ಕ್ರೀಡೆ

ಈ ಕಾರಣದಿಂದಲೇ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದೆ: ಸತ್ಯ ಬಿಚ್ಚಿಟ್ಟ ಎಬಿಡಿ!

ಜೋಹಾನ್ಸ್‌ ಬರ್ಗ್‌ : ಮಿಸ್ಟರ್‌ ೩೬೦ ಎಂಬ ಖ್ಯಾತಿಯೊಂದಿಗೆ ಇಡೀ ಕ್ರಿಕೆಟ್‌ ಜಗತ್ತಿಗೆ ಚಿರಪರಿಚಿತರಾದವರು ಸೌಥ್‌ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌. ಹರಿಣ ನಾಯಕ ಎಬಿಡಿ ೨೦೧೮ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ನಿಂದ ನಿವೃತ್ತಿ ಹೊಂದಿದ್ದರು. ಬಳಿಕ ಟಿ೨೦ ಲೀಗ್‌, ಪ್ರಾಂಚೈಸಿ ತಂಡಗಳಲ್ಲಿ ಆಡುವುದನ್ನು ಮುಂದುವರೆಸಿದ್ದರು. ಐಪಿಎಲ್‌ ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಆಡುತ್ತಿದ್ದ ಮಿಸ್ಟರ್‌ ೩೬೦, ೨೦೨೨ ರಲ್ಲಿ ಐಪಿಎಲ್‌ ನಿಂದಲೂ ದೂರವಾಗಿದ್ದರು.

ತಾವು ಕಳೆದೆರೆಡು ವರ್ಷಗಳಿಂದ ಕ್ರಿಕೆಟ್‌ ಆಡುವುದನ್ನು ನಿಲ್ಲಿಸಿರುವ ಕುರಿತು ಈಗ ಮನಬಿಚ್ಚಿ ಮಾತನಾಡಿರುವ ಎಬಿ ಡಿ ವಿಲಿಯರ್ಸ್‌ ಅವರು ಇದೇ ಕಾರಣಕ್ಕಾಗಿ ತಾವು ಕ್ರಿಕೆಟ್‌ನಿಂದ ದೂರವಾಗಿದ್ದಾಗಿ ಅವರು ತಿಳಿಸಿದ್ದಾರೆ.

ಕಳೆದ ೨ ವರ್ಷಗಳಿಂದ ನನ್ನ ವೃತ್ತಿ ಜೀವನದಲ್ಲಿ ದೃಷ್ಠಿಮಾಂದ್ಯತೆಯೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್‌ ಆಡುತ್ತಿದ್ದೇನೆ. ಇದರಿಂದಾಗಿಯೇ ಕ್ರಿಕೆಟ್‌ ಜೀವನದಿಂದ ಬೇಗ ನಿವೃತ್ತಿ ಪಡೆದುಕೊಂಡೆ ಎಂದು ದಕ್ಷಿಣ ಆಫ್ರಿಕಾ ತಂಡದ ಆಟಗಾರ ಎಬಿ ಡಿ ವಿಲಿಯರ್ಸ್‌ ತಾವು ಕ್ರಿಕೆಟ್‌ ತೊರೆಯಲು ನಿಜವಾದ ಕಾರಣವನ್ನು ತಿಳಿಸಿದ್ದಾರೆ.

ʼwisden cricket monthlyʼ ಪತ್ರಿಕೆಯೊಂದಿಗೆ ಮಾತನಾಡಿರುವ ಎಬಿಡಿ, ನನ್ನ ಕಿರಿಯ ಪುತ್ರ ಆಕಸ್ಮಿಕವಾಗಿ ನನ್ನ ಕಣ್ಣಿಗೆ ಒದ್ದಿದ್ದರಿಂದ ನನ್ನ ಕಣ್ಣುಗುಡ್ಡೆ ಹೊರಬಂದು ನಾನು ದೃಷ್ಠಿಮಾಂದ್ಯತೆಗೆ ಒಳಗಾದೆ. ಇದರಿಂದಾಗಿ ನನ್ನ ಬಲಗಣ್ಣು ದೃಷ್ಠಿಯನ್ನು ಕಳೆದುಕೊಳ್ಳಲು ಆರಂಭಿಸಿತು. ಕೇವಲ ಒಂದೇ ಕಣ್ಣಿನಲ್ಲಿ ಕ್ರಿಕೆಟ್‌ ಆಡಬೇಕಾಯಿತು ಎಂದು ನೈಜ್ಯ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ನನಗೆ ಶಸ್ತ್ರಚಿಕಿತ್ಸೆ ಮುಗಿದ ನಂತರ, ‘ಈ ಸ್ಥಿತಿಯಲ್ಲಿ ನೀವು ಜಗತ್ತಿನಲ್ಲಿ ಹೇಗೆ ಕ್ರಿಕೆಟ್ ಆಡುತ್ತೀರಿ?’ ಎಂದು ವೈದ್ಯರು ಪ್ರಶ್ನಿಸಿದರು. ಆದರೆ, ಅದೃಷ್ಟವಶಾತ್ ನನ್ನ ಎಡಗಣ್ಣು ಕಳೆದ ಎರಡು ವರ್ಷಗಳ ವೃತ್ತಿ ಜೀವನದಲ್ಲಿ ಯೋಗ್ಯವಾಗಿಯೇ ಕೆಲಸ ಮಾಡಿತು” ಎಂದೂ ಅವರು ತಿಳಿಸಿದ್ದಾರೆ.

ಇದಲ್ಲದೆ, ನಾನು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದನ್ನು ಹಿಂಪಡೆಯದಿರುವಲ್ಲಿ ಕೋವಿಡ್ ಕೂಡಾ ಪ್ರಮುಖ ಪಾತ್ರ ವಹಿಸಿತು. ೨೦೧೫ ರ ವಿಶ್ವಕಪ್ ಸೆಮಿಫೈನಲ್ ನಲ್ಲಿನ ಸೋಲು ನನಗೆ ಭಾರಿ ನೋವುಂಟು ಮಾಡಿತು ಹಾಗೂ ಅದರಿಂದ ಚೇತರಿಸಿಕೊಳ್ಳಲು ನನಗೆ ಸಾಕಷ್ಟು ಸಮಯ ಹಿಡಿಯಿತು ಎಂದು ಬಹಿರಂಗಪಡಿಸಿದ್ದಾರೆ.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

3 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

4 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

5 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

5 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

5 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 hours ago