ನವದೆಹಲಿ: ಕಾರು ಅಪಘಾತದ ನಂತರ ಭಾರತ ತಂಡದ ವಿಕೆಟ್ ಕೀಪರ್ ಕಂ ಬ್ಯಾಟರ್ ರಿಷಭ್ ಪಂತ್ ಅವರನ್ನು ವರ್ಷದ ಪುನರಾಗಮನ ವಿಭಾಗದಲ್ಲಿ ಲಾರಿಯಸ್ ವರ್ಲ್ಡ್ ಕಂಬ್ಯಾಕ್ ಪ್ರಶಸ್ತಿ-2025ಕ್ಕೆ ನಾಮನಿರ್ದೇಶನ ಮಾಡಲಾಗಿದೆ.
2022ರ ಡಿಸೆಂಬರ್ 30 ರಂದು ದೆಹಲಿಯಿಂದ ತಮ್ಮ ಊರಿಗೆ ಹೋಗುವಾಗ ಪಂತ್ ಭೀಕರ ಅಪಘಾತಕ್ಕೆ ಒಳಗಾಗಿದ್ದರು.
ಅವರ ಮೊಣಕಾಲಿನಲ್ಲಿ ಮೂರು ಅಸ್ಥಿರಜ್ಜುಗಳನ್ನು ಪುನರ್ನಿರ್ಮಿಸಲು ಶಸ್ತ್ರ ಚಿಕಿತ್ಸೆಗಳು ನಡೆದ ನಂತರ, ಬೆಂಗಳೂರಿನ ಅಂತರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಂಡಿದ್ದರು.
ನಂತರ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಪುನರಾಗಮನ ಮಾಡಿದ್ದರು. ಆದಾದ ಬಳಿಕ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಅಮೋಘ ಶತಕ ಗಳಿಸುವ ಮೂಲಕ ಭಾರತ ತಂಡ ಗೆಲುವಿನಲ್ಲಿ ಪ್ರಮಖ ಪಾತ್ರವಹಿಸಿದ್ದರು.
ಲಾರಿಯಸ್ ವರ್ಲ್ಡ್ ಸ್ಪೋರ್ಟ್ಸ್ ಪ್ರಶಸ್ತಿ ಪ್ರಧಾನ ಸಮಾರಂಭ ಏಪ್ರಿಲ್ 21 ರಂದು ಮ್ಯಾಡ್ರಿಡ್ನಲ್ಲಿ ನಡೆಯಲಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…