ಕ್ರೀಡೆ

ಉದ್ಘಾಟನಾ ಪಂದ್ಯದಲ್ಲಿ ಮಿಂಚಿದ ಆರ್‌ಸಿಬಿ

ಕೊಹ್ಲಿ-ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್, ಎಸ್‌ಆರ್‌ಎಚ್ ವಿರುದ್ಧ ಭರ್ಜರಿ ಜಯ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ಆರ್‌ಸಿಬಿ ತಂಡವು ಇನ್ನೂ ೨೬ ಎಸೆತಗಳು ಬಾಕಿ ಇರುವಂತೆ ಸುಲಭವಾಗಿ ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ.

೨೦೨ ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡದ ಪರ ವಿರಾಟ್ ಕೊಹ್ಲಿ (ಅಜೇಯ ೬೯) ಹಾಗೂ ದೇವದತ್ತ ಪಡಿಕ್ಕಲ್ (೬೧ ರನ್) ಹಾಗೂ ರಜತ್ ಪಾಟಿದಾರ್ (೩೧ ರನ್) ಅವರು ಸ್ಛೋಟಕ ಬ್ಯಾಟಿಂಗ್ ನಡೆಸಿ ೧೫.೪ ಓವರ್ಗಳಲ್ಲಿ ಪಂದ್ಯವನ್ನು ಮುಕ್ತಾಯಗೊಳಿಸಿದರು

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಎಸ್‌ಆರ್‌ಎಚ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ ೨೯ ಆಗುವಷ್ಟರಲ್ಲಿ ತಂಡದ ಪ್ರಮುಖ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಪೆವಿಲಿಯನ್ ಸೇರಿಕೊಂಡರು. ಆದರೆ, ನಂತರ ಜೊತೆಯಾದ ಇಶಾನ್ ಕಿಶನ್ ಹಾಗೂ ಹೆನ್ರಿಕ್ ಕ್ಲಾಸನ್ ೯೭ ರನ್‌ಗಳ ಜೊತೆಯಾಟ ಆಡಿದರು.

ಈ ವೇಳೆ ನಾಯಕ ಇಶಾನ್ ಕಿಶನ್ (೮೦ ರನ್, ೬೫, ೪ ೮) ಕಲೆಹಾಕಿ ಔಟ್ ಆದರೆ, ಹೆನ್ರಿಕ್ ಕ್ಲಾಸನ್ ಕೂಡ ೩೧ ರನ್ ಗಳಿಸಿ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟ್ ಆದರು. ಕೆಳ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿದ ಅನಿಕೇತ್ ವರ್ಮಾ (೪೩ ರನ್, ೬೪, ೪ ೩ ) ಸ್ಛೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡದ ಮೊತ್ತವನ್ನು ೨೦೦ರ ಗಡಿ ದಾಟಿಸಿದರು. ಅಂತಿಮವಾಗಿ ಎಸ್‌ಆರ್‌ಎಚ್ ತಂಡವು ನಿಗದಿತ ೨೦ ಓವರ್‌ಗಳಲ್ಲಿ ೯ ವಿಕೆಟ್ ಕಳೆದುಕೊಂಡು ೨೦೧ ರನ್ ಕಲೆಹಾಕಿತು. ಆರ್‌ಸಿಬಿ ಪರ ಅಮೋಘ ಬೌಲಿಂಗ್ ದಾಳಿ ನಡೆಸಿದ ಜೇಕಬ್ ಡಫಿ ಹಾಗೂ ರೊಮಾರಿಯೊ ಶೇಫರ್ಡ್ ತಲಾ ೩ ವಿಕೆಟ್‌ಗಳನ್ನು ಪಡೆದುಕೊಂಡರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago