐಪಿಎಲ್‌ ಪ್ರಾಂಚೈಸಿಗಳಲ್ಲಿ ಆರ್‌ಸಿಬಿ ಮುಂಚೂಣಿಯಲ್ಲಿದೆ.

ಕೋಟ್ಯಾಂತರ ಅಭಿಮಾನಿಗಳನ್ನು ಒಳಗೊಳ್ಳುವ ಉದ್ದೇಶದಿಂದ ಬಹುಭಾಷಾ ಸೂತ್ರ ಅಳವಡಿಸಲು ಮೊದಲು ಕನ್ನಡ ಇನ್‌ಸ್ಟಾಗ್ರಾಮ್‌ ತೆರೆಯಲಾಗಿದೆ. ಇದಕ್ಕೆ ಒಂದು ತಿಂಗಳಲ್ಲೇ 1.6 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳಾಗಿದ್ದು, ಇದು ಪ್ರಾಂಚೈಸಿಯ ಬದ್ಧತೆ ತೋರಿಸುತ್ತದೆ. ನಂತರ ಬೇರೆ ಭಾಷೆಯ ಚಿಂತನೆ ನಡೆಸಿದೆ.

ಮುಂಬರುವ ದಿನಗಳಲ್ಲಿ 1,000ಕ್ಕೂ ಹೆಚ್ಚು ವೀಡಿಯೋಗಳನ್ನು ಪೋಸ್ಟ್‌ ಮಾಡಲು ಸಿದ್ಧತೆ ನಡೆಸಿದೆ. AI ಆಧಾರಿತ ತಂತ್ರಜ್ಞಾನ ಬಳಸಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಲಾಗಿದ್ದು ನಂತರ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ.

ಆರ್‌ಸಿಬಿಯ ಬಹುಭಾಷಾ ವಿಸ್ತರಣಾ ಭಾಗವಾಗಿ ಮೊದಲು 2025ರಲ್ಲಿ ತೆಲುಗು ಖಾತೆ ಆರಂಭವಾಗಲಿದ್ದು, 2026ರಲ್ಲಿ ಮಲಯಾಳಂ, ಪಂಜಾಬಿ, ಮತ್ತು ಬಂಗಾಳಿ ಭಾಷೆಗಳಲ್ಲೂ ಖಾತೆ ತೆರೆದು ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

20 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

43 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

1 hour ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago