18ನೇ ಆವೃತ್ತಿಯ ಐಪಿಎಲ್ಗಾಗಿ ನಡೆದ ಬಿಡ್ನಲ್ಲಿ ಆರ್ಸಿಬಿ ಟೀಂ ಆಟಗಾರರನ್ನು ಖರೀದಿಸಿದ ನಂತರ ಹಿಂದಿ ಭಾಷೆಯಲ್ಲಿ ತನ್ನ ಅಧಿಕೃತ ಎಕ್ಸ್ ಖಾತೆ ತೆರೆಯುವ ಮೂಲಕ ಆರ್ಸಿಬಿ ಆಟಗಾರರನ್ನು ಕನ್ನಡದ ಜೊತೆಗೆ ಹಿಂದಿಯಲ್ಲೂ ಪರಿಚಯಿಸಿತ್ತು.
ಇದರಿಂದ ಆರ್ಸಿಬಿಯು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಮುಂದೆ ದೊಡ್ಡ ಹೋರಾಟದ ಸುಳಿವು ನೀಡಿದ ಕನ್ನಡಿಗರ ಆಕ್ರೋಶವನ್ನು ತಿಳಿಮಾಡಲು ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಬಹುಭಾಷಾ ವಿಸ್ತರಣಾ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಿಂದ ಇತರ ಭಾರತೀಯ ಭಾಷೆಗಳ ಅಭಿಮಾನಿಗಳಿಗೂ ಹತ್ತಿರವಾಗುವ ಉದ್ದೇಶವಿದೆ ಎಂದು ಆರ್ಸಿಬಿ ತಿಳಿಸಿದೆ.
ಈಗ ಎದ್ದಿರುವ ವಿವಾದಕ್ಕೆ ಸ್ಪಷ್ಟನೆ ನೀಡುವುದರ ಜೊತೆಗೆ ಆರ್ಸಿಬಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುತ್ತದೆ. ಪ್ರಪಂಚದಾದ್ಯಂತ ಕೋಟ್ಯಾಂತರ ಅಭಿಮಾನಿಗಳಿರುವ ಐಪಿಎಲ್ ಪ್ರಾಂಚೈಸಿಗಳಲ್ಲಿ ಆರ್ಸಿಬಿ ಮುಂಚೂಣಿಯಲ್ಲಿದೆ.
ಕೋಟ್ಯಾಂತರ ಅಭಿಮಾನಿಗಳನ್ನು ಒಳಗೊಳ್ಳುವ ಉದ್ದೇಶದಿಂದ ಬಹುಭಾಷಾ ಸೂತ್ರ ಅಳವಡಿಸಲು ಮೊದಲು ಕನ್ನಡ ಇನ್ಸ್ಟಾಗ್ರಾಮ್ ತೆರೆಯಲಾಗಿದೆ. ಇದಕ್ಕೆ ಒಂದು ತಿಂಗಳಲ್ಲೇ 1.6 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ಗಳಾಗಿದ್ದು, ಇದು ಪ್ರಾಂಚೈಸಿಯ ಬದ್ಧತೆ ತೋರಿಸುತ್ತದೆ. ನಂತರ ಬೇರೆ ಭಾಷೆಯ ಚಿಂತನೆ ನಡೆಸಿದೆ.
ಮುಂಬರುವ ದಿನಗಳಲ್ಲಿ 1,000ಕ್ಕೂ ಹೆಚ್ಚು ವೀಡಿಯೋಗಳನ್ನು ಪೋಸ್ಟ್ ಮಾಡಲು ಸಿದ್ಧತೆ ನಡೆಸಿದೆ. AI ಆಧಾರಿತ ತಂತ್ರಜ್ಞಾನ ಬಳಸಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಲಾಗಿದ್ದು ನಂತರ ಇತರೆ ಭಾಷೆಗಳಿಗೆ ಡಬ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ.
ಆರ್ಸಿಬಿಯ ಬಹುಭಾಷಾ ವಿಸ್ತರಣಾ ಭಾಗವಾಗಿ ಮೊದಲು 2025ರಲ್ಲಿ ತೆಲುಗು ಖಾತೆ ಆರಂಭವಾಗಲಿದ್ದು, 2026ರಲ್ಲಿ ಮಲಯಾಳಂ, ಪಂಜಾಬಿ, ಮತ್ತು ಬಂಗಾಳಿ ಭಾಷೆಗಳಲ್ಲೂ ಖಾತೆ ತೆರೆದು ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…