ಕ್ರೀಡೆ

ಸ್ಟಾರ್‌ ಆಲ್‌ರೌಂಡರ್‌ಗಳನ್ನು ಕೈಬಿಟ್ಟಿರುವ ಆರ್‌ಸಿಬಿಗೆ ಹಿನ್ನಡೆ ಆಗಬಹುದು: ಎಬಿಡಿ

ಬೆಂಗಳೂರು : ಡಿಸೆಂಬರ್‌ 19 ರಂದು ನಡೆಯಲಿರುವ 2024ರ ಐಪಿಎಲ್‌ ಮಿನಿ ಹರಾಜಿನ ಹಿನ್ನೆಲೆಯಲ್ಲಿ ನಮ್ಮ ಆರ್‌ಸಿಬಿ(ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು) ತಂಡ ಪ್ರಮುಖ ಇಬ್ಬರು ಆಟಗಾರರನ್ನು ಬಿಡುಗಡೆಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಿಸ್ಟರ್‌ 360 ಖ್ಯಾತಿಯ ಎಬಿ ಡಿವಿಲಿಯರ್ಸ್‌, ಇದು ಆರ್‌ಸಿಬಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದಿದ್ದಾರೆ

ತಮ್ಮ ಯಟೂಬ್‌ ಚಾನೆಲ್‌ ನಲ್ಲಿ ಮಾತನಾಡಿರುವ ಎಬಿಡಿ ಹರ್ಷಲ್‌ ಪಟೇಲ್‌ ಹಾಗೂ ವನಿಂದು ಹಸರಂಗ ಅವರನ್ನು ಬಿಡುಗಡೆಗೊಳಿಸಿದದ್ದು, ತಂಡಕ್ಕೆ ಭಾರಿ ಹಿನ್ನಡೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಸಿಬಿ 2022ರ ಮೆಗಾ ಹರಾಜಿನಲ್ಲಿ 10.75 ಕೋಟಿ ಖರ್ಚು ಮಾಡಿ ಹರ್ಷಲ್‌ ಪಟೇಲ್‌ ಹಾಗೂ ವನಿಂದು ಹಸರಂಗ ಅವರನ್ನು ಖರೀದಿಸಿತ್ತು. ಹಸರಂಗ 26 ವಿಕೆಟ್‌ ಪಡೆದು ಉತ್ತಮ ಪ್ರದರ್ಶನ ತೋರಿದರು. 2021ರಲ್ಲಿ ಅಮೋಘ ಬೌಲಿಂಗ್‌ ಮೂಲಕ ಗಮನ ಸೆಳೆದಿದ್ದ ಪರ್ಪಲ್‌ ಪಟೇಲ್‌ ಕಳೆದೆರೆಡು ಆವೃತ್ತಿಯಲ್ಲಿ ನೀರಸ ಪ್ರದರ್ಶನ ತೋರಿದ್ದರು. ಹಾಗಾಗಿ ಇವರನ್ನು 2024ರ ಐಪಿಎಲ್‌ ಗೂ ಮುನ್ನಾ ಮಿನಿ ಹರಾಜಿನಲ್ಲಿ ಆರ್‌ಸಿಬಿ ತಂಡದಿಂದ ಬಿಡುಗಡೆಗೊಳಿಸಿದೆ.

ಈ ಬಗ್ಗೆ ತಮ್ಮ ಯುಟೂಬ್‌ ಚಾನೆಲ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಎಬಿ ಡಿವಿಲಿಯರ್ಸ್‌, ತಂಡದ ಪರ್ಸ್ ಮೊತ್ತ ಹೆಚ್ಚಿಸುವ ಸಲುವಾಗಿ ಈ ಆಟಗಾರರನ್ನು ಬಿಡುಗಡೆ ಮಾಡಿದ್ದು ಉತ್ತಮ ನಿರ್ಧಾರ ಆಗಿದ್ದರೂ ತಂಡಕ್ಕೆ ಹಿನ್ನಡೆ ಆಗಿದೆ. ನೂತನ ಹೆಡ್ ಕೋಚ್ ಆಂಡಿ ಫ್ಲವರ್ ಅವರು ಜಾಣರಾಗಿದ್ದು, ಈ ಆಟಗಾರರ ಸ್ಥಾನವನ್ನು ಸಮರ್ಥವಾಗಿ ತುಂಬುವ ಆಟಗಾರರನ್ನು ಮಿನಿ ಹರಾಜಿನಲ್ಲಿ ಖರೀದಿಸುವ ಭರವಸೆ ಇದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹೇಳಿದ್ದಾರೆ.

ಡೆವಾಲ್ಡ್ ಬ್ರೇವಿಸ್  ಆರ್ ಸಿಬಿ ತಂಡದಲ್ಲಿರಬೇಕು:
“ಡೆವಾಲ್ಡ್ ಬ್ರೇವಿಸ್ ಅವರನ್ನು ಆರ್ ಸಿಬಿ ತಂಡದಲ್ಲಿ ನೋಡಲು ಬಯಸುತ್ತೇನೆ. ಚಿನ್ನಸ್ವಾಮಿ ಕ್ರೀಡಾಂಗಣವು ಅವರಿಗೆ ತುಂಬಾ ಸೂಕ್ತವಾಗಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬ್ರೇವಿಸ್ ಅವರನ್ನು ಬಿಡುಗಡೆ ಗೊಳಿಸಿದ್ದಾರೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಆ ತಂಡದ ಫ್ರಾಂಚೈಸಿ ಸಾಕಷ್ಟು ಯುವ ಆಟಗಾರರಿಂದ ತಂಡವನ್ನು ಸುದೀರ್ಘ ಕಾಲದವರೆಗೆ ಬಲಿಷ್ಠಗೊಳಿಸಲು ಬಯಸುತ್ತಾರೆ. ಏಕೆಂದರೆ ಕೆಲವು ವರ್ಷಗಳಿಂದ ತಮ್ಮ ಕನಸಿನ ತಂಡದಲ್ಲಿ ಸ್ಥಾನ ಪಡೆದಿರುವ ಯುವ ಆಟಗಾರರನ್ನು ತಂಡದ ಫ್ರಾಂಚೈಸಿ ಕೈಬಿಡಲು ಯೋಚಿಸುವುದಿಲ್ಲ,” ಎಂದು ಎಬಿಡಿ ವಿಲಿಯರ್ಸ್ ಹೇಳಿದ್ದಾರೆ.

ಡಿಸೆಂಬರ್ 19 ರಂದು ಮಿನಿ ಹರಾಜು
ಎಲ್ಲ 10 ತಂಡಗಳ ಫ್ರಾಂಚೈಸಿಗಳು 2024ರ ಐಪಿಎಲ್‌ ಟೂರ್ನಿಗೆ ಉಳಿಸಿಕೊಳ್ಳುವ ಮತ್ತು ಮಿನಿ ಹರಾಜಿಗೆ ಬಿಡುಗಡೆಗೊಳಿಸುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್‌ 26 (ಭಾನುವಾರ) ರ ಒಳಗೆ ಐಪಿಎಲ್‌ಗೆ ಕಳುಹಿಸಬೇಕಾಗಿದೆ. ಆ ಮೂಲಕ ಡಿಸೆಂಬರ್‌ 19 ರಂದು ದುಬೈನಲ್ಲಿ ಐಪಿಎಲ್ ಮಿನಿ ಹರಾಜು ನಡೆಯಲಿದೆ. ಈ ಮಿನಿ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು ತಮ್ಮ ಬೇಡಿಕೆಗೆ ತಕ್ಕಂತೆ ಆಟಗಾರರನ್ನು ಖರೀದಿಸಲಿವೆ.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

3 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

5 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

5 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

5 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

5 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

5 hours ago