ಬೆಂಗಳೂರು: ನಾನು ಕ್ರಿಕೆಟ್ ಆಟವನ್ನು ಬಹಳ ಪ್ರೀತಿಸುತ್ತೇನೆ. ನನ್ನಲ್ಲಿನ ಸ್ಪರ್ಧಾತ್ಮಕ ಪ್ರವೃತ್ತಿ ಜೀವಂತ ಇರುವವರೆಗೂ ನಿವೃತ್ತಿ ಘೋಷಿಸುವುದಿಲ್ಲ ಎಂದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೇಳಿದ್ದಾರೆ.
ನಾನು ಕ್ರಿಕೆಟ್ ಆಟವನ್ನು ಆನಂದಿಸುತ್ತಿದ್ದು, ನನ್ನ ಆತ್ಮತೃಪ್ತಿಗಾಗಿ ಇನ್ನಷ್ಟು ಕಾಲ ಕ್ರಿಕೆಟ್ ಅಡುತ್ತೇನೆ ಎಂದು ಹೇಳುವ ಮೂಲಕ ನಿವೃತ್ತಿಯ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.
ಮುಂದೆ ನಿವೃತ್ತಿಯಾದಾಗ ಏನು ಮಾಡುವಿರಿ ಎಂದು ಬಹಳ ಜನ ಕೇಳುತ್ತಾರೆ. ಅದರ ಬಗ್ಗೆ ನಾನು ಏನೂ ಯೋಜಿಸಿಲ್ಲ. ನಾನು ಯಾವಾಗಲೂ ಹೃದಯದ ಮಾತನ್ನು ಕೇಳುತ್ತೇನೆ. ನೆಮ್ಮದಿಗೆ ಬೇಕಾಗುವಷ್ಟು ಹಣ ಗಳಿಸುತ್ತೇನೆ. ಅದಕ್ಕಾಗಿ ಮೌಲ್ಯಗಳನ್ನು ಬಿಡುವುದಿಲ್ಲ ಎಂದರು.
ನಾನು ವೃತ್ತಿ ಜೀವನದ ವಿಭಿನ್ನ ಹಂತದಲ್ಲಿ ಇದ್ದೇನೆ. 20ರ ವಯಸ್ಸಿನಲ್ಲಿ ನೀವು ಮಾಡಬಹುದಾದಷ್ಟು ಕೆಲಸಗಳನ್ನು ನಿಮ್ಮ 30ರ ವಯಸ್ಸಿನಲ್ಲಿ ಮಾಡಲು ಸಾಧ್ಯವಿಲ್ಲ. ಶಕ್ತಿ ಮೀರಿ ಪ್ರದರ್ಶನ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದ ಬಳಿಕ ಚುಟುಕು ಕ್ರಿಕೆಟ್ಗೆ ವಿರಾಟ್ ನಿವೃತ್ತಿ ಘೋಷಿಸಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…