ಬೆಂಗಳೂರು: ನಾನು ಕ್ರಿಕೆಟ್ ಆಟವನ್ನು ಬಹಳ ಪ್ರೀತಿಸುತ್ತೇನೆ. ನನ್ನಲ್ಲಿನ ಸ್ಪರ್ಧಾತ್ಮಕ ಪ್ರವೃತ್ತಿ ಜೀವಂತ ಇರುವವರೆಗೂ ನಿವೃತ್ತಿ ಘೋಷಿಸುವುದಿಲ್ಲ ಎಂದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೇಳಿದ್ದಾರೆ.
ನಾನು ಕ್ರಿಕೆಟ್ ಆಟವನ್ನು ಆನಂದಿಸುತ್ತಿದ್ದು, ನನ್ನ ಆತ್ಮತೃಪ್ತಿಗಾಗಿ ಇನ್ನಷ್ಟು ಕಾಲ ಕ್ರಿಕೆಟ್ ಅಡುತ್ತೇನೆ ಎಂದು ಹೇಳುವ ಮೂಲಕ ನಿವೃತ್ತಿಯ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.
ಮುಂದೆ ನಿವೃತ್ತಿಯಾದಾಗ ಏನು ಮಾಡುವಿರಿ ಎಂದು ಬಹಳ ಜನ ಕೇಳುತ್ತಾರೆ. ಅದರ ಬಗ್ಗೆ ನಾನು ಏನೂ ಯೋಜಿಸಿಲ್ಲ. ನಾನು ಯಾವಾಗಲೂ ಹೃದಯದ ಮಾತನ್ನು ಕೇಳುತ್ತೇನೆ. ನೆಮ್ಮದಿಗೆ ಬೇಕಾಗುವಷ್ಟು ಹಣ ಗಳಿಸುತ್ತೇನೆ. ಅದಕ್ಕಾಗಿ ಮೌಲ್ಯಗಳನ್ನು ಬಿಡುವುದಿಲ್ಲ ಎಂದರು.
ನಾನು ವೃತ್ತಿ ಜೀವನದ ವಿಭಿನ್ನ ಹಂತದಲ್ಲಿ ಇದ್ದೇನೆ. 20ರ ವಯಸ್ಸಿನಲ್ಲಿ ನೀವು ಮಾಡಬಹುದಾದಷ್ಟು ಕೆಲಸಗಳನ್ನು ನಿಮ್ಮ 30ರ ವಯಸ್ಸಿನಲ್ಲಿ ಮಾಡಲು ಸಾಧ್ಯವಿಲ್ಲ. ಶಕ್ತಿ ಮೀರಿ ಪ್ರದರ್ಶನ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದ ಬಳಿಕ ಚುಟುಕು ಕ್ರಿಕೆಟ್ಗೆ ವಿರಾಟ್ ನಿವೃತ್ತಿ ಘೋಷಿಸಿದ್ದರು.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…