ಕ್ರೀಡೆ

ಕನ್ನಡಕ್ಕೆ ಮೊದಲ ಆದ್ಯತೆ ಜೊತೆಗೆ ಬಹುಭಾಷಾ ಸೂತ್ರ: ಆರ್‌ಸಿಬಿ

18ನೇ ಆವೃತ್ತಿಯ ಐಪಿಎಲ್‌ಗಾಗಿ ನಡೆದ ಬಿಡ್‌ನಲ್ಲಿ ಆರ್‌ಸಿಬಿ ಟೀಂ ಆಟಗಾರರನ್ನು ಖರೀದಿಸಿದ ನಂತರ ಹಿಂದಿ ಭಾಷೆಯಲ್ಲಿ ತನ್ನ ಅಧಿಕೃತ ಎಕ್ಸ್ ಖಾತೆ ತೆರೆಯುವ ಮೂಲಕ ಆರ್‌ಸಿಬಿ ಆಟಗಾರರನ್ನು ಕನ್ನಡದ ಜೊತೆಗೆ ಹಿಂದಿಯಲ್ಲೂ ಪರಿಚಯಿಸಿತ್ತು.

ಇದರಿಂದ ಆರ್‌ಸಿಬಿಯು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಮುಂದೆ ದೊಡ್ಡ ಹೋರಾಟದ ಸುಳಿವು ನೀಡಿದ ಕನ್ನಡಿಗರ ಆಕ್ರೋಶವನ್ನು ತಿಳಿಮಾಡಲು ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಬಹುಭಾಷಾ ವಿಸ್ತರಣಾ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಿಂದ ಇತರ ಭಾರತೀಯ ಭಾಷೆಗಳ ಅಭಿಮಾನಿಗಳಿಗೂ ಹತ್ತಿರವಾಗುವ ಉದ್ದೇಶವಿದೆ ಎಂದು ಆರ್‌ಸಿಬಿ ತಿಳಿಸಿದೆ.

ಈಗ ಎದ್ದಿರುವ ವಿವಾದಕ್ಕೆ ಸ್ಪಷ್ಟನೆ ನೀಡುವುದರ ಜೊತೆಗೆ ಆರ್‌ಸಿಬಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುತ್ತದೆ. ಪ್ರಪಂಚದಾದ್ಯಂತ ಕೋಟ್ಯಾಂತರ ಅಭಿಮಾನಿಗಳಿರುವ ಐಪಿಎಲ್‌ ಪ್ರಾಂಚೈಸಿಗಳಲ್ಲಿ ಆರ್‌ಸಿಬಿ ಮುಂಚೂಣಿಯಲ್ಲಿದೆ.

ಕೋಟ್ಯಾಂತರ ಅಭಿಮಾನಿಗಳನ್ನು ಒಳಗೊಳ್ಳುವ ಉದ್ದೇಶದಿಂದ ಬಹುಭಾಷಾ ಸೂತ್ರ ಅಳವಡಿಸಲು ಮೊದಲು ಕನ್ನಡ ಇನ್‌ಸ್ಟಾಗ್ರಾಮ್‌ ತೆರೆಯಲಾಗಿದೆ. ಇದಕ್ಕೆ ಒಂದು ತಿಂಗಳಲ್ಲೇ 1.6 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳಾಗಿದ್ದು, ಇದು ಪ್ರಾಂಚೈಸಿಯ ಬದ್ಧತೆ ತೋರಿಸುತ್ತದೆ. ನಂತರ ಬೇರೆ ಭಾಷೆಯ ಚಿಂತನೆ ನಡೆಸಿದೆ.

ಮುಂಬರುವ ದಿನಗಳಲ್ಲಿ 1,000ಕ್ಕೂ ಹೆಚ್ಚು ವೀಡಿಯೋಗಳನ್ನು ಪೋಸ್ಟ್‌ ಮಾಡಲು ಸಿದ್ಧತೆ ನಡೆಸಿದೆ. AI ಆಧಾರಿತ ತಂತ್ರಜ್ಞಾನ ಬಳಸಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಲಾಗಿದ್ದು ನಂತರ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ.

ಆರ್‌ಸಿಬಿಯ ಬಹುಭಾಷಾ ವಿಸ್ತರಣಾ ಭಾಗವಾಗಿ ಮೊದಲು 2025ರಲ್ಲಿ ತೆಲುಗು ಖಾತೆ ಆರಂಭವಾಗಲಿದ್ದು, 2026ರಲ್ಲಿ ಮಲಯಾಳಂ, ಪಂಜಾಬಿ, ಮತ್ತು ಬಂಗಾಳಿ ಭಾಷೆಗಳಲ್ಲೂ ಖಾತೆ ತೆರೆದು ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

6 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

6 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

6 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

7 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

7 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

7 hours ago