ಕೊಯಂಬತ್ತೂರು: ಭಾರತ ತಂಡದ ಸ್ಪಿನ್ ಬೌಲರ್ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಆಡುತ್ತಿದ್ದಾರೆ. ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕರಾಗಿರುವ ಅಶ್ವಿನ್ ಇದೀಗ ವಿಚಿತ್ರ ಕಾರಣದಿಂದ ಸುದ್ದಿಯಾಗಿದ್ದಾರೆ.
ತಿರುಚ್ಚಿ ವಿರುದ್ಧದ ಪಂದ್ಯದಲ್ಲಿ ಒಂದೇ ಎಸೆತದಲ್ಲಿ ಎರಡು ಬಾರಿ ರಿವೀವ್ ಪಡೆಯಲಾಗಿದೆ. ಒಮ್ಮೆ ರಿವೀವ್ ಪಡೆದು ಮೂರನೇ ಅಂಪೈರ್ ನಿರ್ಧಾರ ಪ್ರಕಟಿಸಿದ ಬಳಿಕ ಆ ತೀರ್ಪಿನ ವಿರುದ್ಧವೇ ಮತ್ತೊಮ್ಮೆ ರಿವೀವ್ ಮಾಡಲಾಗಿದೆ.
ತಿರುಚ್ಚಿ ಆಟಗಾರ ರಾಜಕುಮಾರ್ ಅವರಿಗೆ ಅಶ್ವಿನ್ ಎಸೆದ ಚೆಂಡು ವಿಕೆಟ್ ಕೀಪರ್ ಗ್ಲೌಸ್ ಸೇರಿತು. ಮೈದಾನದ ಅಂಪೈರ್ ಔಟ್ ನೀಡಿದರು. ಆದರೆ ಬ್ಯಾಟರ್ ರಾಜಕುಮಾರ್ ಡಿಆರ್ ಎಸ್ ಮನವಿ ಮಾಡಿದರು. ಟಿವಿ ಅಂಪೈರ್ ಪರಿಶೀಲನೆ ಮಾಡುವಾಗ ಬ್ಯಾಟ್ ಚೆಂಡಿಗೆ ಬಡಿಯದೆ, ನೆಲಕ್ಕೆ ತಾಗಿದ್ದು ಸ್ಪಷ್ಟವಾಗಿತ್ತು. ಹೀಗಾಗಿ ಅವರು ಔಟ್ ತೀರ್ಮಾನವನ್ನು ಬದಲಿಸಿ ನಾಟೌಟ್ ಎಂದರು.
ಮೂರನೇ ಅಂಪೈರ್ ನಾಟೌಟ್ ಎಂದ ಕೂಡಲೇ ಆಕ್ರೋಶಗೊಂಡ ಅಶ್ವಿನ್ ಮತ್ತೆ ಮತ್ತೆ ಡಿಆರ್ ಎಸ್ ಕೇಳಿದರು. ಟಿವಿ ಅಂಪೈರ್ ಮತ್ತೆ ಪರಿಶೀಲನೆ ನಡೆಸಿ ನಾಟೌಟ್ ತೀರ್ಪು ನೀಡಿದರು.
ಪಂದ್ಯದ ಬಳಿಕ ಇದರ ಬಗ್ಗೆ ಮಾತನಾಡಿದ ಅಶ್ವಿನ್, “ಟೂರ್ನಮೆಂಟ್ ನಲ್ಲಿ ಡಿಆರ್ ಎಸ್ ಹೊಸದು. ಚೆಂಡು ಬ್ಯಾಟ್ ನಿಂದ ಹಾದುಹೋಗುವ ಮೊದಲು ಸ್ಪೈಕ್ ಇತ್ತು. ನನಗೆ ಸಂತೋಷವಾಗಲಿಲ್ಲ, ಅವರು ಬೇರೆ ಕೋನದಲ್ಲಿ ನೋಡುತ್ತಾರೆ ಎಂದು ನಾನು ಭಾವಿಸಿದೆ” ಎಂದು ಹೇಳಿದರು.
ಇದರ ಹೊರತಾಗಿಯೂ ಅಶ್ವಿನ್ ನಾಯಕತ್ವದ ದಿಂಡಿಗಲ್ ತಂಡವು ಆರು ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಿರುಚ್ಚಿ 19.1 ಓವರ್ ನಲ್ಲಿ 120 ರನ್ ಗೆ ಆಲೌಟಾದರೆ, ದಿಂಡಿಗಲ್ ತಂಡವು 14.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಸಾಧಿಸಿತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…