ಮಹಾರಾಷ್ಟ್ರ: ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್ ನಲ್ಲಿ ಬ್ಯಾಟಿಂಗ್ ನಿಂದ ಸ್ಪೋಟಕ ಆಟವನ್ನಾಡಿದ ಋತುರಾಜ್ ಐಪಿಎಲ್ ಮುಗಿದ ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ವಿಶೇಷವೆಂದರೆ ಋತ್ರಾಜ್ ಅವರ ಪತ್ನಿ ಕೂಡ ಕ್ರಿಕೆಟ್ ಆಟಗಾರ್ತಿ ಆಗಿದ್ದು, 24 ವರ್ಷದ ಉತ್ಕರ್ಷ ದೇಶಿಯ ತಂಡದಲ್ಲಿ ಆಡಿದ್ದಾರೆ. ಮಹಾರಾಷ್ಟ್ರದ ಪರವಾಗಿ ದೇಶಿಯ ಟೂರ್ನಿಯಲ್ಲಿ ಉತ್ಕರ್ಷ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚೆನ್ನೈ ಐಪಿಎಲ್ ಟ್ರೋಫಿ ಗೆದ್ದ ಬಳಿಕ ಮೈದಾನದಲ್ಲಿ ಋತುರಾಜ್ ಹಾಗೂ ಧೋನಿ ಅವರೊಂದಿಗೆ ಫೋಟೋಗೆ ಪೋಸ್ ಕೊಟ್ಟು ಅದನ್ನು ಪೋಸ್ಟ್ ಮಾಡಿದ್ದರು.
ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿರುವ ರುತ್ರಾಜ್ “From the pitch to the altar, our journey begins!” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಹಾಗೂ ಇತರ ಆಟಗಾರರು ಕಮೆಂಟ್ ಮಾಡಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ನ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…
ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…