ಕೊಯಂಬತ್ತೂರು: ಭಾರತ ತಂಡದ ಸ್ಪಿನ್ ಬೌಲರ್ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಆಡುತ್ತಿದ್ದಾರೆ. ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕರಾಗಿರುವ ಅಶ್ವಿನ್ ಇದೀಗ ವಿಚಿತ್ರ ಕಾರಣದಿಂದ ಸುದ್ದಿಯಾಗಿದ್ದಾರೆ.
ತಿರುಚ್ಚಿ ವಿರುದ್ಧದ ಪಂದ್ಯದಲ್ಲಿ ಒಂದೇ ಎಸೆತದಲ್ಲಿ ಎರಡು ಬಾರಿ ರಿವೀವ್ ಪಡೆಯಲಾಗಿದೆ. ಒಮ್ಮೆ ರಿವೀವ್ ಪಡೆದು ಮೂರನೇ ಅಂಪೈರ್ ನಿರ್ಧಾರ ಪ್ರಕಟಿಸಿದ ಬಳಿಕ ಆ ತೀರ್ಪಿನ ವಿರುದ್ಧವೇ ಮತ್ತೊಮ್ಮೆ ರಿವೀವ್ ಮಾಡಲಾಗಿದೆ.
ತಿರುಚ್ಚಿ ಆಟಗಾರ ರಾಜಕುಮಾರ್ ಅವರಿಗೆ ಅಶ್ವಿನ್ ಎಸೆದ ಚೆಂಡು ವಿಕೆಟ್ ಕೀಪರ್ ಗ್ಲೌಸ್ ಸೇರಿತು. ಮೈದಾನದ ಅಂಪೈರ್ ಔಟ್ ನೀಡಿದರು. ಆದರೆ ಬ್ಯಾಟರ್ ರಾಜಕುಮಾರ್ ಡಿಆರ್ ಎಸ್ ಮನವಿ ಮಾಡಿದರು. ಟಿವಿ ಅಂಪೈರ್ ಪರಿಶೀಲನೆ ಮಾಡುವಾಗ ಬ್ಯಾಟ್ ಚೆಂಡಿಗೆ ಬಡಿಯದೆ, ನೆಲಕ್ಕೆ ತಾಗಿದ್ದು ಸ್ಪಷ್ಟವಾಗಿತ್ತು. ಹೀಗಾಗಿ ಅವರು ಔಟ್ ತೀರ್ಮಾನವನ್ನು ಬದಲಿಸಿ ನಾಟೌಟ್ ಎಂದರು.
ಮೂರನೇ ಅಂಪೈರ್ ನಾಟೌಟ್ ಎಂದ ಕೂಡಲೇ ಆಕ್ರೋಶಗೊಂಡ ಅಶ್ವಿನ್ ಮತ್ತೆ ಮತ್ತೆ ಡಿಆರ್ ಎಸ್ ಕೇಳಿದರು. ಟಿವಿ ಅಂಪೈರ್ ಮತ್ತೆ ಪರಿಶೀಲನೆ ನಡೆಸಿ ನಾಟೌಟ್ ತೀರ್ಪು ನೀಡಿದರು.
ಪಂದ್ಯದ ಬಳಿಕ ಇದರ ಬಗ್ಗೆ ಮಾತನಾಡಿದ ಅಶ್ವಿನ್, “ಟೂರ್ನಮೆಂಟ್ ನಲ್ಲಿ ಡಿಆರ್ ಎಸ್ ಹೊಸದು. ಚೆಂಡು ಬ್ಯಾಟ್ ನಿಂದ ಹಾದುಹೋಗುವ ಮೊದಲು ಸ್ಪೈಕ್ ಇತ್ತು. ನನಗೆ ಸಂತೋಷವಾಗಲಿಲ್ಲ, ಅವರು ಬೇರೆ ಕೋನದಲ್ಲಿ ನೋಡುತ್ತಾರೆ ಎಂದು ನಾನು ಭಾವಿಸಿದೆ” ಎಂದು ಹೇಳಿದರು.
ಇದರ ಹೊರತಾಗಿಯೂ ಅಶ್ವಿನ್ ನಾಯಕತ್ವದ ದಿಂಡಿಗಲ್ ತಂಡವು ಆರು ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಿರುಚ್ಚಿ 19.1 ಓವರ್ ನಲ್ಲಿ 120 ರನ್ ಗೆ ಆಲೌಟಾದರೆ, ದಿಂಡಿಗಲ್ ತಂಡವು 14.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಸಾಧಿಸಿತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…