ಕ್ರೀಡೆ

WPL-2024: ಆರ್‌ಸಿಬಿ ಆಲ್‌ರೌಂಡರ್‌ ಆಟಕ್ಕೆ ತಲೆ ಬಾಗಿದ ಯುಪಿ

ಬೆಂಗಳೂರು: ಸ್ಮೃತಿ ಮಂದಾನ ಹಾಗೂ ಎಲಿಸ್ ಪೆರಿ ಗಳಿಸಿದ ಆಕರ್ಷಕ ಅರ್ಧಶತಗಳ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯುಪಿ ವಾರಿಯರ್ಸ್ ವಿರುದ್ಧ ಜಯ ದಾಖಲಿಸಿದೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 198 ರನ್‌ಗಳ ಗುರಿ ಬೆನ್ನಟ್ಟುವಲ್ಲಿ ವಿಫಲವಾದ ಯುಪಿ 175 ರನ್‌ ಕಲೆಹಾಕಿ 23 ರನ್‌ ಗಳಿಂದ ಸೋಲೊಪ್ಪಿಕೊಂಡಿತು.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 198 ರನ್ ಕಲೆಹಾಕಿದೆ. ಆರ್‌ಸಿಬಿಗೆ ನಾಯಕಿ ಸ್ಮೃತಿ ಹಾಗೂ ಸಬ್ಬಿನೇನಿ ಮೇಘನಾ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್ ಪಾಲುದಾರಿಕೆಯಲ್ಲಿ ಕೇವಲ 5.3 ಓವರ್‌ಗಳಲ್ಲಿ 51 ರನ್‌ ಗಳಿಸಿತು. ಮೇಘನಾ (28) ಔಟಾದ ನಂತರ ಸ್ಮೃತಿ ಹಾಗೂ ಪೆರಿ ಆಟ ಕಳೆಗಟ್ಟಿತು. ಆರಂಭದಲ್ಲಿ ನಿಧಾನಗತಿಯಲ್ಲಿ ರನ್ ಗಳಿಸಿದ ಪೆರಿ ಏಕಾಏಕಿ ಬೀಸಾಟವಾಡಿದರು. ಈ ಇಬ್ಬರು 2ನೇ ವಿಕೆಟ್‌ಗೆ 95 ರನ್ ಸೇರಿಸಿದರು.

ಸ್ಮೃತಿ ಕೇವಲ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 80 ರನ್ ಸಿಡಿಸಿದರು. ಪೆರಿ 37 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ ಸೇರಿ 58 ರನ್ ಬಾರಿಸಿದರು. ಕೊನೆಯಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ರಿಚಾ ಘೋಷ್ 10 ಎಸೆತಗಳಲ್ಲಿ 21 ರನ್ ಗಳಿಸಿ, ತಂಡದ ಮೊತ್ತವನ್ನು ಇನ್ನೂರರ ಸನಿಹಕ್ಕೆ ಕೊಂಡೊಯ್ದರು.

ಯುಪಿ ಪರ ಅಂಜಲಿ, ದೀಪ್ತಿ ಶರ್ಮಾ ಮತ್ತು ಸೋಫಿ ತಲಾ ಒಂದು ವಿಕೆಟ್‌ ಪಡೆದರು.

ಬೃಹತ್‌ ಮೊತ್ತ ಬೆನ್ನತ್ತಿದ ಯುಪಿ ತಂಡಕ್ಕೆ ಬರ್ಜರಿ ಆರಂಭ ದೊರೆಯಿತು. ನಾಯಕಿ ಹೀಲಿ ಮತ್ತು ಕಿರಣ್‌ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಕಿರಣ್‌ 18 ರನ್‌ ಬಾರಿಸಿ ನಿರ್ಗಮಿಸಿದರೇ, ನಾಯಕಿ ಹೀಲಿ 38 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್‌ ಸಹಿತ 55 ಕಲೆಹಾಕಿ ಆರ್‌ಸಿಬಿ ಬೌಲರ್‌ ಗಳನ್ನು ಕಾಡಿದರು.

ಈ ಇಬ್ಬರು ಕಟ್ಟಿದ ಇನ್ನಿಂಗ್ಸ್‌ನ್ನು ಮುಂದಕ್ಕೆ ಕರೆದೊಯ್ಯುವಲ್ಲಿ ಯುಪಿ ಮಧ್ಯಮ ಕ್ರಮಾಂಕ ಎಡವಿತು. ಚಾಮರಿ ಅಟಾಪಟ್ಟು 8, ಹ್ಯಾರಿಸ್‌ 5 ಮತ್ತು ಶರಾವತ್‌ ಕೇವಲ 1 ರನ್‌ ಬಾರಿಸಿ ಬಂದ ದಾರಿಯಲ್ಲೇ ಹಿಂತಿರುಗಿದರು.

ಕೆಳ ಕ್ರಮಾಂಕದಲ್ಲಿ ದೀಪ್ತಿ ಶರ್ಮಾ ಮತ್ತು ಪೂನಂ ಸ್ವಲ್ಪ ಕಾಡಿದರು. ಈ ಇಬ್ಬರು ಕ್ರಮವಾಗಿ 33 ಮತ್ತು 28 ರನ್‌ ಬಾರಿಸಿದರು. ಕೊನೆಯಲ್ಲಿ ಬಂದವರು ತಂಡವನ್ನು ಗೆಲ್ಲಿಸುವಲ್ಲಿ ವಿಫಲರಾದರು.

ಆರ್‌ಸಿಬಿ ಪರ ಶೋಭನಾ, ಡಿವೈನ್‌ ಮತ್ತು ಜಾರ್ಜಿಯಾ ತಲಾ 2 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಸ್ಮೃತಿ ಮಂದನಾ

andolana

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago