ಕ್ರೀಡೆ

ಒಂದೇ ಎಸೆತದಲ್ಲಿ ಎರಡು ಬಾರಿ ರಿವೀವ್; ಅಶ್ವಿನ್ ವಿಚಿತ್ರ ನಿರ್ಧಾರ

ಕೊಯಂಬತ್ತೂರು: ಭಾರತ ತಂಡದ ಸ್ಪಿನ್ ಬೌಲರ್ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಆಡುತ್ತಿದ್ದಾರೆ. ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕರಾಗಿರುವ ಅಶ್ವಿನ್ ಇದೀಗ ವಿಚಿತ್ರ ಕಾರಣದಿಂದ ಸುದ್ದಿಯಾಗಿದ್ದಾರೆ.

ತಿರುಚ್ಚಿ ವಿರುದ್ಧದ ಪಂದ್ಯದಲ್ಲಿ ಒಂದೇ ಎಸೆತದಲ್ಲಿ ಎರಡು ಬಾರಿ ರಿವೀವ್ ಪಡೆಯಲಾಗಿದೆ. ಒಮ್ಮೆ ರಿವೀವ್ ಪಡೆದು ಮೂರನೇ ಅಂಪೈರ್ ನಿರ್ಧಾರ ಪ್ರಕಟಿಸಿದ ಬಳಿಕ ಆ ತೀರ್ಪಿನ ವಿರುದ್ಧವೇ ಮತ್ತೊಮ್ಮೆ ರಿವೀವ್ ಮಾಡಲಾಗಿದೆ.

ತಿರುಚ್ಚಿ ಆಟಗಾರ ರಾಜಕುಮಾರ್ ಅವರಿಗೆ ಅಶ್ವಿನ್ ಎಸೆದ ಚೆಂಡು ವಿಕೆಟ್ ಕೀಪರ್ ಗ್ಲೌಸ್ ಸೇರಿತು. ಮೈದಾನದ ಅಂಪೈರ್ ಔಟ್ ನೀಡಿದರು. ಆದರೆ ಬ್ಯಾಟರ್ ರಾಜಕುಮಾರ್ ಡಿಆರ್ ಎಸ್ ಮನವಿ ಮಾಡಿದರು. ಟಿವಿ ಅಂಪೈರ್ ಪರಿಶೀಲನೆ ಮಾಡುವಾಗ ಬ್ಯಾಟ್ ಚೆಂಡಿಗೆ ಬಡಿಯದೆ, ನೆಲಕ್ಕೆ ತಾಗಿದ್ದು ಸ್ಪಷ್ಟವಾಗಿತ್ತು. ಹೀಗಾಗಿ ಅವರು ಔಟ್ ತೀರ್ಮಾನವನ್ನು ಬದಲಿಸಿ ನಾಟೌಟ್ ಎಂದರು.

ಮೂರನೇ ಅಂಪೈರ್ ನಾಟೌಟ್ ಎಂದ ಕೂಡಲೇ ಆಕ್ರೋಶಗೊಂಡ ಅಶ್ವಿನ್ ಮತ್ತೆ ಮತ್ತೆ ಡಿಆರ್ ಎಸ್ ಕೇಳಿದರು. ಟಿವಿ ಅಂಪೈರ್ ಮತ್ತೆ ಪರಿಶೀಲನೆ ನಡೆಸಿ ನಾಟೌಟ್ ತೀರ್ಪು ನೀಡಿದರು.

ಪಂದ್ಯದ ಬಳಿಕ ಇದರ ಬಗ್ಗೆ ಮಾತನಾಡಿದ ಅಶ್ವಿನ್, “ಟೂರ್ನಮೆಂಟ್‌ ನಲ್ಲಿ ಡಿಆರ್‌ ಎಸ್ ಹೊಸದು. ಚೆಂಡು ಬ್ಯಾಟ್‌ ನಿಂದ ಹಾದುಹೋಗುವ ಮೊದಲು ಸ್ಪೈಕ್ ಇತ್ತು. ನನಗೆ ಸಂತೋಷವಾಗಲಿಲ್ಲ, ಅವರು ಬೇರೆ ಕೋನದಲ್ಲಿ ನೋಡುತ್ತಾರೆ ಎಂದು ನಾನು ಭಾವಿಸಿದೆ” ಎಂದು ಹೇಳಿದರು.

ಇದರ ಹೊರತಾಗಿಯೂ ಅಶ್ವಿನ್ ನಾಯಕತ್ವದ ದಿಂಡಿಗಲ್ ತಂಡವು ಆರು ವಿಕೆಟ್ ಅಂತರದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಿರುಚ್ಚಿ 19.1 ಓವರ್ ನಲ್ಲಿ 120 ರನ್ ಗೆ ಆಲೌಟಾದರೆ, ದಿಂಡಿಗಲ್ ತಂಡವು 14.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಸಾಧಿಸಿತು.

andolanait

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

11 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

20 mins ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

30 mins ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

1 hour ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

2 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

3 hours ago