ಬೆಂಗಳೂರು: ನಾನು ಕ್ರಿಕೆಟ್ ಆಟವನ್ನು ಬಹಳ ಪ್ರೀತಿಸುತ್ತೇನೆ. ನನ್ನಲ್ಲಿನ ಸ್ಪರ್ಧಾತ್ಮಕ ಪ್ರವೃತ್ತಿ ಜೀವಂತ ಇರುವವರೆಗೂ ನಿವೃತ್ತಿ ಘೋಷಿಸುವುದಿಲ್ಲ ಎಂದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೇಳಿದ್ದಾರೆ.
ನಾನು ಕ್ರಿಕೆಟ್ ಆಟವನ್ನು ಆನಂದಿಸುತ್ತಿದ್ದು, ನನ್ನ ಆತ್ಮತೃಪ್ತಿಗಾಗಿ ಇನ್ನಷ್ಟು ಕಾಲ ಕ್ರಿಕೆಟ್ ಅಡುತ್ತೇನೆ ಎಂದು ಹೇಳುವ ಮೂಲಕ ನಿವೃತ್ತಿಯ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.
ಮುಂದೆ ನಿವೃತ್ತಿಯಾದಾಗ ಏನು ಮಾಡುವಿರಿ ಎಂದು ಬಹಳ ಜನ ಕೇಳುತ್ತಾರೆ. ಅದರ ಬಗ್ಗೆ ನಾನು ಏನೂ ಯೋಜಿಸಿಲ್ಲ. ನಾನು ಯಾವಾಗಲೂ ಹೃದಯದ ಮಾತನ್ನು ಕೇಳುತ್ತೇನೆ. ನೆಮ್ಮದಿಗೆ ಬೇಕಾಗುವಷ್ಟು ಹಣ ಗಳಿಸುತ್ತೇನೆ. ಅದಕ್ಕಾಗಿ ಮೌಲ್ಯಗಳನ್ನು ಬಿಡುವುದಿಲ್ಲ ಎಂದರು.
ನಾನು ವೃತ್ತಿ ಜೀವನದ ವಿಭಿನ್ನ ಹಂತದಲ್ಲಿ ಇದ್ದೇನೆ. 20ರ ವಯಸ್ಸಿನಲ್ಲಿ ನೀವು ಮಾಡಬಹುದಾದಷ್ಟು ಕೆಲಸಗಳನ್ನು ನಿಮ್ಮ 30ರ ವಯಸ್ಸಿನಲ್ಲಿ ಮಾಡಲು ಸಾಧ್ಯವಿಲ್ಲ. ಶಕ್ತಿ ಮೀರಿ ಪ್ರದರ್ಶನ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದ ಬಳಿಕ ಚುಟುಕು ಕ್ರಿಕೆಟ್ಗೆ ವಿರಾಟ್ ನಿವೃತ್ತಿ ಘೋಷಿಸಿದ್ದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…