ಕ್ರೀಡೆ

ನಿವೃತ್ತಿ ಸದ್ಯಕ್ಕಿಲ್ಲ: ವಿರಾಟ್‌ ಕೊಹ್ಲಿ

ಬೆಂಗಳೂರು: ನಾನು ಕ್ರಿಕೆಟ್‌ ಆಟವನ್ನು ಬಹಳ ಪ್ರೀತಿಸುತ್ತೇನೆ. ನನ್ನಲ್ಲಿನ ಸ್ಪರ್ಧಾತ್ಮಕ ಪ್ರವೃತ್ತಿ ಜೀವಂತ ಇರುವವರೆಗೂ ನಿವೃತ್ತಿ ಘೋಷಿಸುವುದಿಲ್ಲ ಎಂದು ಭಾರತದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ನಾನು ಕ್ರಿಕೆಟ್‌ ಆಟವನ್ನು ಆನಂದಿಸುತ್ತಿದ್ದು, ನನ್ನ ಆತ್ಮತೃಪ್ತಿಗಾಗಿ ಇನ್ನಷ್ಟು ಕಾಲ ಕ್ರಿಕೆಟ್‌ ಅಡುತ್ತೇನೆ ಎಂದು ಹೇಳುವ ಮೂಲಕ ನಿವೃತ್ತಿಯ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

ಮುಂದೆ ನಿವೃತ್ತಿಯಾದಾಗ ಏನು ಮಾಡುವಿರಿ ಎಂದು ಬಹಳ ಜನ ಕೇಳುತ್ತಾರೆ. ಅದರ ಬಗ್ಗೆ ನಾನು ಏನೂ ಯೋಜಿಸಿಲ್ಲ. ನಾನು ಯಾವಾಗಲೂ ಹೃದಯದ ಮಾತನ್ನು ಕೇಳುತ್ತೇನೆ. ನೆಮ್ಮದಿಗೆ ಬೇಕಾಗುವಷ್ಟು ಹಣ ಗಳಿಸುತ್ತೇನೆ. ಅದಕ್ಕಾಗಿ ಮೌಲ್ಯಗಳನ್ನು ಬಿಡುವುದಿಲ್ಲ ಎಂದರು.

ನಾನು ವೃತ್ತಿ ಜೀವನದ ವಿಭಿನ್ನ ಹಂತದಲ್ಲಿ ಇದ್ದೇನೆ. 20ರ ವಯಸ್ಸಿನಲ್ಲಿ ನೀವು ಮಾಡಬಹುದಾದಷ್ಟು ಕೆಲಸಗಳನ್ನು ನಿಮ್ಮ 30ರ ವಯಸ್ಸಿನಲ್ಲಿ ಮಾಡಲು ಸಾಧ್ಯವಿಲ್ಲ. ಶಕ್ತಿ ಮೀರಿ ಪ್ರದರ್ಶನ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಟಿ20 ವಿಶ್ವಕಪ್‌ ಗೆದ್ದ ಬಳಿಕ ಚುಟುಕು ಕ್ರಿಕೆಟ್‌ಗೆ ವಿರಾಟ್‌ ನಿವೃತ್ತಿ ಘೋಷಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

7 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

8 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

8 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

8 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

8 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

9 hours ago