ಕ್ರೀಡೆ

ಈ ಕಾರಣದಿಂದಲೇ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದೆ: ಸತ್ಯ ಬಿಚ್ಚಿಟ್ಟ ಎಬಿಡಿ!

ಜೋಹಾನ್ಸ್‌ ಬರ್ಗ್‌ : ಮಿಸ್ಟರ್‌ ೩೬೦ ಎಂಬ ಖ್ಯಾತಿಯೊಂದಿಗೆ ಇಡೀ ಕ್ರಿಕೆಟ್‌ ಜಗತ್ತಿಗೆ ಚಿರಪರಿಚಿತರಾದವರು ಸೌಥ್‌ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌. ಹರಿಣ ನಾಯಕ ಎಬಿಡಿ ೨೦೧೮ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ನಿಂದ ನಿವೃತ್ತಿ ಹೊಂದಿದ್ದರು. ಬಳಿಕ ಟಿ೨೦ ಲೀಗ್‌, ಪ್ರಾಂಚೈಸಿ ತಂಡಗಳಲ್ಲಿ ಆಡುವುದನ್ನು ಮುಂದುವರೆಸಿದ್ದರು. ಐಪಿಎಲ್‌ ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಆಡುತ್ತಿದ್ದ ಮಿಸ್ಟರ್‌ ೩೬೦, ೨೦೨೨ ರಲ್ಲಿ ಐಪಿಎಲ್‌ ನಿಂದಲೂ ದೂರವಾಗಿದ್ದರು.

ತಾವು ಕಳೆದೆರೆಡು ವರ್ಷಗಳಿಂದ ಕ್ರಿಕೆಟ್‌ ಆಡುವುದನ್ನು ನಿಲ್ಲಿಸಿರುವ ಕುರಿತು ಈಗ ಮನಬಿಚ್ಚಿ ಮಾತನಾಡಿರುವ ಎಬಿ ಡಿ ವಿಲಿಯರ್ಸ್‌ ಅವರು ಇದೇ ಕಾರಣಕ್ಕಾಗಿ ತಾವು ಕ್ರಿಕೆಟ್‌ನಿಂದ ದೂರವಾಗಿದ್ದಾಗಿ ಅವರು ತಿಳಿಸಿದ್ದಾರೆ.

ಕಳೆದ ೨ ವರ್ಷಗಳಿಂದ ನನ್ನ ವೃತ್ತಿ ಜೀವನದಲ್ಲಿ ದೃಷ್ಠಿಮಾಂದ್ಯತೆಯೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್‌ ಆಡುತ್ತಿದ್ದೇನೆ. ಇದರಿಂದಾಗಿಯೇ ಕ್ರಿಕೆಟ್‌ ಜೀವನದಿಂದ ಬೇಗ ನಿವೃತ್ತಿ ಪಡೆದುಕೊಂಡೆ ಎಂದು ದಕ್ಷಿಣ ಆಫ್ರಿಕಾ ತಂಡದ ಆಟಗಾರ ಎಬಿ ಡಿ ವಿಲಿಯರ್ಸ್‌ ತಾವು ಕ್ರಿಕೆಟ್‌ ತೊರೆಯಲು ನಿಜವಾದ ಕಾರಣವನ್ನು ತಿಳಿಸಿದ್ದಾರೆ.

ʼwisden cricket monthlyʼ ಪತ್ರಿಕೆಯೊಂದಿಗೆ ಮಾತನಾಡಿರುವ ಎಬಿಡಿ, ನನ್ನ ಕಿರಿಯ ಪುತ್ರ ಆಕಸ್ಮಿಕವಾಗಿ ನನ್ನ ಕಣ್ಣಿಗೆ ಒದ್ದಿದ್ದರಿಂದ ನನ್ನ ಕಣ್ಣುಗುಡ್ಡೆ ಹೊರಬಂದು ನಾನು ದೃಷ್ಠಿಮಾಂದ್ಯತೆಗೆ ಒಳಗಾದೆ. ಇದರಿಂದಾಗಿ ನನ್ನ ಬಲಗಣ್ಣು ದೃಷ್ಠಿಯನ್ನು ಕಳೆದುಕೊಳ್ಳಲು ಆರಂಭಿಸಿತು. ಕೇವಲ ಒಂದೇ ಕಣ್ಣಿನಲ್ಲಿ ಕ್ರಿಕೆಟ್‌ ಆಡಬೇಕಾಯಿತು ಎಂದು ನೈಜ್ಯ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ನನಗೆ ಶಸ್ತ್ರಚಿಕಿತ್ಸೆ ಮುಗಿದ ನಂತರ, ‘ಈ ಸ್ಥಿತಿಯಲ್ಲಿ ನೀವು ಜಗತ್ತಿನಲ್ಲಿ ಹೇಗೆ ಕ್ರಿಕೆಟ್ ಆಡುತ್ತೀರಿ?’ ಎಂದು ವೈದ್ಯರು ಪ್ರಶ್ನಿಸಿದರು. ಆದರೆ, ಅದೃಷ್ಟವಶಾತ್ ನನ್ನ ಎಡಗಣ್ಣು ಕಳೆದ ಎರಡು ವರ್ಷಗಳ ವೃತ್ತಿ ಜೀವನದಲ್ಲಿ ಯೋಗ್ಯವಾಗಿಯೇ ಕೆಲಸ ಮಾಡಿತು” ಎಂದೂ ಅವರು ತಿಳಿಸಿದ್ದಾರೆ.

ಇದಲ್ಲದೆ, ನಾನು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದನ್ನು ಹಿಂಪಡೆಯದಿರುವಲ್ಲಿ ಕೋವಿಡ್ ಕೂಡಾ ಪ್ರಮುಖ ಪಾತ್ರ ವಹಿಸಿತು. ೨೦೧೫ ರ ವಿಶ್ವಕಪ್ ಸೆಮಿಫೈನಲ್ ನಲ್ಲಿನ ಸೋಲು ನನಗೆ ಭಾರಿ ನೋವುಂಟು ಮಾಡಿತು ಹಾಗೂ ಅದರಿಂದ ಚೇತರಿಸಿಕೊಳ್ಳಲು ನನಗೆ ಸಾಕಷ್ಟು ಸಮಯ ಹಿಡಿಯಿತು ಎಂದು ಬಹಿರಂಗಪಡಿಸಿದ್ದಾರೆ.

andolanait

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

12 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

29 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

42 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago