ಕೊಯಂಬತ್ತೂರು: ಭಾರತ ತಂಡದ ಸ್ಪಿನ್ ಬೌಲರ್ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಆಡುತ್ತಿದ್ದಾರೆ. ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕರಾಗಿರುವ ಅಶ್ವಿನ್ ಇದೀಗ ವಿಚಿತ್ರ ಕಾರಣದಿಂದ ಸುದ್ದಿಯಾಗಿದ್ದಾರೆ.
ತಿರುಚ್ಚಿ ವಿರುದ್ಧದ ಪಂದ್ಯದಲ್ಲಿ ಒಂದೇ ಎಸೆತದಲ್ಲಿ ಎರಡು ಬಾರಿ ರಿವೀವ್ ಪಡೆಯಲಾಗಿದೆ. ಒಮ್ಮೆ ರಿವೀವ್ ಪಡೆದು ಮೂರನೇ ಅಂಪೈರ್ ನಿರ್ಧಾರ ಪ್ರಕಟಿಸಿದ ಬಳಿಕ ಆ ತೀರ್ಪಿನ ವಿರುದ್ಧವೇ ಮತ್ತೊಮ್ಮೆ ರಿವೀವ್ ಮಾಡಲಾಗಿದೆ.
ತಿರುಚ್ಚಿ ಆಟಗಾರ ರಾಜಕುಮಾರ್ ಅವರಿಗೆ ಅಶ್ವಿನ್ ಎಸೆದ ಚೆಂಡು ವಿಕೆಟ್ ಕೀಪರ್ ಗ್ಲೌಸ್ ಸೇರಿತು. ಮೈದಾನದ ಅಂಪೈರ್ ಔಟ್ ನೀಡಿದರು. ಆದರೆ ಬ್ಯಾಟರ್ ರಾಜಕುಮಾರ್ ಡಿಆರ್ ಎಸ್ ಮನವಿ ಮಾಡಿದರು. ಟಿವಿ ಅಂಪೈರ್ ಪರಿಶೀಲನೆ ಮಾಡುವಾಗ ಬ್ಯಾಟ್ ಚೆಂಡಿಗೆ ಬಡಿಯದೆ, ನೆಲಕ್ಕೆ ತಾಗಿದ್ದು ಸ್ಪಷ್ಟವಾಗಿತ್ತು. ಹೀಗಾಗಿ ಅವರು ಔಟ್ ತೀರ್ಮಾನವನ್ನು ಬದಲಿಸಿ ನಾಟೌಟ್ ಎಂದರು.
ಮೂರನೇ ಅಂಪೈರ್ ನಾಟೌಟ್ ಎಂದ ಕೂಡಲೇ ಆಕ್ರೋಶಗೊಂಡ ಅಶ್ವಿನ್ ಮತ್ತೆ ಮತ್ತೆ ಡಿಆರ್ ಎಸ್ ಕೇಳಿದರು. ಟಿವಿ ಅಂಪೈರ್ ಮತ್ತೆ ಪರಿಶೀಲನೆ ನಡೆಸಿ ನಾಟೌಟ್ ತೀರ್ಪು ನೀಡಿದರು.
ಪಂದ್ಯದ ಬಳಿಕ ಇದರ ಬಗ್ಗೆ ಮಾತನಾಡಿದ ಅಶ್ವಿನ್, “ಟೂರ್ನಮೆಂಟ್ ನಲ್ಲಿ ಡಿಆರ್ ಎಸ್ ಹೊಸದು. ಚೆಂಡು ಬ್ಯಾಟ್ ನಿಂದ ಹಾದುಹೋಗುವ ಮೊದಲು ಸ್ಪೈಕ್ ಇತ್ತು. ನನಗೆ ಸಂತೋಷವಾಗಲಿಲ್ಲ, ಅವರು ಬೇರೆ ಕೋನದಲ್ಲಿ ನೋಡುತ್ತಾರೆ ಎಂದು ನಾನು ಭಾವಿಸಿದೆ” ಎಂದು ಹೇಳಿದರು.
ಇದರ ಹೊರತಾಗಿಯೂ ಅಶ್ವಿನ್ ನಾಯಕತ್ವದ ದಿಂಡಿಗಲ್ ತಂಡವು ಆರು ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಿರುಚ್ಚಿ 19.1 ಓವರ್ ನಲ್ಲಿ 120 ರನ್ ಗೆ ಆಲೌಟಾದರೆ, ದಿಂಡಿಗಲ್ ತಂಡವು 14.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಸಾಧಿಸಿತು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…