ನವದೆಹಲಿ: ಕಾರು ಅಪಘಾತದ ನಂತರ ಭಾರತ ತಂಡದ ವಿಕೆಟ್ ಕೀಪರ್ ಕಂ ಬ್ಯಾಟರ್ ರಿಷಭ್ ಪಂತ್ ಅವರನ್ನು ವರ್ಷದ ಪುನರಾಗಮನ ವಿಭಾಗದಲ್ಲಿ ಲಾರಿಯಸ್ ವರ್ಲ್ಡ್ ಕಂಬ್ಯಾಕ್ ಪ್ರಶಸ್ತಿ-2025ಕ್ಕೆ ನಾಮನಿರ್ದೇಶನ ಮಾಡಲಾಗಿದೆ.
2022ರ ಡಿಸೆಂಬರ್ 30 ರಂದು ದೆಹಲಿಯಿಂದ ತಮ್ಮ ಊರಿಗೆ ಹೋಗುವಾಗ ಪಂತ್ ಭೀಕರ ಅಪಘಾತಕ್ಕೆ ಒಳಗಾಗಿದ್ದರು.
ಅವರ ಮೊಣಕಾಲಿನಲ್ಲಿ ಮೂರು ಅಸ್ಥಿರಜ್ಜುಗಳನ್ನು ಪುನರ್ನಿರ್ಮಿಸಲು ಶಸ್ತ್ರ ಚಿಕಿತ್ಸೆಗಳು ನಡೆದ ನಂತರ, ಬೆಂಗಳೂರಿನ ಅಂತರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಂಡಿದ್ದರು.
ನಂತರ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಪುನರಾಗಮನ ಮಾಡಿದ್ದರು. ಆದಾದ ಬಳಿಕ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಅಮೋಘ ಶತಕ ಗಳಿಸುವ ಮೂಲಕ ಭಾರತ ತಂಡ ಗೆಲುವಿನಲ್ಲಿ ಪ್ರಮಖ ಪಾತ್ರವಹಿಸಿದ್ದರು.
ಲಾರಿಯಸ್ ವರ್ಲ್ಡ್ ಸ್ಪೋರ್ಟ್ಸ್ ಪ್ರಶಸ್ತಿ ಪ್ರಧಾನ ಸಮಾರಂಭ ಏಪ್ರಿಲ್ 21 ರಂದು ಮ್ಯಾಡ್ರಿಡ್ನಲ್ಲಿ ನಡೆಯಲಿದೆ.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…