ಕ್ರೀಡೆ

Paris Olympics 2024: ಸೆಮಿ ಫೈನಲ್ಸ್‌ ತಲುಪುವಲ್ಲಿ ವಿಫಲರಾದ ರಿತಿಕಾ ಹೂಡಾ

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತದ ರಿತಿಕಾ ಹೂಡಾ ಅವರು ಮಹಿಳೆಯರ ಕುಸ್ತಿ 76 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಸೆಮಿ ಫೈನಲ್ಸ್‌ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ.

ಕ್ವಾರ್ಟರ್‌ ಫೈನಲ್ಸ್‌ನಲ್ಲಿ ಕಿರ್ಗಿಸ್ತಾನ್‌ನ ಐಪೆರಿ ಮೆಡೆಟ್‌ ಕಿಝಿ ವಿರುದ್ಧ 1-1 ಅಂಕಗಳ ಸಮಬಲದೊಂದಿಗೆ ಹೋರಾಟ ಮಾಡಿದ್ದರ ಹೊರತಾಗಿಯೂ ರಿತಿಕಾ ಹೂಡಾ ಸೋಲನುಭವಿಸಿದರು.

ಈ ಇಬ್ಬರು ಕುಸ್ತಿಪಟುಗಳು ಸಮಬಲ ಸಾಧಿಸಿದರು. ಆರು ನಿಮಿಷಗಳ ನಿರಂತರ ಕಾದಾಟ ಬಳಿಕ ಕುಸ್ತಿ ನಿಯಮದ ಅನ್ವಯ ಮೆಡೆಟ್‌ ಗೆಲುವು ಸಾಧಿಸಿ ಸೆಮಿಸ್‌ಗೆ ಅರ್ಹತೆ ಪಡೆದುಕೊಂಡರು.

ಸೆಮಿಸ್‌ನಲ್ಲಿ ಮೆಡೆಟ್‌ ಗೆದ್ದು, ಫೈನಲ್ಸ್‌ ತಲುಪಿದರೆ, ರಿತಿಕಾ ಅವರಿಗೆ ರೆಪಷಾಚ್‌ ನಿಯಮದಡಿ ಸ್ಪರ್ಧಿಸುವ ಮತ್ತೊಂದು ಅವಕಾಶ ಸಿಗಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

47 mins ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

2 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

2 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

3 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

3 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

3 hours ago