ಕ್ರೀಡೆ

ಕನ್ನಡಕ್ಕೆ ಮೊದಲ ಆದ್ಯತೆ ಜೊತೆಗೆ ಬಹುಭಾಷಾ ಸೂತ್ರ: ಆರ್‌ಸಿಬಿ

18ನೇ ಆವೃತ್ತಿಯ ಐಪಿಎಲ್‌ಗಾಗಿ ನಡೆದ ಬಿಡ್‌ನಲ್ಲಿ ಆರ್‌ಸಿಬಿ ಟೀಂ ಆಟಗಾರರನ್ನು ಖರೀದಿಸಿದ ನಂತರ ಹಿಂದಿ ಭಾಷೆಯಲ್ಲಿ ತನ್ನ ಅಧಿಕೃತ ಎಕ್ಸ್ ಖಾತೆ ತೆರೆಯುವ ಮೂಲಕ ಆರ್‌ಸಿಬಿ ಆಟಗಾರರನ್ನು ಕನ್ನಡದ ಜೊತೆಗೆ ಹಿಂದಿಯಲ್ಲೂ ಪರಿಚಯಿಸಿತ್ತು.

ಇದರಿಂದ ಆರ್‌ಸಿಬಿಯು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಮುಂದೆ ದೊಡ್ಡ ಹೋರಾಟದ ಸುಳಿವು ನೀಡಿದ ಕನ್ನಡಿಗರ ಆಕ್ರೋಶವನ್ನು ತಿಳಿಮಾಡಲು ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಬಹುಭಾಷಾ ವಿಸ್ತರಣಾ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಿಂದ ಇತರ ಭಾರತೀಯ ಭಾಷೆಗಳ ಅಭಿಮಾನಿಗಳಿಗೂ ಹತ್ತಿರವಾಗುವ ಉದ್ದೇಶವಿದೆ ಎಂದು ಆರ್‌ಸಿಬಿ ತಿಳಿಸಿದೆ.

ಈಗ ಎದ್ದಿರುವ ವಿವಾದಕ್ಕೆ ಸ್ಪಷ್ಟನೆ ನೀಡುವುದರ ಜೊತೆಗೆ ಆರ್‌ಸಿಬಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುತ್ತದೆ. ಪ್ರಪಂಚದಾದ್ಯಂತ ಕೋಟ್ಯಾಂತರ ಅಭಿಮಾನಿಗಳಿರುವ ಐಪಿಎಲ್‌ ಪ್ರಾಂಚೈಸಿಗಳಲ್ಲಿ ಆರ್‌ಸಿಬಿ ಮುಂಚೂಣಿಯಲ್ಲಿದೆ.

ಕೋಟ್ಯಾಂತರ ಅಭಿಮಾನಿಗಳನ್ನು ಒಳಗೊಳ್ಳುವ ಉದ್ದೇಶದಿಂದ ಬಹುಭಾಷಾ ಸೂತ್ರ ಅಳವಡಿಸಲು ಮೊದಲು ಕನ್ನಡ ಇನ್‌ಸ್ಟಾಗ್ರಾಮ್‌ ತೆರೆಯಲಾಗಿದೆ. ಇದಕ್ಕೆ ಒಂದು ತಿಂಗಳಲ್ಲೇ 1.6 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳಾಗಿದ್ದು, ಇದು ಪ್ರಾಂಚೈಸಿಯ ಬದ್ಧತೆ ತೋರಿಸುತ್ತದೆ. ನಂತರ ಬೇರೆ ಭಾಷೆಯ ಚಿಂತನೆ ನಡೆಸಿದೆ.

ಮುಂಬರುವ ದಿನಗಳಲ್ಲಿ 1,000ಕ್ಕೂ ಹೆಚ್ಚು ವೀಡಿಯೋಗಳನ್ನು ಪೋಸ್ಟ್‌ ಮಾಡಲು ಸಿದ್ಧತೆ ನಡೆಸಿದೆ. AI ಆಧಾರಿತ ತಂತ್ರಜ್ಞಾನ ಬಳಸಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಲಾಗಿದ್ದು ನಂತರ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ.

ಆರ್‌ಸಿಬಿಯ ಬಹುಭಾಷಾ ವಿಸ್ತರಣಾ ಭಾಗವಾಗಿ ಮೊದಲು 2025ರಲ್ಲಿ ತೆಲುಗು ಖಾತೆ ಆರಂಭವಾಗಲಿದ್ದು, 2026ರಲ್ಲಿ ಮಲಯಾಳಂ, ಪಂಜಾಬಿ, ಮತ್ತು ಬಂಗಾಳಿ ಭಾಷೆಗಳಲ್ಲೂ ಖಾತೆ ತೆರೆದು ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

4 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

4 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

5 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

5 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

5 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

5 hours ago