ಕ್ರೀಡೆ

ಸ್ಟಾರ್‌ ಆಲ್‌ರೌಂಡರ್‌ಗಳನ್ನು ಕೈಬಿಟ್ಟಿರುವ ಆರ್‌ಸಿಬಿಗೆ ಹಿನ್ನಡೆ ಆಗಬಹುದು: ಎಬಿಡಿ

ಬೆಂಗಳೂರು : ಡಿಸೆಂಬರ್‌ 19 ರಂದು ನಡೆಯಲಿರುವ 2024ರ ಐಪಿಎಲ್‌ ಮಿನಿ ಹರಾಜಿನ ಹಿನ್ನೆಲೆಯಲ್ಲಿ ನಮ್ಮ ಆರ್‌ಸಿಬಿ(ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು) ತಂಡ ಪ್ರಮುಖ ಇಬ್ಬರು ಆಟಗಾರರನ್ನು ಬಿಡುಗಡೆಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಿಸ್ಟರ್‌ 360 ಖ್ಯಾತಿಯ ಎಬಿ ಡಿವಿಲಿಯರ್ಸ್‌, ಇದು ಆರ್‌ಸಿಬಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದಿದ್ದಾರೆ

ತಮ್ಮ ಯಟೂಬ್‌ ಚಾನೆಲ್‌ ನಲ್ಲಿ ಮಾತನಾಡಿರುವ ಎಬಿಡಿ ಹರ್ಷಲ್‌ ಪಟೇಲ್‌ ಹಾಗೂ ವನಿಂದು ಹಸರಂಗ ಅವರನ್ನು ಬಿಡುಗಡೆಗೊಳಿಸಿದದ್ದು, ತಂಡಕ್ಕೆ ಭಾರಿ ಹಿನ್ನಡೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆರ್‌ಸಿಬಿ 2022ರ ಮೆಗಾ ಹರಾಜಿನಲ್ಲಿ 10.75 ಕೋಟಿ ಖರ್ಚು ಮಾಡಿ ಹರ್ಷಲ್‌ ಪಟೇಲ್‌ ಹಾಗೂ ವನಿಂದು ಹಸರಂಗ ಅವರನ್ನು ಖರೀದಿಸಿತ್ತು. ಹಸರಂಗ 26 ವಿಕೆಟ್‌ ಪಡೆದು ಉತ್ತಮ ಪ್ರದರ್ಶನ ತೋರಿದರು. 2021ರಲ್ಲಿ ಅಮೋಘ ಬೌಲಿಂಗ್‌ ಮೂಲಕ ಗಮನ ಸೆಳೆದಿದ್ದ ಪರ್ಪಲ್‌ ಪಟೇಲ್‌ ಕಳೆದೆರೆಡು ಆವೃತ್ತಿಯಲ್ಲಿ ನೀರಸ ಪ್ರದರ್ಶನ ತೋರಿದ್ದರು. ಹಾಗಾಗಿ ಇವರನ್ನು 2024ರ ಐಪಿಎಲ್‌ ಗೂ ಮುನ್ನಾ ಮಿನಿ ಹರಾಜಿನಲ್ಲಿ ಆರ್‌ಸಿಬಿ ತಂಡದಿಂದ ಬಿಡುಗಡೆಗೊಳಿಸಿದೆ.

ಈ ಬಗ್ಗೆ ತಮ್ಮ ಯುಟೂಬ್‌ ಚಾನೆಲ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಎಬಿ ಡಿವಿಲಿಯರ್ಸ್‌, ತಂಡದ ಪರ್ಸ್ ಮೊತ್ತ ಹೆಚ್ಚಿಸುವ ಸಲುವಾಗಿ ಈ ಆಟಗಾರರನ್ನು ಬಿಡುಗಡೆ ಮಾಡಿದ್ದು ಉತ್ತಮ ನಿರ್ಧಾರ ಆಗಿದ್ದರೂ ತಂಡಕ್ಕೆ ಹಿನ್ನಡೆ ಆಗಿದೆ. ನೂತನ ಹೆಡ್ ಕೋಚ್ ಆಂಡಿ ಫ್ಲವರ್ ಅವರು ಜಾಣರಾಗಿದ್ದು, ಈ ಆಟಗಾರರ ಸ್ಥಾನವನ್ನು ಸಮರ್ಥವಾಗಿ ತುಂಬುವ ಆಟಗಾರರನ್ನು ಮಿನಿ ಹರಾಜಿನಲ್ಲಿ ಖರೀದಿಸುವ ಭರವಸೆ ಇದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹೇಳಿದ್ದಾರೆ.

ಡೆವಾಲ್ಡ್ ಬ್ರೇವಿಸ್  ಆರ್ ಸಿಬಿ ತಂಡದಲ್ಲಿರಬೇಕು:
“ಡೆವಾಲ್ಡ್ ಬ್ರೇವಿಸ್ ಅವರನ್ನು ಆರ್ ಸಿಬಿ ತಂಡದಲ್ಲಿ ನೋಡಲು ಬಯಸುತ್ತೇನೆ. ಚಿನ್ನಸ್ವಾಮಿ ಕ್ರೀಡಾಂಗಣವು ಅವರಿಗೆ ತುಂಬಾ ಸೂಕ್ತವಾಗಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬ್ರೇವಿಸ್ ಅವರನ್ನು ಬಿಡುಗಡೆ ಗೊಳಿಸಿದ್ದಾರೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಆ ತಂಡದ ಫ್ರಾಂಚೈಸಿ ಸಾಕಷ್ಟು ಯುವ ಆಟಗಾರರಿಂದ ತಂಡವನ್ನು ಸುದೀರ್ಘ ಕಾಲದವರೆಗೆ ಬಲಿಷ್ಠಗೊಳಿಸಲು ಬಯಸುತ್ತಾರೆ. ಏಕೆಂದರೆ ಕೆಲವು ವರ್ಷಗಳಿಂದ ತಮ್ಮ ಕನಸಿನ ತಂಡದಲ್ಲಿ ಸ್ಥಾನ ಪಡೆದಿರುವ ಯುವ ಆಟಗಾರರನ್ನು ತಂಡದ ಫ್ರಾಂಚೈಸಿ ಕೈಬಿಡಲು ಯೋಚಿಸುವುದಿಲ್ಲ,” ಎಂದು ಎಬಿಡಿ ವಿಲಿಯರ್ಸ್ ಹೇಳಿದ್ದಾರೆ.

ಡಿಸೆಂಬರ್ 19 ರಂದು ಮಿನಿ ಹರಾಜು
ಎಲ್ಲ 10 ತಂಡಗಳ ಫ್ರಾಂಚೈಸಿಗಳು 2024ರ ಐಪಿಎಲ್‌ ಟೂರ್ನಿಗೆ ಉಳಿಸಿಕೊಳ್ಳುವ ಮತ್ತು ಮಿನಿ ಹರಾಜಿಗೆ ಬಿಡುಗಡೆಗೊಳಿಸುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್‌ 26 (ಭಾನುವಾರ) ರ ಒಳಗೆ ಐಪಿಎಲ್‌ಗೆ ಕಳುಹಿಸಬೇಕಾಗಿದೆ. ಆ ಮೂಲಕ ಡಿಸೆಂಬರ್‌ 19 ರಂದು ದುಬೈನಲ್ಲಿ ಐಪಿಎಲ್ ಮಿನಿ ಹರಾಜು ನಡೆಯಲಿದೆ. ಈ ಮಿನಿ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು ತಮ್ಮ ಬೇಡಿಕೆಗೆ ತಕ್ಕಂತೆ ಆಟಗಾರರನ್ನು ಖರೀದಿಸಲಿವೆ.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

13 mins ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

22 mins ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

2 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

2 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

2 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

3 hours ago