Mysore
33
scattered clouds

Social Media

ಮಂಗಳವಾರ, 26 ಮೇ 2026
Light
Dark

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಯ ಪ್ರಮಾಣವನ್ನು ತುಸು ಹೆಚ್ಚು ಮಾಡಲಾಗಿದ್ದು, ಸುಮಾರು 2300 ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಪಂದ್ಯ ವೀಕ್ಷಣೆಗೆ ಬರುವ ಅಪಾರ ಜನಸಂದಣಿಯನ್ನು ನಿಯಂತ್ರಿಸಲು ವಿಶೇಷ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್‌ ಇಲ್ಲದವರಿಗೆ ಸ್ಟೇಡಿಯಂ ಬಳಿ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನಕಲಿ ಟಿಕೆಟ್‌ ಮಾರಾಟ ಮತ್ತು ಇತರೆ ಚಟುವಟಿಕೆಗಳ ಮೇಲೆ ಸಿಸಿಬಿ ನಿರಂತರ ಕಣ್ಗಾವಲು ಇರಿಸಲಿದೆ.

 

 

Tags:
error: Content is protected !!