ಕ್ರೀಡೆ

IPL 2024: ಗೋ ಗ್ರೀನ್‌ ಪ್ರಯುಕ್ತ ಮೂರು ಕೆರೆಗಳಿಗೆ ಮರುಜೀವ ನೀಡಿದ ನಮ್ಮ ಆರ್‌ಸಿಬಿ!

ಬೆಂಗಳೂರು: ಪ್ರತೀ ಸೀಸನ್‌ ನಂತೆಯೇ ಈ ಬಾರಿಯೂ ಕೂಡಾ ಆರ್‌ಸಿಬಿ ತನ್ನ ಗ್ರೀನ್‌ ಜೆರ್ಸಿ ಪಂದ್ಯ ಆಡಲು ಮುಂದಾಗಿದೆ. ನಾಳೆ (ಏ.೨೧) ಕೊಲ್ಕತ್ತಾ ವಿರುದ್ಧ ಆರ್‌ಸಿಬಿ ಈ ಸೀಸನ್‌ನ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ತನ್ನ ಸಂಪ್ರದಾಯದಂತೆ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ.

ಸ್ವಚ್ಛತೆ, ಪರಿಸರ ಜಾಗೃತಿ ವಿಚಾರವಾಗಿ ಅಭಿಮಾನಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿ ಸೀಸನ್‌ ನಲ್ಲಿ ಆರ್‌ಸಿಬಿ ಒಂದು ಪಂದ್ಯವನ್ನು ಹಸಿರು ಬಣ್ಣದ ಜೆರ್ಸಿ ತೊಟ್ಟು ಪಂದ್ಯ ಆಡುವ ಮೂಲಕ ಪರಿಸರ ಕಾಳಜಿ ಬಗ್ಗೆ ಪ್ರಚಾರ ಮಾಡಲಿದೆ.

https://x.com/RCBTweets/status/1781628578154848612

ಕಳೆದ ಬಾರಿ ಆರ್‌ಸಿಬಿ ಗ್ರೀನ್‌ ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದ ವೇಳೆ, ಮೂರು ಕೆರೆಗಳ ಪುನರುಜ್ಜೀನವಗೊಳಿಸುವುದಾಗಿ ಹೇಳಿತ್ತು, ಅದರಂತೆ ಈಗ ಮೂರು ಕೆರೆಗಳ ಕೆಲಸವನ್ನು ವರ್ಷದೊಳಗೆ ಪೂರ್ಣಗೊಳಿಸಿದ್ದು, ಈ ಬಗ್ಗೆ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಇಂಡಿಯಾ ಕೇರ್ಸ್‌ ಫೌಂಡೇಶನ್‌ ವರದಿಯ ಪ್ರಕಾರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕಣ್ಣೂರು ಕೆರೆಗೆ ಮೂಲಸೌಕರ್ಯಗಳನ್ನು ಒದಗಿಸಿದೆ. ಇಟ್ಗಲ್ಪುರ ಕೆರೆ ಜೊತೆಗೆ ಸಾದೇನಹಳ್ಳಿ ಕೆರೆಗಳ ಪುನಶ್ಚೇತನ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ. ಈ ಕೆರೆಗಳ ಹೂಳೆತ್ತುವ ಕಾರ್ಯ ನಡೆಸಲಾಗಿದ್ದು, ಅದರಿಂದ ಸುಮಾರು 17 ಎಕೆರೆಗಳಷ್ಟು ನೀರನ್ನು ಸಂರಕ್ಷಿಸುವ ಸಾಮರ್ಥ್ಯವನ್ನು ಈ ಕೆರೆಗಳು ಹೊಂದಿವೆ.

ಕಣ್ಣೂರು ಕೆರೆ ಸುತ್ತಲೂ ಔಷಧೀಯ ಸಸ್ಯಗಳ ಉದ್ಯಾನವನ ಮತ್ತು ಚಿಟ್ಟೆ ಪಾರ್ಕ್‌ ನಿರ್ಮಿಸಲಾಗಿದೆ. ಈ ಕಾರ್ಯಕ್ರಮಕ್ಕೆ ದೇಶಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ. ಆರ್‌ಸಿಬಿ ತನ್ನ ವಿನೂತನ ಕಾರ್ಯಕ್ರಮಗಳ ಮೂಲಕ ಅಭಿಮಾನಿಗಳ ಮನಸ್ಸನ್ನು ಸದಾ ಗೆಲ್ಲುತ್ತಿದೆ.

ಇನ್ನು ಈ ಟೂರ್ನಿಯಲ್ಲಿ ಈವರೆಗೆ 7 ಪಂದ್ಯಗಳನ್ನಾಡಿರುವ ಆರ್‌ಸಿಬಿ ಕೇವಲ ಒಂದರಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋಲು ಕಂಡಿದೆ. ನಾಳೆ ಕೆಕೆಆರ್‌ ವಿರುದ್ಧ ನಡೆಯುವ ಪಂದ್ಯದಲ್ಲಿ ಆರ್‌ಸಿಬಿ ಸೋತಲ್ಲಿ ಭಾಗಶಃ ಟೂರ್ನಿಯಿಂದಲೇ ಹೊರ ಬೀಳುವ ಸಾಧ್ಯತೆಗಳಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

8 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago